ಪ್ರತ್ಯೇಕ ಪ್ರಕರಣ: ಕೆರೆಯಲ್ಲಿ ಮುಳುಗಿ ಆರು ಮಂದಿ ಸಾವು
Team Udayavani, Oct 9, 2019, 3:04 AM IST
ಚಿಕ್ಕಮಗಳೂರು/ಹಾಸನ: ಪ್ರತ್ಯೇಕ ಪ್ರಕರಣದಲ್ಲಿ ಈಜಲು ಹೋಗಿದ್ದ ಆರು ಮಂದಿ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ ಗ್ರಾಮದಲ್ಲಿ ಸೋಮವಾರ ಆಯುಧ ಪೂಜೆ ಮುಗಿಸಿಕೊಂಡು ಕೆಂದಿನಕಟ್ಟೆ ಕೆರೆಯಲ್ಲಿ ಈಜಲು ಹೋಗಿದ್ದ ನಗರದ ಹೌಸಿಂಗ್ ಬೋರ್ಡ್ ನಿವಾಸಿಗಳಾದ ಜೀವಿತ್(14), ಮುರುಳಿ ಕಾರ್ತಿಕ್(15) ಮತ್ತು ಚಿರಾಗ್(16) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮುರಳಿ ಕಾರ್ತಿಕ್ ಮತ್ತು ಜೀವಿತ್ ನಗರದ ಬಿಜಿಎಸ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದರು. ಚಿರಾಗ್ ಸಾಯಿ ಏಂಜೆಲ್ಸ್ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಸಂಜೆಯೇ ಮುರಳಿ ಕಾರ್ತಿಕ್ ಹಾಗೂ ಜೀವಿತ್ ಮೃತದೇಹ ಪತ್ತೆಯಾಗಿತ್ತು. ಆದರೆ, ಚಿರಾಗ್ ದೇಹ ಪತ್ತೆಯಾಗಿರಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ನಂತರ ಮಂಗಳವಾರ ಬೆಳಗ್ಗೆ ಆತನ ದೇಹ ಪತ್ತೆಯಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ ಜಿಲ್ಲೆ ಆಲೂರು ತಾಲೂಕಿನ ಹುಣಸುವಳ್ಳಿ ಗ್ರಾಮದ ಸಮೀಪ ಹಾದುಹೋಗಿರುವ ಯಗಚಿ ನದಿಯಲ್ಲಿ ಈಜಲು ಹೋಗಿದ್ದ ಹುಣಸುವಳ್ಳಿ ನಿವಾಸಿ ರತನ್ (21), ದೊಡ್ಡಕಣಗಾಲು ಗ್ರಾಮದ ಭೀಮರಾಜ್ (24) ಮತ್ತು ಮನು (22) ಎಂಬುವವರು ಮುಳುಗಿ ಮೃತಪಟ್ಟಿದ್ದಾರೆ. ಆಯಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಯುವಕರು ಯಗಚಿ ನದಿಯಲ್ಲಿ ಈಜಲು ತೆರಳಿದ್ದರು. ಮೃತದೇಹಕ್ಕಾಗಿ ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹುಣಸುವಳ್ಳಿಯ ಸಂಜಯ್ ಮತ್ತು ದೊಡ್ಡಕಣಗಾಲು ನಿವಾಸಿ ಧನು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರತ್ಯೇಕ ವಿದ್ಯುತ್ ಅವಘಡ: ಮೂವರ ದುರ್ಮರಣ
ಹಗರಿಬೊಮ್ಮನಹಳ್ಳಿ: ವಿಜಯದಶಮಿ ಆಯುಧ ಪೂಜೆ ದಿನದಂದೇ ತಾಲೂಕಿನ ನಕ್ರಾಳ್ ತಾಂಡಾ ಹಾಗೂ ಕಡಲಬಾಳು ಗ್ರಾಮದಲ್ಲಿ ಸೋಮವಾರ ಸಂಭವಿಸಿದ ಪ್ರತ್ಯೇಕ ವಿದ್ಯುತ್ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ತಾಲೂಕಿನ ನಕ್ರಾಳ್ ತಾಂಡಾದ ಹೊಲದಲ್ಲಿ ಹರಿದುಬಿದ್ದ 11 ಕೆ.ವಿ. ವಿದ್ಯುತ್ ತಂತಿ ಕಾಲಿಗೆ ತಗುಲಿ ತಾಂಡಾದ ಕೊಟ್ರೇಶ್ನಾಯ್ಕ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೈನ್ಮ್ಯಾನ್, ಜೆಇ ವಿರುದ್ಧ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಕಡಲಬಾಳು ಗ್ರಾಮದಲ್ಲಿ ಮನೆ ಮುಂದೆ ಒಣಗಿ ಹಾಕಿದ್ದ ಬಟ್ಟೆ ತೆಗೆಯುತ್ತಿದ್ದ ವೇಳೆ ಕಟ್ಟಿದ್ದ ತಂತಿ ಮೂಲಕ ವಿದ್ಯುತ್ ಪ್ರವಹಿಸಿದ್ದರಿಂದ ಮಾಬುನ್ನಿ(23), ಕುದುರಿ ಮಂಜುಳಾ (35) ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ