ದೋಸ್ತಿ ಖೇಲ್ ಖತಂ?
ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ನಿಂದ ಪ್ರತ್ಯೇಕ ಸ್ಪರ್ಧೆ ಸಾಧ್ಯತೆ
Team Udayavani, Aug 2, 2019, 6:02 AM IST
ಬೆಂಗಳೂರು: ಸರ್ಕಾರ ಪತನಗೊಂಡ ಬೆನ್ನಲ್ಲೇ ದೂರ ದೂರ ಸರಿಯಲಾರಂಭಿಸಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮುಂಬರುವ ಉಪಚುನಾವಣೆಯಲ್ಲಿ ಪ್ರತ್ಯೇಕವಾಗಿ ಸೆಣಸಲು ಮುಂದಾಗಿರುವುದು ಬಹುತೇಕ ಖಚಿತವಾಗಿದೆ.
ರಾಜ್ಯ ವಿಧಾನಸಭೆಯ ಹದಿನೇಳು ಶಾಸಕರು ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಉಪ ಚುನಾವಣೆ ಎದುರಿಸಲು ಮೂರೂ ಪಕ್ಷಗಳು ಆಗಲೇ ಸಿದ್ಧತೆ ಆರಂಭಿಸಿವೆ. ಸಮ್ಮಿಶ್ರ ಸರ್ಕಾರ ರಚನೆ, ಲೋಕಸಭೆ ಮೈತ್ರಿ ಮಾಡಿಕೊಂಡು ಕೈ ಸುಟ್ಟುಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸೆಣಸಲು ಎರಡೂ ಪಕ್ಷಗಳಲ್ಲೂ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಎರಡೂ ಪಕ್ಷಗಳು ಎಲ್ಲ ಕ್ಷೇತ್ರಗಳಲ್ಲೂ ಪರ್ಯಾಯ ಅಭ್ಯರ್ಥಿಗಳ ಹುಡುಕಾಟ ನಡೆಸಿವೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಗುರುವಾರ ನಾಯಕರ ಸಭೆ ನಡೆದಿದ್ದು, ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹುತೇಕ ನಾಯಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಸರ್ಕಾರದ ಪತನಕ್ಕೆ ಕಾರಣರಾದ ಶಾಸಕರ ಕ್ಷೇತ್ರದಲ್ಲಿ ಮತ್ತೆ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ನಿರ್ಧರಿಸಿದ್ದು, ಹದಿನೇಳು ಕ್ಷೇತ್ರಗಳಲ್ಲಿ ವಸ್ತು ಸ್ಥಿತಿ ತಿಳಿಯಲು ಹಿರಿಯ ನಾಯಕರ ನೇತೃತ್ವದಲ್ಲಿ ವೀಕ್ಷಕರ ತಂಡ ರಚನೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಜೆಡಿಎಸ್ ಜೊತೆ ಮೈತ್ರಿ ಕಡಿದುಕೊಂಡು ಸ್ವತಂತ್ರವಾಗಿ ಸ್ಪರ್ಧಿಸಲು ಆಸಕ್ತಿ ವಹಿಸಿರುವ ಕಾಂಗ್ರೆಸ್ ನಾಯಕರು ಉಪ ಚುನಾವಣೆಯಲ್ಲಿ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.
ಜೆಡಿಎಸ್ನಲ್ಲೂ ಏಕಾಂಗಿ ಮಾತು: ದೇವೇಗೌಡರ ನೇತೃತ್ವದಲ್ಲಿ ನಡೆದ ಉಪ ಚುನಾವಣೆ ಸಿದ್ಧತಾ ಸಭೆಯಲ್ಲಿ ಏಕಾಂಗಿಯಾಗಿಯೇ ಹೋಗೋಣ ಎಂದು ಸ್ಥಳೀಯ ಮಟ್ಟದ ಕಾರ್ಯಕರ್ತರು ಹಾಗೂ ಮುಖಂಡರು ವಾದ ಮಂಡಿಸಿದ್ದಾರೆ.
ಜೆಡಿಎಸ್ ವರಿಷ್ಠ ದೇವೇಗೌಡರು ಸಹ, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ನಡೆ ಏನು ಎಂಬುದು ಕಾದು ನೋಡಿ ಆ ನಂತರ ತೀರ್ಮಾನ ಕೈಗೊಳ್ಳುವ ಮನಸ್ಸಿನಲ್ಲಿದ್ದಾರೆ.
ಬಿಜೆಪಿಯಲ್ಲೂ ತಯಾರಿ: ಬಿಜೆಪಿಯು ಅಭ್ಯರ್ಥಿ ಯಾರು ಎಂಬ ಬಗ್ಗೆ ತಲೆಕೆಡಿಸಿಕೊಳ್ಳದೆ ಆ ಎಲ್ಲ ಕ್ಷೇತ್ರದಲ್ಲಿ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರು ಹಾಗೂ ಮುಖಂಡರಿಗೆ ಸೂಚನೆ ನೀಡಿದೆ.
ಜತೆಗೆ ಬಿಜೆಪಿ ನಾಯಕರು ಆಂತರಿಕವಾಗಿ ಉಪ ಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ. ಅಧಿಕೃತವಾಗಿ ಸಭೆ ನಡೆಸಿದರೆ ಅಭ್ಯರ್ಥಿಗಳ ಹೆಸರು ಪ್ರಸ್ತಾಪವಾಗಬೇಕಾಗುತ್ತದೆ. ಆದರೆ, ಅನರ್ಹ ಗೊಂಡಿರುವ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವ ಅಥವಾ ಅವರು ಸೂಚಿಸಿದವರಿಗೆ ಟಿಕೆಟ್ ನೀಡುವ ಭರವಸೆ ನೀಡಿರುವುದರಿಂದ ಸದ್ಯಕ್ಕೆ ಅಭ್ಯರ್ಥಿ ಯಾರು ಎಂಬುದರ ಬಗ್ಗೆ ಯೋಚಿಸದೆ ಆಯಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಎದುರಾದರೆ ಗೆಲ್ಲಲು ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಬಿಜೆಪಿ-ಕಾಂಗ್ರೆಸ್ನಲ್ಲಿ ಹುದ್ದೆಗಳಿಗಾಗಿ ಪೈಪೋಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ