ಪ್ರತ್ಯೇಕ ಧರ್ಮ: ಪಂಚ ಪೀಠಾಧೀಶರ ಸಭೆ ಇಂದು
Team Udayavani, Aug 23, 2017, 9:20 AM IST
ಬೆಂಗಳೂರು: ಬೆಳಗಾವಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯ ಬೃಹತ್ ರಾಲಿ ಬೆನ್ನಲ್ಲೇ ಪಂಚ
ಪೀಠಾಧೀಶರು ಪ್ರತ್ಯೇಕ ಸಭೆ ನಡೆಸಲು ನಿರ್ಧರಿಸಿದ್ದಾರೆ. ಸಭೆ ಬುಧವಾರ ಬೆಳಗ್ಗೆ 11 ಗಂಟೆಗೆ ವಿಜಯನಗರದ
ಮನುವನದಲ್ಲಿ ನಡೆಯಲಿದೆ. ಸಭೆ ನೇತೃತ್ವವನ್ನು ಪಂಚಾಚಾರ್ಯರ ಪೈಕಿ ಕೇದಾರ ಪೀಠದ ಸ್ವಾಮೀಜಿ ಹೊರತು ಪಡಿಸಿ, ಬಾಳೆಹೊನ್ನೂರು, ಉಜ್ಜಯಿನಿ, ಶ್ರೀಶೈಲ ಹಾಗೂ ಕಾಶಿ ಪೀಠದ ಸ್ವಾಮೀಜಿಗಳು ವಹಿಸಲಿದ್ದಾರೆ.
ಇವರೊಂದಿಗೆ ವಿರಕ್ತ ಮಠದ ಮುರಗೋಡು, ಹುಕ್ಕೇರಿ, ಮುನವಳ್ಳಿ ಹಾಗೂ ಕವಟಗಿಮಠ ಸ್ವಾಮೀಜಿಗಳೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠ ಹಾಗೂ ತುಮಕೂರು ಸಿದ್ದಗಂಗಾ ಶಿವಕುಮಾರ ಸ್ವಾಮಿಜಿಗೂ ಆಹ್ವಾನ ನೀಡಲಾಗಿದ್ದು, ಸಭೆಗೆ ಹಾಜರಾಗುವುದು ಅನುಮಾನ ಎಂದು ತಿಳಿದು ಬಂದಿದೆ.
ಸಮಾನ ಕುರ್ಚಿ: ಇದುವರೆಗೂ ವೇದಿಕೆಗಳಲ್ಲಿ ತಾವು ಎಲ್ಲರಿಗಿಂತಲೂ ಮೇಲು ಎಂದು ಬಿಂಬಿಸಲು ಎತ್ತರಕ್ಕೆ
ಕುರ್ಚಿ ಹಾಕಿಸಿಕೊಳ್ಳುತ್ತಿದ್ದ ಪಂಚ ಪೀಠಾಧೀಶರು, ವೇದಿಕೆಯಲ್ಲಿ ಸಮಾನವಾಗಿ ಕೂರಲು ಸಹಮತ ವ್ಯಕ್ತಪಡಿಸಿದ್ದಾರೆ
ಎಂದು ಹೇಳಲಾಗಿದ್ದು, ಇನ್ನು ಮುಂದೆ ಬಸವಣ್ಣನ ಹೆಸರನ್ನೂ ಬಳಸಲು ಆಸಕ್ತಿ ಹೊಂದಿದ್ದಾರೆ ಎಂದು ತಿಳಿದು
ಬಂದಿದೆ. ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಪಂಚಾಚಾರ್ಯರು
ನಿರ್ಧರಿಸಿದ್ದು, ಬುಧವಾರ ಸಂಜೆ 8 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಸಮಯ ಪಡೆದುಕೊಂಡಿದ್ದಾರೆ.
ಬೆಳಗಾವಿ ಜಿಲ್ಲಾಧ್ಯಕ್ಷಗೆ ನೋಟಿಸ್: ಪ್ರತ್ಯೇಕ ಧರ್ಮಕ್ಕೆ ಬೆಂಬಲ ಸೂಚಿಸಿರುವ ವೀರಶೈವ ಮಹಾಸಭೆಯ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರಣ್ಣ ಬಿಜಾಪುರ ಅವರಿಗೆ ವೀರಶೈವ ಮಹಾಸಭೆ ಕಾರಣ ಕೇಳಿ ನೋಟಿಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ