ಸೋಮವಾರದಿಂದ ಅಧಿವೇಶನ: ಮೂರು ಪಕ್ಷಗಳಿಗೆ ಸಾಮರ್ಥ್ಯ ಪ್ರದರ್ಶನ ಅನಿವಾರ್ಯ
Team Udayavani, Sep 10, 2022, 10:01 AM IST
ಬೆಂಗಳೂರು: ಸೋಮವಾರದಿಂದ ಹತ್ತು ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಜನರ ಸಮಸ್ಯೆಗಳು ಹಾಗೂ ಶಾಸನಾತ್ಮಕ ಚಟುವಟಿಕೆಗಳು ಈ ಬಾರಿಯಾದರೂ ನಡೆಯಲಿದೆಯೇ ಎಂಬ ಚರ್ಚೆ ಈಗ ಪ್ರಾರಂಭವಾಗಿದೆ.
ಸೋಮವಾರ ಕಲಾಪ ಆರಂಭವಾಗಲಿದ್ದು, ಮೊದಲು ಸಂತಾಪ ನಿರ್ಣಯ ಮಂಡನೆಯಾಗುತ್ತದೆ. ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಸಂತಾಪ ಬಳಿಕ ಕಲಾಪ ಒಂದು ದಿನದ ಮಟ್ಟಿಗೆ ಮುಂದೂಡಿಕೆಯಾಗಲಿದೆ.
ಇದು ಚುನಾವಣಾ ವರ್ಷವಾಗಿರುವುದರಿಂದ ರಾಜಕೀಯ ಮಹತ್ವ ಪಡೆಯುವ ವಿಚಾರಗಳನ್ನೇ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಹೀಗಾಗಿ 40% ಕಮಿಷನ್, ಬೆಂಗಳೂರು ಮಳೆ ಅವಾಂತರ, ಸರಕಾರದ ನಿಧಾನ ಗತಿಯ ಸ್ಪಂದನೆ ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಿರ್ಧರಿಸಿದೆ. ಈ ಸಂಬಂಧ ಕಾಂಗ್ರೆಸ್ ರಿಸರ್ಚ್ ಟೀಂ ಭಾರಿ ಸಿದ್ಧತೆ ನಡೆಸಿದೆ.
ಇದನ್ನೂ ಓದಿ:‘ಲಕ್ಕಿಮ್ಯಾನ್’ ಚಿತ್ರ ವಿಮರ್ಶೆ: ದೇವರ ಆಟದಲ್ಲಿ ಲಕ್ಕಿ ಮ್ಯಾನ್ ಮಿಂಚು
ಇನ್ನೊಂದೆಡೆ ಜೆಡಿಎಸ್ ನಡೆ ಕೂಡಾ ನಿಗೂಢವಾಗಿದೆ. ಬಿಡದಿಯನ್ನು ಕಾರ್ಯ ಚಟುವಟಿಕೆ ಮಾಡಿಕೊಂಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಕಾರ ಹಾಗೂ ಕಾಂಗ್ರೆಸ್ ಎರಡನ್ನೂ ಇಕ್ಕಟ್ಟಿಗೆ ಸಿಲುಕಿಸಲು ಅಧಿವೇಶನವನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ. ಬಿಹಾರ್ ಸಿಎಂ ನಿತೀಶ್ ಕುಮಾರ್ ಭೇಟಿ ಬಳಿಕ ಕುಮಾರಸ್ವಾಮಿ ನಡೆ ಬದಲಾಗಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.
ಇದರ ಜತೆಗೆ ಚುನಾವಣಾ ವರ್ಷದಲ್ಲಿ ತಮ್ಮ ನಾಯಕತ್ವವನ್ನು ಸಾಬೀತು ಪಡಿಸಿಕೊಳ್ಳುವುದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಅನಿವಾರ್ಯವಾಗಿದೆ. ಆದರೆ ಕೆಲವು ಮಹತ್ವದ ವಿಧೇಯಕಗಳು ಈ ಅಧಿವೇಶನದಲ್ಲೇ ತೆಗೆದುಕೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ