Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

ಪ್ರತಿ ಬಾರಿಯಂತೆ ಅನಪೇಕ್ಷಿತ ಚರ್ಚೆ, ವಾಗ್ವಾದದಲ್ಲೇ ಅಧಿವೇಶನದ ಮೊದಲ ವಾರ ಮುಕ್ತಾಯ

Team Udayavani, Dec 9, 2023, 5:51 AM IST

1-sadsadasd

ಬೆಳಗಾವಿ: ಬರ, ನೀರಾವರಿ ಸಹಿತ ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದ ಬಗ್ಗೆ ಸಾಕಷ್ಟು ನಿರೀಕ್ಷೆ ಯೊಂದಿಗೆ ಪ್ರಾರಂಭವಾದ ಬೆಳಗಾವಿ ಅಧಿವೇಶನದ ಮೊದಲ ವಾರ ಪ್ರತಿ ಬಾರಿಯಂತೆ ಅನಪೇಕ್ಷಿತ ಚರ್ಚೆ ಹಾಗೂ ವಾಗ್ವಾದದಲ್ಲೇ ಕೊನೆಯಾಗಿದೆ.

ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ರಾಜಕೀಯ ಅನ್ಯಾಯದ ಬಗ್ಗೆ ಈ ಸದನದಲ್ಲಿ ಚರ್ಚಿಸುವುದಕ್ಕೆ ಅವಕಾಶ ನೀಡಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಧಿವೇಶನದ ಮೊದಲ ದಿನವೇ ಒತ್ತಾಯಿಸಿದ್ದರು. ಈ ಬಗ್ಗೆ ಅವಕಾಶ ನೀಡುವುದಾಗಿ ಸ್ಪೀಕರ್‌ ಯು.ಟಿ.ಖಾದರ್‌ ಭರವಸೆ ನೀಡಿದ್ದರು. ಆದರೆ ಮೊದಲ ವಾರ ಈ ಬಗ್ಗೆ ಚರ್ಚೆಯಾಗಿಲ್ಲ. ಬರದ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸಹಿತ ಹಲವರು ಪ್ರಸ್ತಾವಿಸಿದ್ದರೂ ಅಭಿವೃದ್ಧಿಗೆ ಹೊರತಾದ ವಿಚಾರಗಳೇ ಹೆಚ್ಚು ವಿಜೃಂಭಿಸಿವೆ.
ಮೊದಲ ಎರಡು ದಿನ ಸಪ್ಪೆ ಎನಿಸಿದ ಅಧಿವೇಶನಕ್ಕೆ ಸ್ವಲ್ಪ ಬಿರುಸು ನೀಡಿದವರೇ ಕರಾವಳಿ ಭಾಗದ ಶಾಸಕರು. ಮೂರನೇ ದಿನದಿಂದ ಕಲಾಪದಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡ ವಿ.ಸುನೀಲ್‌ ಕುಮಾರ್‌, ಭರತ್‌ ಶೆಟ್ಟಿ, ವೇದವ್ಯಾಸ್‌ ಕಾಮತ್‌, ಹರೀಶ್‌ ಪೂಂಜ, ಉಮಾನಾಥ್‌ ಕೋಟ್ಯಾನ್‌, ರಾಜೇಶ್‌ ನಾೖಕ್‌ ಮುಂತಾದವರು ಅರಣ್ಯ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳ ವಿರುದ್ಧ ದಾಖಲಿಸಿದ ಎಫ್ಐಆರ್‌ ಬಗ್ಗೆ ಕಲಾಪದಲ್ಲಿ ಪ್ರಸ್ತಾವಿಸಿ ಧರಣಿ ನಡೆಸಿದ್ದರಿಂದ ಆಡಳಿತ-ವಿಪಕ್ಷದ ಮಧ್ಯೆ ಕಿಚ್ಚು ಕಾಣಿಸಿಕೊಂಡಿತು. ಅಲ್ಲಿಂದ ಮುಂದೆ ದಿನಕ್ಕೊಂದು ವಿಚಾರಗಳು ಸದನದಲ್ಲಿ ಮೊಳಗುತ್ತಿದೆಯಾದರೂ ಅಭಿವೃದ್ಧಿ ವಿಚಾರಗಳು ಸಪ್ಪೆಯಾಗಿವೆ. ಮುಂದಿನ ವಾರ ನೀರಾವರಿ ಯೋಜನೆಗಳು ಸಹಿತ ಹಲವು ವಿಚಾರಗಳ ಬಗ್ಗೆ ಪ್ರಸ್ತಾವಿಸಲು ಅವಕಾಶ ನಿಡುವುದಾಗಿ ಸ್ಪೀಕರ್‌ ಭರವಸೆ ನೀಡಿದ್ದಾರೆ.

ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ ರಚನೆ
ಉತ್ತರ ಕರ್ನಾಟಕದಲ್ಲಿ ಕಲಾಪ ನಡೆಯುತ್ತಿದ್ದರೂ ಸಚಿವ ಸಂಪುಟ ಸಭೆಯಲ್ಲೂ ಈ ಭಾಗಕ್ಕೆ ಸಂಬಂಧಪಟ್ಟ ಮಹತ್ವದ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ. ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಪುಟ ಅಸ್ತು ಎಂದಿದ್ದನ್ನು ಬಿಟ್ಟರೆ ಈ ಭಾಗಕ್ಕೆ ಮಹತ್ವ ಎನಿಸುವ ಯಾವುದೇ ಘೋಷಣೆಯಾಗಿಲ್ಲ. ಪ್ರತಿಭಟನೆಯ ಬಿಸಿ ಸುವರ್ಣ ವಿಧಾನಸೌಧದವರೆಗೆ ವ್ಯಾಪಿಸದೇ ಇರುವುದು ಈ ಬಾರಿಯ ವಿಶೇಷ.

ವಿಧಾನ ಪರಿಷತ್ತಿನಲ್ಲಿ ಎನ್‌ಇಪಿಗೆ ಸಂಬಂಧಪಟ್ಟಂತೆ ಶುಕ್ರವಾರ ಮಹತ್ವದ ಚರ್ಚೆ ನಡೆದಿದ್ದು, ಉನ್ನತ ಶಿಕ್ಷಣ ಸಚಿವ ಡಾ| ಸುಧಾಕರ್‌ ಉತ್ತರ ನೀಡಿದ್ದಾರೆ. ಸಾವರ್ಕರ್‌ ಫೋಟೋ ತೆರವು ವಿಚಾರ ಬಿಸಿ ಹೊತ್ತಿಕೊಳ್ಳುವ ಮುನ್ಸೂಚನೆ ಕಂಡರೂ ಸ್ಪೀಕರ್‌ ಯು.ಟಿ.ಖಾದರ್‌ ಸಮಯೋಚಿತ ನಿಲುವು ತೆಗೆದುಕೊಳ್ಳುವ ಮೂಲಕ ವಿವಾದ ಕಲಾಪವನ್ನು ಬಲಿ ತೆಗೆದುಕೊಳ್ಳುವುದನ್ನು ತಪ್ಪಿಸಿದ್ದಾರೆ.

ಕಲಾಪಕ್ಕೆ ಶಾಸಕರ ಗೈರು
ಶುಕ್ರವಾರ ಸಮೀಪಿಸುತ್ತಿದ್ದಂತೆ ವಿಧಾನಸಭೆ ಕಲಾಪಕ್ಕೆ ಶಾಸಕರ ಗೈರು ಕಾಣಿಸಿಕೊಂಡಿದೆ. ಇದೆಲ್ಲದರ ಮಧ್ಯೆ ಸಚಿವರೂ ಸದನಕ್ಕೆ ಗೈರಾಗುತ್ತಿರುವುದು ಅನೇಕರ ಬೇಸರಕ್ಕೆ ಕಾರಣವಾಗಿದೆ. ಸಚಿವರ ಗೈರು, ವಿಪಕ್ಷದ ತರಾಟೆ ಎಂಬುದು ಕಲಾಪದ ಸತ್ಸಂಪ್ರದಾಯವೇನೋ ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸಭಾಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕೆಂಬುದು ಹಿರಿಯ ಶಾಸಕರ ಬೇಡಿಕೆಯಾಗಿದೆ.

ನಿಲ್ಲದ ಗೊಂದಲ
ಇವೆಲ್ಲದರ ಮಧ್ಯೆ ವಿಪಕ್ಷ ಪಾಳಯದ ಗೊಂದಲ ಮಾತ್ರ ಮುಂದುವರಿದಿದೆ. “ಎಲ್ಲರೂ ನಾಯಕರು’ ಎಂಬಂತೆ ವರ್ತಿಸುತ್ತಿದ್ದು, ವಿಜಯೇಂದ್ರ ಬಣ, ಅಶೋಕ ಬಣ, ಸುನಿಲ್‌ ಕುಮಾರ್‌ ಬಣ, ಯತ್ನಾಳ್‌ ಬಣ ಎದ್ದು ಕಾಣುತ್ತಿದೆ. ಗುರುವಾರ ಈ ಗೊಂದಲ ಸ್ಫೋಟಗೊಂಡಿದ್ದು, ಹೊಂದಾಣಿಕೆ ಮೂಡಿಸುವ ಹೊಣೆ ಯಾರದು ಎಂಬ ಪ್ರಶ್ನೆ ಉದ್ಭವವಾಗಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.