ಅಶ್ಲೀಲ ಪದಗಳ ಕೆಸರೆರಚಾಟ ಒಳ್ಳೆಯದಲ್ಲ : ಎಚ್ಡಿಡಿ ಕಿವಿಮಾತು
Team Udayavani, Jul 13, 2017, 4:18 PM IST
ಹಾಸನ: ಕರಾವಳಿ ಕಲಹದಿಂದ ತೀವ್ರ ಬೇಸರವಾಗಿದ್ದು, ಇದು ರಾಜಕೀಯ ಗೊಂದಲವೋ ,ಆಡಳಿತ ವೈಫಲ್ಯವೊ ಎನ್ನುವುದು ತಿಳಿಯುತ್ತಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರಾವಳಿಯಲ್ಲಿ ನಡೆದ ಹಿಂಸಾಚಾರ ತೀವ್ರ ನೋವು ತಂದಿದೆ. ಈ ವಿಚಾರದಲ್ಲಿ ರಾಜಕೀಯ ಮುಖಂಡರು ಅಸಭ್ಯ ವರ್ತನೆ ತೋರುವುದು ಸರಿಯಲ್ಲ. ಬಿಜೆಪಿ,ಕಾಂಗ್ರೆಸ್ ಪಕ್ಷಗಳೆರಡೂ ಉನ್ನತಮಟ್ಟದ ವ್ಯವಸ್ಥೆ ಹೊಂದಿದ್ದು, ಅಶ್ಲೀಲ ಪದಗಳಲ್ಲಿ ಕೆಸರೆರಚಾಟ ನಡೆಸುವುದು ನಾಗರಿಕ ಸಮಾಜದಲ್ಲಿ ಗೌರವ ತರುವಂಥಹದ್ದಲ್ಲ ಎಂದರು.
ದಕಿಣ ಕನ್ನಡದ ಬಂಟ್ವಾಳದಲ್ಲಿ ಜುಲೈ15 ರಂದು ಸಾಮರಸ್ಯಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ. ಪಕ್ಷದ ಚಿಹ್ನೆ ಹೊರತು ಪಡಿಸಿ ನಡೆಸುತ್ತಿದ್ದು ಶಾಂತಿ ಸಭೆ ಅಲ್ಲ. ಯಾವುದೇ ರಾಜಕೀಯ ಲಾಭಕ್ಕಾಗಿ ಇದನ್ನು ಮಾಡುತ್ತಿಲ್ಲ ಎಂದರು.
ಎಲ್ಲದಕ್ಕೂ ಸುಮ್ಮನಿರಲು ಕರಾವಳಿಯವರು ಷಂಡರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಆಬಳಿಕ ಹಲವು ನಾಯಕರು ಇದಕ್ಕೆ ಪ್ರತ್ಯುತ್ತರ ನೀಡುವ ಮೂಲಕ ವಾಗ್ಸಮರ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ