ಹನ್ನೊಂದು ಸ್ಥಾನಕ್ಕೆ ತೀವ್ರ ಹಣಾಹಣಿ 


Team Udayavani, May 23, 2018, 6:00 AM IST

38.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಬೆನ್ನಲ್ಲೇ ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಬಿಜೆಪಿಯ ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್‌. ವೀರಯ್ಯ, ಸೋಮಣ್ಣ ಬೇವಿನಮರದ, ರಘುನಾಥ್‌ರಾವ್‌ ಮಲ್ಕಾಪುರೆ, ಭಾನುಪ್ರಕಾಶ್‌ ಹಾಗೂ ಕಾಂಗ್ರೆಸ್‌ನ ಎಂ.ಆರ್‌.ಸೀತಾರಾಂ, ಮೋಟಮ್ಮ, ಸಿ.ಎಂ. ಇಬ್ರಾಹಿಂ. ಕೆ.ಗೋವಿಂದರಾಜು, ಬೈರತಿ ಸುರೇಶ್‌, ಮದೀರ್‌ ಆಗಾ ಅವರ ಅವಧಿ ಜೂ.17ಕ್ಕೆ
ಮುಕ್ತಾಯಗೊಳ್ಳಲಿದ್ದು, ಆ ಸ್ಥಾನಗಳಿಗೆ ಜೂ.11ಕ್ಕೆ ಮತದಾನ ನಡೆಯಲಿದೆ.

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಸೋಮಣ್ಣ ಬೇವಿನಮರದ ಹಾಗೂ ಬೈರತಿ ಸುರೇಶ್‌ ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ತೆರವಾಗುವ 11 ಸ್ಥಾನಗಳ ಪೈಕಿ ಈಗಿನ ಸಂಖ್ಯಾಬಲದ ಪ್ರಕಾರ ಜೆಡಿಎಸ್‌ಗೆ 2, ಬಿಜೆಪಿಗೆ 5 ಹಾಗೂ ಕಾಂಗ್ರೆಸ್‌ ಗೆ ನಾಲ್ಕು ಸ್ಥಾನಗಳು  ಲಭ್ಯವಾಗಲಿವೆ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮೂರೂ ಪಕ್ಷಗಳು ವಿಧಾನಪರಿಷತ್‌ ಸದಸ್ಯತ್ವ ನೀಡುವುದಾಗಿ ಹೇಳಿ ಸಮಾಧಾನಪಡಿಸಿದ್ದು, ಇದೀಗ ಆ ಸ್ಥಾನಗಳಿಗೆ ಲಾಬಿ ಪ್ರಾರಂಭವಾಗಲಿದೆ. ಬಿಜೆಪಿ ಯಲ್ಲಿ ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್‌.ವೀರಯ್ಯ, ರಘು ನಾಥ್‌ರಾವ್‌ ಮಲ್ಕಾಪುರೆ ಮತ್ತೂಂದು ಅವಕಾಶಕ್ಕೆ ಬೇಡಿಕೆ ಇಟ್ಟಿದ್ದಾರೆ.

ಕಾಂಗ್ರೆಸ್‌ನಲ್ಲಿ ಎಂ.ಆರ್‌.ಸೀತಾರಾಂ, ಸಿ.ಎಂ. ಇಬ್ರಾಹಿಂ, ಗೋವಿಂದರಾಜು ಮತ್ತೂಂದು ಅವಧಿಗೆ ಮುಂದುವರಿಯಲು ಒಲವು ಹೊಂದಿದ್ದಾರೆ. ಜತೆಗೆ, ಮಾಜಿ ಮೇಯರ್‌ ರಾಮಚಂದ್ರಪ್ಪ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಸೇರಿ 1 ಡಜನ್‌ ಆಕಾಂಕ್ಷಿಗಳಿದ್ದಾರೆ. ಜೆಡಿಎಸ್‌ನಲ್ಲಿ ಬಿ.ಎಂ.ಫ‌ರೂಕ್‌ ಅವರನ್ನು ಪರಿಷತ್‌ಗೆ ಆಯ್ಕೆ ಮಾಡಿ ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಪ್ರಸ್ತಾಪ ಇರುವುದರಿಂದ ಅವರ ಹಾದಿ ಸುಗಮವಾಗಬಹುದು. ಮತ್ತೂಂದು ಸ್ಥಾನ ಉಳಿಯಲಿದೆ.

ಪದವೀಧರ, ಶಿಕ್ಷಕರ ಕ್ಷೇತ್ರಗಳಿಂದ ಜೂ.8ಕ್ಕೆ ಚುನಾವಣೆ: ಈ ಮಧ್ಯೆ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಆರು ಮಂದಿಯ ಅವಧಿ ಕೂಡ ಜೂ.21ಕ್ಕೆ ಮುಗಿಯಲಿದ್ದು, ಈಗಾಗಲೇ ಜೂ.8ಕ್ಕೆಚುನಾವಣೆ ನಿಗದಿಯಾಗಿದೆ. ಜೆಡಿಎಸ್‌ನ ರಮೇಶ್‌ ಬಾಬು, ಮರಿತಿಬ್ಬೇಗೌಡ, ಬಿಜೆಪಿಯ ಗಣೇಶ್‌ ಕಾರ್ಣಿಕ್‌, ಶಂಕರಮೂರ್ತಿ, ರಾಮಚಂದ್ರಗೌಡ, ಅಮರನಾಥ ಪಾಟೀಲ್‌ ಅವರು ನಿವೃತ್ತಿಯಾಗಲಿದ್ದಾರೆ. ಆ ಪೈಕಿ ರಮೇಶ್‌ಬಾಬು, ಮರಿತಿಬ್ಬೇಗೌಡ, ಗಣೇಶ್‌ ಕಾರ್ಣಿಕ್‌ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಇದಾದ ನಂತರ, ರಾಜ್ಯ ವಿಧಾನಸಭೆಯಿಂದ ನಾಮಕರಣಗೊಂಡಿರುವಎಂ.ಡಿ.ಲಕ್ಷ್ಮಿನಾರಾಯಣ, ತಾರಾ ಹಾಗೂ ಕೆ.ಬಿ.ಶಾಣಪ್ಪ ಅವರು ಆಗಸ್ಟ್‌ನಲ್ಲಿ
ನಿವೃತ್ತಿಯಾಗಲಿದ್ದಾರೆ. ಆ ಪೈಕಿ, ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಎಂ.ಡಿ.ಲಕ್ಷ್ಮಿ ನಾರಾಯಣ ಈಗಾಗಲೇ ರಾಜೀನಾಮೆ ನೀಡಿದ್ದಾರೆ.

ಪರಿಷತ್‌ ಚುನಾವಣೆಗೆ ನಾಳೆ ಅಧಿಸೂಚನೆ ಪ್ರಕಟ 
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ದ್ವೆ„ವಾರ್ಷಿಕ ಚುನಾವಣೆಗೆ ಮೇ 24 ರಂದು
ಅಧಿಸೂಚನೆ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೇ 31 ಕೊನೇ ದಿನಾಂಕವಾಗಿದ್ದು, ಜೂ.1ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ಜೂ. 4 ಕೊನೇ ದಿನ. ಜೂ.11ಕ್ಕೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ. ಪರಿಷತ್‌ನಲ್ಲಿ ಸಂಖ್ಯಾ ಬಲ ಏರು-ಪೇರು
ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌, ವಿ.ಸೋಮಣ್ಣ, ಕೆ.ಎಸ್‌. ಈಶ್ವರಪ್ಪ, ಡಾ.ಜಿ. ಪರಮೇಶ್ವರ್‌ ಶಾಸಕರಾಗಿ ಆಯ್ಕೆಯಾಗಿರು ವುದರಿಂದ ಆ ನಾಲ್ಕು ಸ್ಥಾನಗಳು ತೆರವಾಗಲಿವೆ. ಅದಕ್ಕೂ ಚುನಾವಣೆ ನಡೆಯಬೇಕಿದೆ. ಬಸನಗೌಡ ಪಾಟೀಲ್‌ ಅವರು ಸ್ಥಳೀಯ ಸಂಸ್ಥೆಗಳಿಂದ ಹಾಗೂ ಉಳಿದ ಮೂವರು ವಿಧಾನಸಭೆಯಿಂದ ನೇಮಕಗೊಂಡವರಾಗಿದ್ದಾರೆ. ಒಟ್ಟಾರೆ 75 ಸಂಖ್ಯಾಬಲದ
ವಿಧಾನಪರಿಷತ್‌ನಲ್ಲಿ 23 ಸ್ಥಾನಗಳು ಖಾಲಿಯಾಗಿ, ಭರ್ತಿಯಾಗಲಿವೆ. ಇದರಿಂದಾಗಿ ಮೂರೂ ಪಕ್ಷಗಳ ಬಲಾಬಲದಲ್ಲೂ ಏರು-ಪೇರಾಗಲಿದೆ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.