ನಮಗೆ ಹೇಳ್ತೀರಾ? ಬಿಸಿಲನಾಡಲ್ಲಿ “ಕೈ” ಜಾತಕ ಬಿಚ್ಚಿಟ್ಟ ಪ್ರಧಾನಿ ಮೋದಿ


Team Udayavani, May 3, 2018, 1:04 PM IST

modi-speech-New.jpg

ಕಲಬುರಗಿ:ಬಿಸಿಲನ್ನು ಸಹಿಸುತ್ತಿದ್ದೀರಿ, ಆದರೆ ಕಾಂಗ್ರೆಸ್ ಸರ್ಕಾರವನ್ನು ಸಹಿಸುತ್ತಿಲ್ಲ. ಇದು ನಿಮ್ಮ ಉತ್ಸಾಹವನ್ನು ತೋರಿಸುತ್ತದೆ. ದೇಶದ ಪ್ರತಿಮೂಲೆಯಲ್ಲೂ ಕಾಂಗ್ರೆಸ್ ನೆಲ ಕಚ್ಚುತ್ತಿದೆ. ಬಿಜೆಪಿ ದೇಶದ ಜನರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಮೂಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬುಧವಾರ ಕಲಬುರಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದರು. ದೇಶದ ಎಲ್ಲಾ ಕಡೆ ಜನರು ಕಾಂಗ್ರೆಸ್ ಪಕ್ಷಕ್ಕೆ ರಜೆ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದು ಕರ್ನಾಟಕದ ಭಾಗ್ಯ ಬದಲಿಸುವ ನಿರ್ಧಾರ ತೆಗೆದುಕೊಳ್ಳುವ ಚುನಾವಣೆ. ಮತದಾನ ಮಾಡುವಾಗ ಕೇವಲ ಕರ್ನಾಟಕದ ಉಜ್ವಲ ಭವಿಷ್ಯವನ್ನು ನೆನಪಿಸಿಕೊಳ್ಳಿ.

ಸಂತ ಬಸವಣ್ಣನವರು ಮೆರೆದಾಡಿದ ಪುಣ್ಯಭೂಮಿ, ಪುಣ್ಯಭೂಮಿಗೆ ಆಗಮಿಸಿರುವ ನಿಮಗೆಲ್ಲರಿಗೂ ಕೋಟಿ ನಮಸ್ಕಾರಗಳು ಎಂದರು.

ಬ್ರಿಟಿಷರು ಮಾಡಿದ ದೌರ್ಜನ್ಯವನ್ನೇ ಗೊರೋಟದಲ್ಲಿ ನಿಜಾಮರು ಮಾಡಿದರು. ಪಟೇಲ್ ಒಂದು ಹೆಸರು ಕೇಳಿದರೆ ಕಾಂಗ್ರೆಸ್ ನ ನಿದ್ದೆ ಮಾಯವಾಗುತ್ತದೆ.

ದೇಶ ಭಕ್ತರು ಮತ್ತು ಹುತಾತ್ಮರಿಗೆ ಕಾಂಗ್ರೆಸ್ ಪಕ್ಷ ಅಪಮಾನ ಮಾಡುತ್ತಲೇ ಬಂದಿದೆ. ಸರ್ದಾರ್ ಪಟೇಲ್ ಬಗೆಗಿನ ತಿರಸ್ಕಾರ ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ. ದೇಶದ ಎಷ್ಟು ಮಹನೀಯರು, ಹುತಾತ್ಮರನ್ನು ಕಾಂಗ್ರೆಸ್ ತಿರಸ್ಕರಿಸಿಲ್ಲ ಹೇಳಿ ಎಂದು ಮೋದಿ ಪ್ರಶ್ನಿಸಿದರು.

ಒಂದು ಕುಟುಂಬದ ಗಾಡಿ ನಡೆಸಲು ದೇಶ ಭಕ್ತರನ್ನು ಮರೆಸಲಾಗುತ್ತಿದೆ. ನಮ್ಮ ಸೈನಿಕರು ಪಾಕಿಸ್ತಾನದ ಒಳಹೊಕ್ಕು ಸರ್ಜಿಕಲ್ ಸ್ಟ್ರೈಕ್ ನಡೆಸಿತು. ಆದರೆ ಕಾಂಗ್ರೆಸ್ ಅದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿತು. ನಮ್ಮ ವೀರ ಸೈನಿಕರು ಕ್ಯಾಮರಾ ತೆಗೆದುಕೊಂಡು ಹೋಗಬೇಕಾ, ಬಂದೂಕು ಹಿಡಿದುಕೊಂಡು ಹೋಗಬೇಕಾ? ಎಂದು ತರಾಟೆಗೆ ತೆಗೆದುಕೊಂಡರು.

ವೇದಿಕೆಯಲ್ಲಿ ವಂದೇ ಮಾತರಂ ಅವಮಾನಿಸುವವರು ಸೈನಿಕರ ಪರಾಕ್ರಮವನ್ನು ಗೌರವಿಸುತ್ತಾರೆಯೇ ಎಂದು ಪ್ರಶ್ನಿಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಜನರಲ್ ತಿಮ್ಮಯ್ಯ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿಯ ಬಗ್ಗೆ ಮೋದಿ ಪ್ರಸ್ತಾಪಿಸಿದರು.

ಸರ್ಜಿಕಲ್ ಸ್ಟ್ರೈಕ್ ನಂತರ ಸೇನಾಧಿಕಾರಿಯನ್ನು ರೌಡಿ ಎಂದು ಕಾಂಗ್ರೆಸ್ ಮುಖಂಡರು ಕರೆದರು. ಜನರಲ್ ತಿಮ್ಮಯ್ಯ ಅವರನ್ನು ಅಂದು ನೆಹರೂ ಅಗೌರವಯುತವಾಗಿ ರಾಜೀನಾಮೆ ಕೊಡಿಸುವಂತೆ ಮಾಡಿದರು. ಜನರಲ್ ತಿಮ್ಮಯ್ಯ ಅವರನ್ನು ಹಲವು ಬಾರಿ ಅವಮಾನಿಸಿದ್ದರು. ವೀರ ಸೇನಾನಿಯನ್ನು ನಡೆಸಿಕೊಂಡ ರೀತಿಯನ್ನು ಕರ್ನಾಟಕದ ಯುವ ಜನತೆ ಮರೆಯಬಾರದು ಎಂದು ಮನವಿ ಮಾಡಿಕೊಂಡರು.

ಭಾಷಣದ ಹೈಲೈಟ್ಸ್:

ದೇಶದ ಅರ್ಧದಷ್ಟು ತೊಗರಿ ಬೆಳೆ ಕಲಬುರಗಿ ರೈತರ ಪರಿಶ್ರಮದ್ದಾಗಿದೆ. ಕಲಬುರಗಿನ್ನು ತೊಗರಿ ಕಣಜ ಎನ್ನುತ್ತಾರೆ

*ಕಾಂಗ್ರೆಸ್ ಸರ್ಕಾರ ತೊಗರಿ ಬೆಳೆಗಾರರ ಸಂಕಷ್ಟ ಅರ್ಥ ಮಾಡಿಕೊಳ್ಳುತ್ತಿಲ್ಲ. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗಲು ಪ್ರಯತ್ನಿಸಿಲ್ಲ

*ಸ್ವಾಮಿನಾಥನ್ ವರದಿಯನ್ನು ಕಪಾಟಿನಲ್ಲಿಟ್ಟು ಬೀಗ ಹಾಕಿದವರು ಇಂದು ಹೊಟ್ಟೆಕಿಚ್ಚುಪಟ್ಟುಕೊಳ್ಳುತ್ತಿದ್ದಾರೆ.

*ಎಂಎಸ್ ಪಿ ಮೂಲಕ ನಾವು 10ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಿಕೊಟ್ಟಿದ್ದೇವೆ. ಹೊಲಗಳು ಒಣಗಿರೋದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆ.

*ಸೇನೆಯಲ್ಲಿ ಅಪೂರ್ವ ಸೇವೆ ಸಲ್ಲಿಸಿದವರು ಕರ್ನಾಟಕದ ಯೋಧರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.