ಶಿಖಂಡಿ ರಾಜಕಾರಣ ನನ್ನದಲ್ಲ: ವಿಶ್ವನಾಥ್
Team Udayavani, Nov 17, 2019, 3:00 AM IST
ಹುಣಸೂರು: ತಾಲೂಕಿನಲ್ಲಿ ಕಳೆದ 10 ವರ್ಷಗಳ ಕಾಲ ಅಮಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲು, ಅಟ್ರಾಸಿಟಿ, ಎತ್ತಿಕಟ್ಟಿ ಹೊಡೆದಾಡಿಸುವ ಆಡಳಿತವಿತ್ತು. ನಾನು ಶಾಸಕನಾಗಿದ್ದ ವೇಳೆ ಇಂತಹ ಯಾವುದೇ ದುರ್ಘಟನೆಗಳನ್ನು ನಡೆಯಲು ಬಿಡಲಿಲ್ಲ. ಅಂತಹ ಶಿಖಂಡಿ ರಾಜಕಾರಣ ಕೂಡ ನನ್ನದಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಹೇಳಿದರು. ನಗರದಲ್ಲಿ ಶನಿವಾರ ನಡೆದ ಬಿಜೆಪಿ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡರ ವಿರುದ್ಧ ಹರಿಹಾಯ್ದರು.
ಮೋದಿ ಹಾಗೂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಗೆದ್ದರೆ ಅರಸು ಹೆಸರಲ್ಲಿ ಹುಣಸೂರನ್ನು ಜಿಲ್ಲೆ ಮಾಡುತ್ತೇನೆ. ಹುಣಸೂರಿನಿಂದ ಗೆದ್ದು ನಾನು ಮಂತ್ರಿಯಾಗುತ್ತೇನೆ. ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ. ಇದು ನನ್ನ ಶಪಥ ಎಂದರು.