ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ಮೂವರು ಪೊಲೀಸರ ವಶಕ್ಕೆ
Team Udayavani, Jul 12, 2022, 1:57 PM IST
ಶಿವಮೊಗ್ಗ: ಹರ್ಷ ಹತ್ಯೆಯ ನಂತರ ತಣ್ಣಗಾಗಿದ್ದ ಶಿವಮೊಗ್ಗದಲ್ಲಿ ಇದೀಗ ಮತ್ತೊಂದು ಘಟನೆ ನಡೆದಿದೆ. ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡ ಕಾಂತರಾಜು ಎಂಬಾತನ ಮೇಲೆ ಸೋಮವಾರ ರಾತ್ರಿ ಮಾರಣಾಂತಿಕ ದಾಳಿ ಮಾಡಲಾಗಿದೆ.
ರಾಜೀವ್ ಗಾಂಧಿ ಬಡಾವಣೆಯ ಮೊದಲನೇ ತಿರುವಿನಲ್ಲಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ಯುವಕ ಕಾಂತರಾಜು (27) ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ.
ಮೂತ್ರ ವಿಸರ್ಜನೆಗೆಂದು ಕಾಂತರಾಜು ಮನೆಯಿಂದ ಹೊರ ಬಂದಾಗ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಲಾಗಿದೆ. ಆದರೆ ಕಾಂತರಾಜು ಸಿನಿಮಾ ಶೈಲಿಯಲ್ಲಿ ಅವರ ಆಯುಧಗಳನ್ನೇ ಕಸಿದುಕೊಂಡಿದ್ದಾರೆ. ಸ್ನೇಹಿತರು, ಕುಟುಂಬದವರು ಬಂದೊಡನೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ:ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಬಸ್; ಪ್ರಯಾಣಿಕರು ಪಾರು
ಕಾಂತರಾಜುವಿನ ಬಲಗೈ ಗೆ ಮಚ್ಚಿನಿಂದ ಏಟು ಬಿದ್ದಿದೆ. ದಾಳಿ ನಡೆಸಿದವರು ಅನ್ಯಕೋಮಿನ ಹುಡುಗರು ಎಂದು ಆರೋಪಿಸಲಾಗಿದೆ. ಸದ್ಯ ಗಾಯಗೊಂಡಿರುವ ಕಾಂತರಾಜು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂವರು ವಶಕ್ಕೆ: ಘಟನೆ ಬೆನ್ನಿಗೆ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಮಚ್ಚಿನಿಂದ ಹಲ್ಲೆಯಾಗಿದೆ. ಮೂರರಿಂದ ಐವರು ಮಂದಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಮೂವರನ್ನು ಈಗಾಗಲೆ ವಶಕ್ಕೆ ಪಡೆದಿದ್ದೇವೆ. ತನಿಖೆ ನಡೆಯುತ್ತಿದೆ. ಆರಂಭದಲ್ಲಿ ದುಡ್ಡಿನ ವಿಚಾರ ಎಂದು ಹೇಳಿದ್ದರು. ಆದರೆ ತನಿಖೆ ಪ್ರಕಾರ ಬಜರಂಗದಳ ಸಂಘಟನೆ ಚಟುವಟಿಕೆಯಲ್ಲಿ ಇದ್ದಿದ್ದರಿಂದ ಈ ಹಲ್ಲೆಯಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಪದೇ ಪದೆ ಇಂತಹ ಘಟನೆಗಳು ನಡೆಯುತ್ತಿವೆ. ಆದ್ದರಿಂದ ನಮ್ಮ ಪ್ಯಾಟ್ರೋಲಿಂಗ್ ಹೆಚ್ಚಳ ಮಾಡಿದ್ದೇವೆ. ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಲಾಗಿದೆ. ಸಮಸ್ಯೆ ಉಂಟು ಮಾಡುವವರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನಿಗಾ ವಹಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು