ಶರಾವತಿ ನೀರಿಗಾಗಿ ಶಿವಮೊಗ್ಗ ಜಿಲ್ಲೆ ಸ್ತಬ್ಧ


Team Udayavani, Jul 11, 2019, 3:05 AM IST

sharavati

ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ವಿರೋ ಧಿಸಿ ಕರೆದಿದ್ದ ಶಿವಮೊಗ್ಗ ಜಿಲ್ಲಾ ಬಂದ್‌ ಯಶಸ್ವಿಯಾಗಿದೆ. ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್‌ಗೆ ಇಡೀ ಜಿಲ್ಲೆಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ವ್ಯಾಪಕ ಬೆಂಬಲ ದೊರೆತಿದ್ದು, ಶರಾವತಿ ಉಳಿಸಿ ಎಂಬ ಕೂಗು ಮಾರ್ದನಿಸಿದೆ.

ಶಿವಮೊಗ್ಗ ನಗರ, ಭದ್ರಾವತಿ ತಾಲೂಕು ಹೊರತುಪಡಿಸಿದರೆ ಸಾಗರ, ಸೊರಬ, ತೀರ್ಥಹಳ್ಳಿ, ಶಿಕಾರಿಪುರ, ಹೊಸನಗರ, ಸೊರಬ ತಾಲೂಕು ಹಾಗೂ ಉತ್ತರ ಕನ್ನಡದ ಹೊನ್ನಾವರ ಸಂಪೂರ್ಣ ಸ್ತಬ್ಧಗೊಂಡಿತ್ತು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೆಳಗ್ಗೆಯಿಂದಲೇ ಎಲ್ಲ ಅಂಗಡಿ ಮುಂಗಟ್ಟು, ಹೋಟೆಲ್‌ ಚಿತ್ರಮಂದಿರಗಳು ಮುಚ್ಚಿದ್ದವು. ಕೆಲವೆಡೆ ಪೆಟ್ರೋಲ್‌ ಬಂಕ್‌ಗಳು ಕೂಡ ಮುಚ್ಚಿದ್ದವು. ಖಾಸಗಿ ಬಸ್‌ ಸಂಚಾರ ಸ್ಥಗಿತಗೊಂಡಿತ್ತು. ಸರಕಾರಿ ಬಸ್‌ ಹಾಗೂ ಅಲ್ಲಲ್ಲಿ ಕೆಲ ಆಟೋಗಳು ಸಂಚರಿಸಿದವು. ಶಾಲೆಗಳಿಗೆ ಬುಧವಾರ ಬೆಳಗ್ಗೆ ರಜೆ ಘೋಷಣೆ ಮಾಡಲಾಗಿತ್ತು.

ಭಾರೀ ಪ್ರತಿಭಟನೆ: ಯೋಜನೆ ವಿರೋಧಿಸಿ ಜಿಲ್ಲಾ ಕೇಂದ್ರ ಶಿವಮೊಗ್ಗ ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ಪ್ರತಿಭಟನೆ ನಡೆಯಿತು. ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೇ ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದವು. ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹೊಸನಗರದಲ್ಲಿ ಪ್ರವಾಸಿಗರಿಗೆ, ಬೇರೆ ಜಿಲ್ಲೆಗೆ ತೆರಳುತ್ತಿದ್ದವರಿಗೆ ಪ್ರತಿಭಟನಾಕಾರರು ಅಡ್ಡಿ ಮಾಡಿದ ಘಟನೆ ಕೂಡ ನಡೆಯಿತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಶರಾವತಿ ಉಳಿಸಿ ಹೋರಾಟ ಸಮಿತಿ ಎಲ್ಲ ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿತು. ಸಮಿತಿಯ ಮೂರು ಹಕ್ಕೊತ್ತಾಯಗಳು ಇಂತಿವೆ:
1 – ಶರಾವತಿ ನೀರನ್ನು ಬೆಂಗಳೂರಿಗೆ ಹರಿಸುವ ಪ್ರಸ್ತಾಪವನ್ನು ಬೇಷರತ್ತಾಗಿ ಕೈ ಬಿಡಬೇಕು ಮತ್ತು ತ್ಯಾಗರಾಜ್‌ ವರದಿಯನ್ನು ಕೂಡಲೇ ಅ ಧಿಕೃತವಾಗಿ ತಿರಸ್ಕರಿಸಬೇಕು.

2 – ಶರಾವತಿ ಕಣಿವೆಯ ಆಸುಪಾಸಿನ ವಿವಿಧ ಯೋಜನೆಗಳ ಸಂತ್ರಸ್ತರು ಸೇರಿದಂತೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳ ಕುಡಿಯುವ ನೀರು ಮತ್ತು ಕೃಷಿ ಭೂಮಿಗೆ ನೀರು ಒದಗಿಸಲು ಇಲ್ಲಿನ ಜಲಾಶಯಗಳ ಬಳಕೆಗೆ ಆದ್ಯತೆ ನೀಡಬೇಕು. ಈ ಕುರಿತು ಸರಕಾರ ಕೂಡಲೇ ಡಿಪಿಆರ್‌ ತಯಾರಿಸಲು ಆದೇಶ ನೀಡಬೇಕು.

3 – ಬೆಂಗಳೂರಿನ ಬೆಳವಣಿಗೆಗೆ ಕಡಿವಾಣ ಹಾಕುವ ದಿಸೆಯಲ್ಲಿ ಅಲ್ಲಿನ ಕೈಗಾರಿಕೆಗಳು ಆಡಳಿತ ಕಚೇರಿಗಳು ಮುಂತಾದವುಗಳನ್ನು ನೀರಿರುವಲ್ಲಿ ವರ್ಗಾಯಿಸುವುದು ಸೂಕ್ತ ಪರಿಹಾರವಾಗುತ್ತದೆ. ಆ ಮೂಲಕ ಗ್ರಾಮೀಣ ಯುವಕರಿಗೆ ಉದ್ಯೋಗ ದೊರೆಯುತ್ತದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.