ಶಿಯೊಮಿ ಕಂಪೆನಿ: ಇಡಿ ಆದೇಶಕ್ಕೆ ಹೈಕೋರ್ಟ್ ತಡೆ
Team Udayavani, May 7, 2022, 6:25 AM IST
ಬೆಂಗಳೂರು: ಶಿಯೊಮಿ ಇಂಡಿಯಾ ಕಂಪೆನಿಗೆ ಸೇರಿದ ನಾಲ್ಕು ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಕುರಿತು ಬೆಂಗಳೂರಿನ ಮಾರತಹಳ್ಳಿಯ ಟೆಕ್ ಗ್ರಾಮದಲ್ಲಿರುವ ಶಿಯೊಮಿ ಕಂಪೆನಿ ಕಚೇರಿಯ ಪ್ರತಿನಿಧಿ ಸಮೀರ್ ಬಿ.ಎಸ್. ರಾವ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಸದ್ಯದ ಮಟ್ಟಿಗೆ ಜಪ್ತಿಗೆ ಆದೇಶಿಸಲಾಗಿರುವ ಬ್ಯಾಂಕ್ ಖಾತೆಗಳಲ್ಲಿರುವ ಹಣವನ್ನು ಕಂಪೆನಿಯು ತನ್ನ ದೈನಂದಿನ ಖರ್ಚು ವೆಚ್ಚಗಳಿಗಾಗಿ ಬಳಸಬಹುದು. ಜಾರಿ ನಿರ್ದೇಶನಾಲಯದ ಆದೇಶಕ್ಕೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ಮೇ 12ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನಲೆ
ಶಿಯೊಮಿ ಇಂಡಿಯಾ ಕಂಪೆನಿಯು ಭಾರತದಲ್ಲಿ ಗಳಿಸಿದ ಹಣವನ್ನು ರಾಯಧನ ನೀಡುವ ನೆಪದಲ್ಲಿ ವಿದೇಶಿ ಕಂಪೆನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡುತ್ತಿದೆ. ಆದ್ದರಿಂದ, ಇದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಎಂಬುದು ಇ.ಡಿ ಆರೋಪ. ಈ ಆರೋಪಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಇ.ಡಿ. ಕಚೇರಿಯ ಸಹಾಯಕ ನಿರ್ದೇಶಕ ಎನ್. ಸೋಮಶೇಖರ್, ಶಿಯೊಮಿ ಕಂಪೆನಿಯು ಬೆಂಗಳೂರು ನಗರದಲ್ಲಿನ ಸಿಟಿ ಬ್ಯಾಂಕ್, ಐಡಿಬಿಐ ಬ್ಯಾಂಕ್, ಡ್ವಾಯಿಷ್ ಬ್ಯಾಂಕ್, ಎಚ್ಎಸ್ಬಿಸಿ ಬ್ಯಾಂಕ್ಗಳ ಚಾಲ್ತಿ ಖಾತೆ ಮತ್ತು ನಿಶ್ಚಿತ ಠೇವಣಿಗಳಲ್ಲಿ ಹೊಂದಿರುವ 5,551.27 ಕೋಟಿ ರೂ. ಬೃಹತ್ ಮೊತ್ತವನ್ನು ಜಪ್ತಿ ಮಾಡಬೇಕು ಎಂದು 2022ರ ಎ. 29ರಂದು ಆದೇಶಿಸಿದ್ದರು. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು