ಆತಂಕದಲ್ಲೇ ಶಿರಾಡಿ ಸಂಚಾರ ಪ್ರಾರಂಭ
Team Udayavani, Aug 12, 2019, 3:00 AM IST
ನೆಲ್ಯಾಡಿ: ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಾನಿಗೀಡಾಗಿದ್ದ ಶಿರಾಡಿ ಘಾಟಿ ರಸ್ತೆಯಲ್ಲಿ ಆತಂಕದಿಂದಲೇ ವಾಹನ ಸಂಚಾರ ಪ್ರಾರಂಭವಾಗಿದೆ. ಭಾನುವಾರ ಮಳೆ ತುಸು ಕಡಿಮೆಯಾದ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿ ತ್ತಾದರೂ ಸಂಜೆಯವರೆಗೂ ವಾಹನಗಳು ಆತಂಕದಿಂದಲೇ ಸಂಚರಿಸಿದವು.
ಶನಿವಾರ ತಡರಾತ್ರಿ ಲಾರಿಯೊಂದು ಶಿರಾಡಿ ಗಡಿಯ ಮೇಲ್ಭಾಗದಲ್ಲಿ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದ ಪರಿಣಾಮ ಸಂಚಾರಕ್ಕೆ ಸ್ವಲ್ಪ ಕಾಲ ತಡೆಯುಂಟಾಗಿತ್ತು. ಬೆಳಗಿನ ವೇಳೆ ಲಾರಿಯನ್ನು ತೆರವುಗೊಳಿಸಿದ ಬಳಿಕ ಸಂಚಾರ ಸುಗಮವಾಯಿತು. ಭಾನುವಾರ ಬೆಳಗ್ಗೆ 10 ಗಂಟೆಯ ಬಳಿಕ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಘನ ವಾಹನಗಳಿಗೂ ಸಂಜೆ 6 ಗಂಟೆಯ ವರೆಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ರಾತ್ರಿ ಗುಡ್ಡ ಕುಸಿತದ ಭೀತಿಯಿರುವ ಕಾರಣ ನಿರ್ಬಂಧ ಹೇರಲಾಗಿತ್ತು. ಸೋಮವಾರ ಪರಿಸ್ಥಿತಿ ನೋಡಿಕೊಂಡು ಅಪಾಯವಿಲ್ಲದಿದ್ದರೆ ಸಂಚಾರ ಪ್ರಾರಂಭಗೊಳ್ಳುವ ನಿರೀಕ್ಷೆ ಇದೆ. ಈ ಮಧ್ಯೆ, ಶನಿವಾರ ರಾತ್ರಿಯಿಂದಲೇ ಘನ ವಾಹನಗಳನ್ನು ಗುಂಡ್ಯ ಪ್ರದೇಶದಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡಿದ್ದರಿಂದ ಗುಂಡ್ಯ ಜಂಕ್ಷನ್ ಇಡೀ ಬ್ಲಾಕ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ