ಜೈಲಿನಿಂದ ಬಂದ ಮೇಲೆ ಅಧ್ಯಕ್ಷರನ್ನಾಗಿ ಮಾಡಿಲ್ಲವೇ?

ಡಿ.ಕೆ. ಶಿವಕುಮಾರ್‌ ವಿರುದ್ಧ ನಳಿನ್‌ ಕುಮಾರ್‌ ಕಟೀಲ್‌ ವಾಗ್ಧಾಳಿ

Team Udayavani, Mar 8, 2023, 7:25 AM IST

ಜೈಲಿನಿಂದ ಬಂದ ಮೇಲೆ ಅಧ್ಯಕ್ಷರನ್ನಾಗಿ ಮಾಡಿಲ್ಲವೇ?

ಬೆಂಗಳೂರು: ತಿಹಾರ್‌ ಜೈಲಿಗೆ ಹೋಗಿ ಬಂದವರನ್ನು ಕಾಂಗ್ರೆಸ್‌ನಲ್ಲಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಅವರನ್ನು ಏಕೆ ಪಕ್ಷದಿಂದ ವಜಾ ಮಾಡಿರಲಿಲ್ಲ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವಾಗ್ಧಾಳಿ ನಡೆಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿ ಗಾರರ ಜತೆ ಮಾತನಾಡಿದ ಅವರು, ಯಾರೇ ಭ್ರಷ್ಟಾಚಾರ ನಡೆಸಿದರೂ ನಮ್ಮ ಪಕ್ಷ ಸಹಿಸುವುದಿಲ್ಲ. ಮಾಡಾಳು ವಿರೂಪಾಕ್ಷಪ್ಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಪೂರ್ಣವಾದ ವರದಿ ಕೇಳಿದ್ದೇನೆ. ಆ ವರದಿಯನ್ನು ಪಕ್ಷದ ಸಂಸದೀಯ ಮಂಡಳಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಅನಂತರ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಹಿಂದೆ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿದ್ದರು. ಲೋಕಾಯುಕ್ತದ ಕೈ ಕಟ್ಟಿ ಹಾಕಿ ಕೆಲಸ ಮಾಡಿಸುತ್ತಿದ್ದರು. ಇಂದು ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ಪಕ್ಷಕ್ಕೆ ನಾನು ಕೆಲವು ಪ್ರಶ್ನೆ ಕೇಳಲು ಬಯಸುತ್ತೇನೆ. ಕಾಂಗ್ರೆಸ್‌ ರಾಜ್ಯಾಧ್ಯಕ್ಷ ತಿಹಾರ್‌ ಜೈಲಿಗೆ ಹೋಗಿಬಂದವರು. ಅವರನ್ನು ಯಾಕೆ ವಜಾ ಮಾಡಲಿಲ್ಲ ? ಜೈಲಿನಿಂದ ಬಂದ ಮೇಲೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಜನರ ವಿಶ್ವಾಸ ಗಳಿಸಿದ್ದೇವೆ
ಯಾವುದೇ ಆಸೆ ಆಕಾಂಕ್ಷೆಗಳು ಇಲ್ಲದೆ ಇಂದು ಅನ್ಯ ಪಕ್ಷದ ಮುಖಂಡರು ಬಿಜೆಪಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯ ವೈಖರಿ, ಬಿಜೆಪಿ ಸಿದ್ಧಾಂತ, ಬೊಮ್ಮಾಯಿ ಸರಕಾರದ ಸಾಧನೆಗಳನ್ನು ಮೆಚ್ಚಿ ಪಕ್ಷಕ್ಕೆ ಬಂದಿದ್ದಾರೆ. ಇವರೆಲ್ಲರೂ ಪಕ್ಷದ ಕೆಲಸ ಮಾಡಿ ಎತ್ತರಕ್ಕೆ ಬೆಳೆಯುತ್ತಾರೆ. ರಾಜ್ಯದಲ್ಲೂ ಪಕ್ಷದ ಪರವಾದ ಅಲೆ ಬೀಸುತ್ತಿದೆ. ಅತೀ ಹೆಚ್ಚು ಜನರು ಬಿಜೆಪಿ ಕಡೆ ಬರುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ನರೇಂದ್ರ ಮೋದಿ ಯೋಜನೆಗಳು ಜನರ ಮನಸನ್ನು ಸೆಳೆದಿವೆ. ಬೊಮ್ಮಾಯಿ, ಯಡಿಯೂರಪ್ಪ ಸರಕಾರದ ಸಾಧನೆಗಳು ಕೂಡ ಜನರ ವಿಶ್ವಾಸ ಗಳಿಸಿವೆ. ನಾಲ್ಕು ಯಾತ್ರೆ ಗಳು ಕೂಡ ಅಭೂತಪೂರ್ವ ಯಶಸ್ಸು ಕಾಣುತ್ತಿವೆ ಎಂದರು.

ಕಾಂಗ್ರೆಸ್‌ಗೆ ಉಗ್ರರು ಅಮಾಯಕರೇ?
ದೇಶಾದ್ಯಂತ ಕಾಂಗ್ರೆಸ್‌ ದುಸ್ಥಿತಿಯಲ್ಲಿದ್ದರೆ ರಾಜ್ಯದಲ್ಲಿ ಕೆಲವರು ಮುಖ್ಯಮಂತ್ರಿಯಾಗುವುದಕ್ಕೆ ಶರ್ಟ್‌-ಪ್ಯಾಂಟ್‌ ಹೊಲಿಸಿಕೊಂಡು ಕಾಯುತ್ತಿದ್ದಾರೆ. ಆದರೆ ಅವರ ಆಸೆ ಎಂದಿಗೂ ನನಸಾಗುವುದಿಲ್ಲ. ಬಿಜೆಪಿ 150 ಸ್ಥಾನ ಗೆದ್ದೇ ಗೆಲ್ಲುತ್ತದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಬಗ್ಗೆ ವ್ಯಂಗ್ಯವಾಡಿದರು. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಿಸಿದಾಗ ಅವನನ್ನು ಅಮಾಯಕ ಎಂದು ಕರೆದಿದ್ದರು. ಅಂಥವರ ವಿರುದ್ಧ ಕ್ರಮ ಕೈಗೊಂಡರೆ ಇದನ್ನು ಕಾಂಗ್ರೆಸ್‌ ವಿರೋಧಿಸುತ್ತದೆ. ಹಾಗಾದರೆ ಕಾಂಗ್ರೆಸ್‌ ಮೂಲಭೂತವಾದಿ ಸಂಘಟನೆಗಳ ಪರವಲ್ಲವೇ ಎಂದು ಕಟೀಲ್‌ ಪ್ರಶ್ನಿಸಿದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.