ಹರ್ಷ ಹತ್ಯೆ: ಐದು ಆಯಾಮದಲ್ಲಿ ತನಿಖೆ; ಕಲ್ಲು ತೂರಿದವರ ಬಂಧನಕ್ಕೆ ಸಿದ್ಧತೆ

40ಕ್ಕೂ ಹೆಚ್ಚು ಎಫ್ಐಆರ್‌ ದಾಖಲು

Team Udayavani, Mar 3, 2022, 7:35 AM IST

ಹರ್ಷ ಹತ್ಯೆ: ಐದು ಆಯಾಮದಲ್ಲಿ ತನಿಖೆ; ಕಲ್ಲು ತೂರಿದವರ ಬಂಧನಕ್ಕೆ ಸಿದ್ಧತೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಶಿವಮೊಗ್ಗ ಪೊಲೀಸರು ಐದು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಹಳೇ ವೈಷಮ್ಯದ ರೀತಿ ಕಂಡುಬಂದರೂ ಒಂದೊತ್ತಿನ ಊಟಕ್ಕೆ ಹೆಣಗಾಡುವ ಪರಿಸ್ಥಿತಿಯಲ್ಲಿರುವ ಆರೋಪಿಗಳು ಹೊಂಚು ಹಾಕಿ ಕೊಲೆ ಮಾಡಿದ್ದವರ ಹಿಂದಿನ ಮರ್ಮವೇನು ಎಂದು ತಿಳಿಯಲು ಪೊಲೀಸರು ಮುಂದಾಗಿ ದ್ದಾರೆ. ಇದಕ್ಕಾಗಿ 5 ಆಯಾಮದಲ್ಲಿ ತನಿಖೆ ಆರಂಭವಾಗಿದೆ.

ವೈಯಕ್ತಿಕ ದ್ವೇಷವೇ?
ಹರ್ಷ ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಖಾಸಿಫ್‌ಗೂ ಹಾಗೂ ಹರ್ಷ ನಡುವೆ 2015ರಿಂದಲೂ ಹಗೆತನವಿತ್ತು. ಇದೇ ಕಾರಣಕ್ಕೆ ಖಾಸಿಫ್‌ ವೈಯ ಕ್ತಿಕ ಹಗೆತನ ತೀರಿಸಿಕೊಳ್ಳಲು ಸ್ನೇಹಿತರನ್ನು ಬಳಸಿಕೊಂಡನೇ ಎನ್ನುವ ಕುರಿತ ಆಯಾಮದಲ್ಲೂ ತನಿಖೆ ನಡೆಯತ್ತಿದೆ.

ಹಿಜಾಬ್‌ ಗಲಾಟೆಯೇ?
ನಗರದಲ್ಲಿ ಹಿಜಾಬ್‌ ಗಲಾಟೆ ತಾರಕಕ್ಕೇರಿತ್ತು. ಈ ವೇಳೆ ಹರ್ಷ ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಿದ್ದ ಎಂದು ಹೇಳ ಲಾಗುತ್ತಿದೆ. ಇದೇ ಕಾರಣಕ್ಕೆ ಹರ್ಷ ಕೊಲೆ ಮಾಡಲಾಗಿದೆಯೇ, ಇದಕ್ಕಾಗಿ ಹಳೇ ದ್ವೇಷಿಗಳನ್ನು ಬಳಸಿಕೊಂಡರೆ ಎಂಬ ಬಗ್ಗೆಯೂ ತನಿಖೆ ನಡೆದಿದೆ.

ಕೋಮು ವೈಷಮ್ಯವೇ?
ಕೊಲೆಯಾದ ಹರ್ಷ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ. ಕೋಮು ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಗಲಾಟೆಯಲ್ಲಿ ಹರ್ಷ ಭಾಗಿಯಾಗಿದ್ದ. ಇದೇ ಕಾರಣದಿಂದ ಹರ್ಷ ಜೈಲಿಗೂ ಹೋಗಿ ಬಂದಿದ್ದ. ಕೋಮು ವೈಷಮ್ಯದ ಹಿನ್ನೆಲೆಯಲ್ಲಿ ಹರ್ಷ ಕೊಲೆಯಾದನೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

ಸಹಚರರ ಬಳಸಿ ಹತ್ಯೆ?
ಹರ್ಷ ಹಿಂದೂ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದ. ಹೀಗಾಗಿ ಈತ ಹಲವರ ವಿರೋಧವನ್ನೂ ಕಟ್ಟಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಖಾಸಿಫ್‌ ಹಾಗೂ ಸಹಚರರನ್ನು ಬಳಸಿಕೊಂಡು ಹರ್ಷನನ್ನು ಕೊಲೆ ಮಾಡಿಸಿದ್ದಾರಾ ಎಂಬ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ.

ಸಂಘಟನೆಗಳ ಪಾತ್ರ?
ಹರ್ಷ ಪ್ರಖರ ಹಿಂದುತ್ವವಾದಿ. ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಒಮ್ಮೆ ವಿವಾದಾತ್ಮಕ ಪೋಸ್ಟ್‌ ಶೇರ್‌ ಮಾಡಿದ್ದ. ಹೀಗಾಗಿ ಕೆಲ ಸಂಘಟನೆಗಳಿಂದ ಬೆದರಿಕೆ ಕರೆಗಳೂ ಬಂದಿದ್ದವು. ಆ ಸಂಘಟನೆಗಳು ಹರ್ಷನನ್ನು ಕೊಲೆ ಮಾಡಿಸಿವೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಲಾಂಗ್‌ ತೋರಿಸಿದವ ಅರೆಸ್ಟ್‌
ಹರ್ಷನ ಅಂತಿಮ ಯಾತ್ರೆ ವೇಳೆ ನಡೆದ ಕಲ್ಲು ತೂರಾಟ ಸಂದರ್ಭ ಪೊಲೀಸರಿಗೆ ಲಾಂಗ್‌ ತೋರಿಸಿದ ಸಜ್ಜತ್‌ನನ್ನು ಬಂ ಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.