ಬಿಎಸ್‌ವೈ, ಈಶ್ವರಪ್ಪ, ಡಿಎಚ್‌ಎಸ್‌ ರಾಜಕೀಯ ಇತಿಶ್ರೀ?

75ರ ಹೊಸ್ತಿಲಲ್ಲಿರುವ ಪ್ರಮುಖ ತ್ರಿಮೂರ್ತಿಗಳು

Team Udayavani, Apr 15, 2022, 7:10 AM IST

ಬಿಎಸ್‌ವೈ, ಈಶ್ವರಪ್ಪ, ಡಿಎಚ್‌ಎಸ್‌ ರಾಜಕೀಯ ಇತಿಶ್ರೀ?

ಶಿವಮೊಗ್ಗ: ಕೆ.ಎಸ್‌. ಈಶ್ವರಪ್ಪ ಅವರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದ  ತ್ರಿಮೂರ್ತಿಗಳ ಅಧಿಕಾರ ರಾಜಕಾರಣದ  ಶಕೆ ಮುಗಿಯಿತೇ ಎಂಬ ಪ್ರಶ್ನೆ ಮೂಡಲಾರಂಭಿಸಿದೆ.

75ರ ಹೊಸ್ತಿಲಲ್ಲಿರುವ ಬಿ.ಎಸ್‌. ಯಡಿಯೂರಪ್ಪ, ಕೆ.ಎಸ್‌. ಈಶ್ವರಪ್ಪ ಹಾಗೂ ಡಿ.ಎಚ್‌. ಶಂಕರಮೂರ್ತಿ ಅವರಿಗೆ ಇನ್ನು ರಾಜಕೀಯದಲ್ಲಿ ಯಾವುದೇ ಪ್ರಮುಖ ಅಧಿಕಾರ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಯಾವುದೇ ಸ್ಥಾನಮಾನ ನೀಡಬಾರದು ಎಂಬ ನಿಯಮವಿದೆ. ಈಗಾಗಲೇ  ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಡಿ.ಎಚ್‌.ಶಂಕರಮೂರ್ತಿ ಚುನಾವಣೆ ರಾಜಕಾರಣದಿಂದ ದೂರ ಉಳಿದಿದ್ದಾರೆ.  ಸಚಿವ ಸ್ಥಾನದಿಂದ ಕೆಳಗಿಳಿಯುತ್ತಿರುವ ಈಶ್ವರಪ್ಪ ಅವರಿಗೆ ಈಗ 74 ವರ್ಷ. ಮುಂದಿನ ವಿಧಾನಸಭೆ ಚುನಾವಣೆ ಹೊತ್ತಿಗೆ 75 ವರ್ಷ ಪೂರೈಸುತ್ತಾರೆ. ಪಕ್ಷದ ನಿಯಮದ ಪ್ರಕಾರ ಟಿಕೆಟ್‌ ವಂಚಿತರಾಗುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗಿದೆ.

ಬಸವರಾಜ ಬೊಮ್ಮಾಯಿ ಸಿಎಂ ಆದಾಗ ಈಶ್ವರಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂಬ ಚರ್ಚೆ ಜೋರಾಗಿತ್ತಾದರೂ  ಕೊನೆ ಕ್ಷಣದಲ್ಲಿ ಸಂಪುಟ ಸೇರಿ ಮತ್ತೆ ಅದೇ ಖಾತೆಯನ್ನು ಪಡೆದುಕೊಂಡರು. ಆದರೆ ಈಗ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ ತಳುಕು ಹಾಕಿಕೊಂಡ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪ ಮತ್ತೆ ಸಂಪುಟ ಸೇರುವುದು ಅನುಮಾನ ಎಂದೇ ಪಕ್ಷದ ಮೂಲಗಳು ತಿಳಿಸುತ್ತವೆ.

ಬಿಜೆಪಿಯ ತ್ರಿಮೂರ್ತಿಗಳು ಅಧಿಕಾರ ರಾಜಕಾರಣದಿಂದ ದೂರವಾದರೂ ಅವರ ಮಕ್ಕಳು ಮುಂಚೂಣಿಗೆ ಬರಲಿದ್ದಾರೆ.  ಬಿ.ಎಸ್‌.ಯಡಿಯೂರಪ್ಪ ಪುತ್ರರಾದ ಬಿ.ವೈ.ರಾಘವೇಂದ್ರ  ಸಂಸದರಾಗಿದ್ದು, ಬಿ.ವೈ.ವಿಜಯೇಂದ್ರ ಪಕ್ಷದ ಉಪಾಧ್ಯಕ್ಷರಾಗಿದ್ದಾರೆ. ಡಿ.ಎಚ್‌. ಶಂಕರಮೂರ್ತಿ ಅವರ ಪುತ್ರ ಡಿ.ಎಸ್‌.ಅರುಣ್‌ ಆರ್ಯವೈಶ್ಯ ನಿಗಮದ ಅಧ್ಯಕ್ಷರಾಗಿದ್ದರು. ಈಗ ವಿಧಾನ ಪರಿಷತ್‌ ಪ್ರವೇಶ ಮಾಡಿದ್ದಾರೆ. ಆದರೆ  ಈಶ್ವರಪ್ಪರ ಪುತ್ರ ಇನ್ನೂ ಮುನ್ನೆಲೆಗೆ ಬಂದಿಲ್ಲ. ಒಮ್ಮೆ ಜಿ.ಪಂ. ಸದಸ್ಯರಾಗಿರುವ ಕೆ.ಇ. ಕಾಂತೇಶ್‌ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಈಶ್ವರಪ್ಪ ಬಳಿಕ ಈ ಕ್ಷೇತ್ರದ ಟಿಕೆಟ್‌ಗೆ ಡಜನ್‌ಗಟ್ಟಲೆ ಆಕಾಂಕ್ಷಿಗಳಿದ್ದು ಕಾಂತೇಶ್‌ ಅವರ ಹಾದಿ ಸಹ ಅಷ್ಟು ಸಲೀಸಾಗಿಲ್ಲ ಎನ್ನಲಾಗಿದೆ.

ಮುಳ್ಳಿನ ಹಾದಿ :

ಕಾಂಗ್ರೆಸ್‌ನಿಂದ ಬೇಲಿಗೂಟ ನಿಲ್ಲಿಸಿದರೂ ಮತ ಹಾಕುತ್ತಾರೆ ಎಂಬಂತಿದ್ದ ಕಾಲದಲ್ಲಿ ಶಿವಮೊಗ್ಗದ ತ್ರಿಮೂರ್ತಿಗಳು ಪಕ್ಷ ಸಂಘಟನೆಗೆ ಶ್ರಮಿಸಿ ಬಿಜೆಪಿ ಹೆಸರೇ ಗೊತ್ತಿಲ್ಲದಂತಹ ಸಂದರ್ಭ ಜನರ ಸಮಸ್ಯೆಗಳನ್ನು ಎತ್ತಿಕೊಂಡು ಹೋರಾಟ ರೂಪಿಸಿ ಸೈಕಲ್‌ನಲ್ಲಿ ಊರೂರು ಸುತ್ತಿ ಪಕ್ಷ ಸಂಘಟನೆ ಮಾಡಿದ್ದರು. ರಾಜಕೀಯದ ಕೊನೆಗಾಲದಲ್ಲಿ ಬಿಎಸ್‌ವೈ  ನಿರ್ಗಮನವಾಗಿತ್ತು. ಅದೇ ರೀತಿ ಕೆ.ಎಸ್‌. ಈಶ್ವರಪ್ಪ ಅವರ ನಿರ್ಗಮನವೂ ಆಗಿದೆ.

 

-ಶರತ್‌ ಭದ್ರಾವತಿ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.