ಐಟಿ ದಾಳಿ ಬಳಿಕ ಶಿವರಾಜ್ಕುಮಾರ್, ಪುನೀತ್ ಮೊದಲ ಪ್ರತಿಕ್ರಿಯೆ
Team Udayavani, Jan 5, 2019, 5:16 AM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 2 ದಿನಗಳ ಕಾಲ ನಿರಂತರ ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ಹ್ಯಾಟ್ರಿಕ್ ಹಿರೋ ಶಿವರಾಜ್ಕುಮಾರ್ ಮತ್ತು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ರಾತ್ರಿ 11.30 ರ ವೇಳೆಗೆ ಐಟಿ ಅಧಿಕಾರಿಗಳು ಮನೆಯಿಂದ ತೆರಳಿದ ಬಳಿಕ ಮಾತನಾಡಿದ ಪುನೀತ್ ರಾಜ್ಕುಮಾರ್, ಐಟಿಗೆ ನಾವು ನಾಗರಿಕರಾಗಿ ಸಹಕರಿಸಿದ್ದೇವೆ. ನಾವು ಅವರಿಗೆ ತೊಂದರೆ ಕೊಟ್ಟಿಲ್ಲ, ಅವರೂ ನಮಗೆ ತೊಂದರೆ ಕೊಟ್ಟಿಲ್ಲ ಸಹಕರಿಸಿದ್ದೇವೆ ಅಷ್ಟೇ ಎಂದರು.
ಅಕೌಂಟ್ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದರೆ ದಾಳಿ ಮಾಡುತ್ತಾರೆ. 1984 ರಲ್ಲಿ ಚೆನ್ನೈನಲ್ಲಿ ಇರುವಾಗಲೂ ದಾಳಿ ನಡೆದಿತ್ತು ಎಂದರು.
ಸ್ವಲ್ಪ ನೋವಾಗಿದೆ
ಶನಿವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ಕುಮಾರ್
ನನ್ನ ಮನೆಯ ಮೇಲೆ ಮೊದಲ ಬಾರಿ ದಾಳಿ ಆಗಿದೆ, ಕಾರಣ ಗೊತ್ತಿಲ್ಲ .ಆದಾಯ ತೆರಿಗೆ ಪಾವತಿಯ ಎಲ್ಲಾ ದಾಖಲೆಗಳು ಸರಿಯಾಗಿವೆ ಎಂದರು.
ಚೆನ್ನೈನಲ್ಲಿ ಇರುವಾರ 1984 ಮತ್ತು 85 ರಲ್ಲೂ ದಾಳಿ ನಡೆದಿತ್ತು. ಮೊನ್ನೆ ದಾಳಿ ಆದಾಗ ಸ್ವಲ್ಪ ಬೇಸರ ಆಗಿತ್ತು. ಸ್ವಲ್ಪ ಕಿರಿಕಿರಿಯಾದರೂ ದಾಖಲೆಗಳನ್ನು ನೀಡಬೇಕಿತ್ತು ಎಂದರು.
ಐಟಿ ಇಲಾಖೆಯವರು ಅವರ ಕೆಲಸ ಮಾಡಿದ್ದಾರೆ. ಇಂದು ಚನ್ನಪಟ್ಟಣದಲ್ಲಿ ದ್ರೋಣ ಚಿತ್ರೀಕರಣವಿತ್ತು, ಅದನ್ನು ರದ್ದು ಮಾಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ