ಶೋಭಾಗೆ ಪರಿವರ್ತನಾ ಯಾತ್ರೆ ಉಸ್ತುವಾರಿ
Team Udayavani, Oct 7, 2017, 9:45 AM IST
ಬೆಂಗಳೂರು: ಕರ್ನಾಟಕ ನವನಿರ್ಮಾಣದ ಸಂಕಲ್ಪದೊಂದಿಗೆ ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಗೆ ಸಂಸದೆ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಅವರಿಗೆ ಮತ್ತಷ್ಟು ಜವಾಬ್ದಾರಿ ನೀಡಿದಂತಾಗಿದೆ.
ಕರ್ನಾಟಕ ನವ ನಿರ್ಮಾಣ ಪರಿವರ್ತನಾ ಯಾತ್ರೆ ಎರಡು ಭಾಗದಲ್ಲಿ ನಡೆಯಲಿದೆ. ರಾಜ್ಯದ ದಕ್ಷಿಣ ಭಾಗದ ಪರಿವರ್ತನಾ ಯಾತ್ರೆ ನ.2ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇದಾದ ನಂತರ ಉತ್ತರ ಕರ್ನಾಟಕ ಭಾಗದ ಪರಿವರ್ತನಾ ಯಾತ್ರೆ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಈ ಎರಡೂ ಯಾತ್ರೆಯ ಉಸ್ತುವಾರಿಯನ್ನು ಶೋಭಾ ಅವರ ಹೆಗಲಿಗೆ ಏರಿಸಲಾಗಿದೆ.
ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರದ ವಿರುದ್ಧ ಸದಾ ಟೀಕೆ, ವಾಗ್ಧಾಳಿ ಮಾಡಿಕೊಂಡು ಬರುತ್ತಿರುವ ಶೋಭಾ ಅವರು ಇತ್ತೀಚೆಗಷ್ಟೆ ಸರ್ಕಾರದ ಭ್ರಷ್ಟಾಚಾರದ ಕುರಿತು ದಾಖಲೆ ಸಮೇತ ಗಂಭೀರ ಆರೋಪ ಮಾಡಿದ್ದರು. ಅವರ ಕಾರ್ಯವೈಖರಿ ಗಮನಿಸಿ ರಾಜ್ಯ ಬಿಜೆಪಿ ಅವರಿಗೆ ಮತ್ತಷ್ಟು ಜವಾಬ್ದಾರಿ ನೀಡಿದೆ.
ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಯಾತ್ರೆಯನ್ನು ಯಶಸ್ಸುಗೊಳಿಸಿದರೆ, ಪಕ್ಷದ ವಲಯದಲ್ಲಿ ಅವರ ವರ್ಚಸ್ಸು ಇನ್ನಷ್ಟು ಹೆಚ್ಚಲಿದೆ. ಜೊತೆಗೆ, ಯಾತ್ರೆಯ ಯಶಸ್ಸಿಗಾಗಿ ಜಿಲ್ಲಾ ಮತ್ತು ಕ್ಷೇತ್ರಮಟ್ಟದಲ್ಲಿ ಪ್ರಮುಖರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ