ಎರಡನೇ ಡೋಸ್ ಗೂ ಲಸಿಕೆ ಕೊರತೆ! ಉಳಿದಿರೋದು ಎರಡು ಲಕ್ಷ ಡೋಸ್ ಲಸಿಕೆ; ನಾಳೆ ಅದೂ ಖಾಲಿ!


Team Udayavani, May 2, 2021, 7:48 AM IST

ಎರಡನೇ ಡೋಸ್ ಗೂ ಲಸಿಕೆ ಕೊರತೆ! ಉಳಿದಿರೋದು ಎರಡು ಲಕ್ಷ ಡೋಸ್ ಲಸಿಕೆ; ನಾಳೆ ಅದೂ ಖಾಲಿ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ 10 ಲಕ್ಷ ಮಂದಿ ಎರಡನೇ ಡೋಸ್ ಗೆ ಎದುರು ನೋಡುತ್ತಿದ್ದಾರೆ. ಆದರೆ, ಲಸಿಕಾ ಕೇಂದ್ರದ ಬಳಿ ಇವರಿಗೆ  ನೋ ಸ್ಟಾಕ್/ ನಾಳೆ ಬನ್ನಿ ಎಂಬ ಉತ್ತರ ಸಿಗುತ್ತಿದೆ.

ಕೊರೊನಾ ಲಸಿಕೆ ದಾಸ್ತಾನು ಕೊರತೆಯು  ಕೇವಲ‌18 -44 ವರ್ಷದವರ ಲಸಿಕೆ ಆಭಿಯಾನಕ್ಕೆ ಹಿನ್ನಡೆ ಉಂಟುಮಾಡಿಲ್ಲ. ಎರಡನೇ ಡೋಸ್ ಪಡೆಯಬೇಕಿದ್ದವರಿಗೂ ಕೂಡಾ ಸಮಸ್ಯೆ ಉಂಟು ಮಾಡಿದೆ.

ಕೊವ್ಯಾಕ್ಸಿನ್ ಮೊದಲ ಡೋಸ್ ಪಡೆದವರು 28 ದಿನಗಳ ನಂತರ ಎರಡನೇ ಡೋಸ್, ಕೋವಿಶೀಲ್ಡ್ ಮೊದಲ ಡೋಸ್ ಪಡೆದವರು 6 ವಾರಗಳ ನಂತರ ಎರಡನೇ ಡೋಸ್ ಹಾಕಿಸಿಕೊಳ್ಳಬೇಕು.

ಸದ್ಯ ರಾಜ್ಯದಲ್ಲಿ 3 ಲಕ್ಷಕ್ಕೂ ಅಧಿಕ ಹಿರಿಯರು ಮತ್ತು ಆರೋಗ್ಯ ಸಮಸ್ಯೆ ಹೊಂದಿದವರು ಮೊದಲ ಡೋಸ್ ಪಡೆದು ಆರು ವಾರ ಕಳೆದಿದ್ದು, ಎರಡನೇ ಡೋಸ್ ಶೀಘ್ರ ನೀಡಬೇಕಿದೆ.  ಅಲ್ಲದೆ, 8.12 ಲಕ್ಷ ಹಿರಿಯ ನಾಗರಿಕರು ಮತ್ತು 2.5 ಲಕ್ಷ 45-59 ವರ್ಷದವರು ಮೊದಲ ಡೋಸ್ ಲಸಿಕೆ ಪಡೆದು ಐದು ವಾರ ಪೂರ್ಣಗೊಂಡಿದ್ದು, ಇವರಿಗೆ ಮುಂದಿನ ವಾರಾಂತ್ಯದಲ್ಲಿ ಎರಡನೇ  ಡೋಸ್ ಲಸಿಕೆ ಹಾಕಬೇಕಿದೆ. ಆದರೆ, ಕೇಂದ್ರ ಸರ್ಕಾರದಿಂದ ಅಗತ್ಯ ಪ್ರಮಾಣದಲ್ಲಿ ಲಸಿಕೆ ಲಭ್ಯವಾಗದ ಕಾರಣ ಎರಡನೇ ಡೋಸ್ ಗೂ ದಾಸ್ತಾನು ಕೊರತೆಯಾಗಿದೆ ಎದುರಾಗಿದೆ.

2 ಲಕ್ಷ ಡೋಸ್ ಮಾತ್ರ ಲಭ್ಯ

ಶುಕ್ರವಾರದ ಅಂತ್ಯಕ್ಕೆ ರಾಜ್ಯದಲ್ಲಿ ಮೂರು ಲಕ್ಷ ಡೋಸ್ ನಷ್ಟು ಲಸಿಕೆ ಇತ್ತು. 18 ವರ್ಷ ಮೇಲ್ಪಟ್ಟ ಲಸಿಕೆ ಅಭಿಯಾನದ ಸಾಂಕೇತಿಕ‌ ಚಾಲಗೆ ಒಂದು ಲಕ್ಷ ಡೋಸ್ ಲಸಿಕೆ ಬಳಸಿಕೊಳ್ಳಲಾಗಿದೆ. ಬಾಕಿ ಇರುವ ಎರಡು ಲಕ್ಷ ಡೋಸ್  ಲಸಿಕೆಯು ಕೆಲ ಜಿಲ್ಲಾ ಕೇಂದ್ರಗಳಲ್ಲಿದೆ. ಇಂದಿಗೂ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಕಾಡುತ್ತಿದೆ. 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ಡೋಸ್ ಲಸಿಕೆಯೂ ಇಲ್ಲ.

ಮುಂದಿನ ವಾರಾಂತ್ಯ ಲಸಿಕೆ ಬರಬಹದು!

ಕೇಂದ್ರ ಸರ್ಕಾರದಿಂದ ಈ ವಾರದ ಲಸಿಕೆ ಬಂದಿದ್ದು, ಮತ್ತೆ ಮುಂದಿನ ವಾರದ ಅಂತ್ಯಕ್ಕೆ ನಾಲ್ಕರಿಂದ ಐದು ಲಕ್ಷ ಡೋಸ್ ಲಸಿಕೆ ಬರಬಹುದು ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಎರಡನೇ ಡೋಸ್ ಗೆ ಆದ್ಯತೆ!

ಸದ್ಯ ದಾಸ್ತಾನು ಲಭ್ಯವಿರುವ ಕಡೆಗಳಲ್ಲಿ ಹೊಸಬರಿಗೆ ಅಥವಾ ಮೊದಲ ಡೋಸ್ ಪಡೆಯುವರಿಗಿಂತಲೂ ಎರಡನೇ ಡೋಸ್ ಪಡೆಯುವವರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರು ಕೂಡಾ ಎರಡನೇ ಡೋಸ್ ನವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆರೋಗ್ಯ ಇಲಾಖೆ ಲಸಿಕೆ ವಿಭಾಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.

ತಿಂಗಳಲ್ಲಿ 40 ಲಕ್ಷ ಮಂದಿಗೆ ಬೇಕು ಎರಡನೇ ಡೋಸ್ ಲಸಿಕೆ

ಮಾರ್ಚ್ ಮತ್ತು ಏಪ್ರಿಲ್ 15 ವರೆಗೆ ಪಡೆದವರು ಈ ತಿಂಗಳಲ್ಲಿ ಎರಡನೇ ಡೋಸ್ ಲಸಿಕೆ ಪಡೆಯಬೇಕಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, 25 ಲಕ್ಷ ಹಿರಿಯರು, 15 ಲಕ್ಷ 45-59 ವರ್ಷದವರಿಗೆ ಈ ತಿಂಗಳಲ್ಲಿ ಎರಡನೇ ಡೋಸ್ ನೀಡಬೇಕಿದೆ.

ಸಮಯ ಇದೆ ಗಾಬರಿ ಬೇಡ

ಈ ಹಿಂದ 28 ದಿನ ನಂತರ ಎರಡನೇ ಡೋಸ್ ಎಂದಿತ್ತು. ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಾರ ಕೋವಿಶೀಲ್ಡ್ ಪಡೆದವರು ಆರರಿಂದ ಎಂಟು ವಾರದ ಒಳಗೆ ಎರಡನೇ ಡೋಸ್ ಪಡೆಯಬೇಕು.  ಆರು ವಾರ ಪೂರ್ಣಗೊಂಡವರಿಗೆ ಇನ್ನು ಸಮಯವಿದೆ. ರಾಜ್ಯದಲ್ಲಿ ಶೇ. 90 ಕ್ಕೂ ಅಧಿಕ‌ ಕೋವಿಶೀಲ್ಡ್ ವಿತರಿಸಿಲಾಗಿದೆ. ಅನಗತ್ಯ ಗಾಬರಿ ಬೇಡ ಎಂದು ಲಸಿಕೆ ವಿಭಾಗದ ಉಪನಿರ್ದೇಶಕಿ ಡಾ.ಬಿ.ಎನ್.ರಜನಿ ತಿಳಿಸಿದ್ದಾರೆ.

ನಾಳೆ ಬಾ

ಲಸಿಕಾ ಕೇಂದ್ರಗಳಿಗೆ ತೆರಳುವವರಿಗೆ ನಾಳೆ ಬನ್ನಿ ಎಂಬ ಉತ್ತರ ಸಿಗುತ್ತಿದೆ. ಮೊದಲ  ಡೋಸ್ ಪಡೆದಾಗ ಏಪ್ರಿಲ್ ಕೊನೆಯವಾರ ವಾರ ಎರಡನೇ ಡೋಸ್ ಗೆ ಬನ್ನಿ ಎಂದು ಚೀಟಿ ಬರೆದುಕೊಟ್ಟಿದ್ದರು ಬಂದರೆ ಲಸಿಕೆ ಇಲ್ಲ ಎರಡು ದಿನ ಬಿಟ್ಟು ಬನ್ನಿ ಎನ್ನುತ್ತಾರೆ. ಎರಡು ಮೂರು ಬಾರಿ ಇದೇ ಸಮಸ್ಯೆಯಾಗಿದೆ ಎಂದು ಚಾಮರಾಜಪೇಟೆಯ ಹಿರಿಯ ನಾಗರಿಕೆ ರಾಮಣ್ಣ ಬೇಸರ ವ್ಯಕ್ತಪಡಿಸಿದರು. ಬಹುತೇಕ ಜಿಲ್ಲೆಗಳಲ್ಲಿಯೂ ಇದೇ ಸ್ಥಿತಿ ಇದೆ. ಕೆಲವರು ಲಸಿಕಾ ಕೇಂದ್ರದ ಸಿಬ್ಬಂದಿಗಳ ಜತೆ ವಾಗ್ವಾದಕ್ಕೆ ಇಳಿಯುತ್ತಿದ್ದಾರೆ.

ನಾಳೆಗೆ ಲಸಿಕೆ ಖಾಲಿ

ಶನಿವಾರದ ಅಂತ್ಯಕ್ಕೆ ರಾಜ್ಯದಲ್ಲಿ ಎರಡು ಲಕ್ಷ ಡೋಸ್ ಮಾತ್ರ ಕೊರೊನಾ ಲಸಿಕೆ ದಾಸ್ತಾನು ಇತ್ತು. ಸದ್ಯ ನಿತ್ಯ ಸರಾಸರಿ ಒಂದು ಲಕ್ಷ ಡೋಸ್ ಬೇಡಿಕೆ ಇದ್ದು,  ಭಾನುವಾರ ಮತ್ತು ಸೋಮವಾರ ತಲಾ ಒಂದು ಲಕ್ಷ ವಿತರಣೆಯಾದರೇ ಲಸಿಕೆ   ಸಂಪೂರ್ಣ ಖಾಲಿಯಾಗಲಿದೆ‌.

 

ಜಯಪ್ರಕಾಶ್ ಬಿರಾದಾರ್

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.