ಜಿಲ್ಲೆಗಳನ್ನು ಕಾಡುತ್ತಿವೆ ರೆಮಿಡೆಸಿವಿರ್ ಕೊರತೆ
Team Udayavani, May 5, 2021, 6:40 AM IST
ಬೆಂಗಳೂರು: ಕೋವಿಡ್ ಸೋಂಕಿತರ ಜೀವ ಉಳಿಸಲು ಅಗತ್ಯ ಔಷಧಗಳಲ್ಲಿ ಒಂದಾದ ರೆಮಿಡೆಸಿವಿರ್ ಚುಚ್ಚುಮದ್ದಿನ ಕೊರತೆಯನ್ನು ರಾಜ್ಯದ ಬಹುತೇಕ ಜಿಲ್ಲೆಗಳು ಎದುರಿಸುತ್ತಿವೆ. ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಗೆ ಹೋಲಿಸಿದರೆ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿಲ್ಲ. ಕೆಲವೊಂದು ಜಿಲ್ಲೆಗಳಲ್ಲಿ ಬೇಡಿಕೆಗೆ ಸಾಕಾಗುವಷ್ಟು ದಾಸ್ತಾನು ಇದೆ.
ರೆಮಿಡೆಸಿವಿರ್ ಚುಚ್ಚುಮದ್ದಿನ ಬೇಡಿಕೆ ಹಿನ್ನೆಲೆಯಲ್ಲಿ ಕಾಳಸಂತೆಯಲ್ಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಪ್ರಕರಣಗಳೂ ಬಹು ತೇಕ ಜಿಲ್ಲೆಗಳಲ್ಲಿ ವರದಿಯಾಗುತ್ತಲೇ ಇವೆ. ಸರಕಾ ರದ ಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಗಳಿಗೂ ಪೂರೈಕೆಯಾಗುತ್ತಿದ್ದರೂ ಬಹುತೇಕ ಕಡೆ ಬೇಡಿಕೆಗೆ ತಕ್ಕಂತೆ ಬಳಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಎಲ್ಲೆಲ್ಲಿ ರೆಮಿಡೆಸಿವಿರ್ ಕೊರತೆ? :
ದಾವಣಗೆರೆ ಜಿಲ್ಲೆಯಲ್ಲಿ ಕೊರತೆ ಕಾಡುತ್ತಿದ್ದು, ಸದ್ಯ 20 ದಾಸ್ತಾನಿದೆ. ಪ್ರಸ್ತುತ ಇರುವ ರೋಗಿಗಳ ಸಂಖ್ಯೆಗೆ ಹೋಲಿಸಿದರೆ ಪ್ರತಿದಿನ 150-200 ಅಗತ್ಯವಿದೆ. ಆದರೆ ಬೇಡಿಕೆ ಇದ್ದಷ್ಟು ಪೂರೈಕೆ ಆಗುತ್ತಿಲ್ಲ. ಕಲಬುರಗಿಯಲ್ಲಿ ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಸರಕಾರಿ-ಖಾಸಗಿ ಆಸ್ಪತ್ರೆಗಳಿಗೆ 2-3 ದಿನಗಳಿಗೊಮ್ಮೆ ಸರಬರಾಜಾಗುತ್ತಿದೆ. ತುಮ ಕೂರಿನಲ್ಲಿ ಪ್ರತಿದಿನ 800 ರಿಂದ 1000 ಅಗತ್ಯ ವಿದ್ದರೆ ಬರುತ್ತಿರುವುದೇ 500 ಜನರಿಗೆ ನೀಡುವಷ್ಟು ಎಂದು ವೈದ್ಯರೇ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸರಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಸೋಂಕಿತರಿಗೆ ಈಗ ಸದ್ಯ 2583 ರೆಮ್ಡೆಸಿವಿಯರ್ ಅಗತ್ಯವಿದೆ. ಜಿಲ್ಲೆಯಲ್ಲಿ ಅಗತ್ಯವಾದಷ್ಟು ಚುಚ್ಚುಮದ್ದು ದಾಸ್ತಾನಿದೆ. ಸರಕಾರದಿಂದ ಸಮರ್ಪಕ ಪೂರೈಕೆ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಮೈಸೂರು ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಯಾವುದೇ ಕೊರತೆ ಎದುರಾಗಿಲ್ಲ. ವಿವಿಧ ಆಸ್ಪತ್ರೆ ಸೇರಿದಂತೆ 1018 ರೆಮಿಡಿಸಿವಿರ್ ಲಭ್ಯವಿದೆ. ಧಾರವಾಡ ಜಿಲ್ಲೆಯಲ್ಲಿ ಔಷಧದ ಕೊರತೆ ಇಲ್ಲ. ಚಿತ್ರದುರ್ಗ ಜಿಲ್ಲೆಗೆ ನಿತ್ಯ 500 ವಯಲ್ ಅಗತ್ಯವಿದೆ. ಸದ್ಯಕ್ಕೆ ಜಿಲ್ಲೆಗೆ ಸಾಕಾಗುವಷ್ಟು ಸರಬರಾಜಾಗುತ್ತಿದೆ.
1.62 ಲಕ್ಷ ರೆಮಿಡೆಸಿವಿರ್ ಲಭ್ಯ :
ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಮೇ 3ರಂದು 1.62 ಲಕ್ಷ ರೆಮಿಡೆಸಿವಿರ್ ಚುಚ್ಚು ಮದ್ದು ಪೂರೈಕೆಯಾಗಿದೆ. ಇದನ್ನು ಮುಂದಿನ (ಮೇ 3ರಿಂದ) ರವಿವಾರ (ಮೇ 9)ದ ವರೆಗೆ ಬಳಸಲಾಗುತ್ತದೆ. ವಾರದಿಂದ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಿರುವುದು ನಿಜ. ಆದರೆ, ರೆಮಿಡೆಸಿವಿರ್ ಕೊರತೆ ಉಂಟಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದ.ಕ., ಉಡುಪಿ: ಲಭ್ಯ :
ಉಡುಪಿ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ 144 ಲಭ್ಯವಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸ್ಟಾಕ್ ಇಲ್ಲ. ದಿನವೊಂದಕ್ಕೆ 300ರಷ್ಟು ಅಗತ್ಯ ಜಿಲ್ಲೆಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ 200 ರೆಮಿಡಿಸಿವಿರ್ ಔಷಧ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಯವರು ಕೆಪಿಎಂಇ ಪೋರ್ಟಲ್ ಮೂಲಕ ನೋಂದಣಿ ಮಾಡಬೇಕಾಗಿದೆ.
ಕಾಫಿನಾಡಲ್ಲಿ ಸದ್ಯಕ್ಕಿಲ್ಲ ಸಮಸ್ಯೆ ಚಿಕ್ಕಮಗಳೂರಲ್ಲಿ ಅಗತ್ಯಕ್ಕನುಗುಣವಾಗಿ ಪ್ರತಿದಿನ 42 ಡೋಸ್ ಬೆಂಗಳೂರು ಮತ್ತು ಹಾಸನದಿಂದ ಪೂರೈಕೆಯಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ ಔಷಧ ಕೊರತೆ ಸಮಸ್ಯೆ ತಲೆದೋರಿಲ್ಲ.
ಕಡಿಮೆ ಪ್ರಮಾಣದಲ್ಲಿ ಉತ್ಪಾದನೆ? :
ಕಂಪೆನಿಯಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ ರೆಮಿಡೆಸಿವಿರ್ ಉತ್ಪಾದನೆ ಕಡಿಮೆ ಪ್ರಮಾಣದಲ್ಲಿ ಆಗುತ್ತಿರುವುದರಿಂದ ನಿಗದಿತ ವೇಳೆಗೆ ಸಿಗುವುದು ಕಷ್ಟಕರವಾಗುತ್ತಿದೆ. ಆದರೂ ಸದ್ಯ ಕೆಲವು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ರೆಮಿಡೆಸಿವಿರ್ಗೆ ಬೇಡಿಕೆ ಇಲ್ಲದ್ದಕ್ಕೆ ಕೊರತೆ ಕಂಡುಬರುತ್ತಿಲ್ಲ. ರೆಮಿಡೆಸಿವಿರ್ ಕೊರತೆ ಸದ್ಯಕ್ಕಂತೂ ಇಲ್ಲ. ಇದರ ದುರುಪಯೋಗ ಆಗದಂತೆ ಕಠಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಳಗಾವಿಯ ಪ್ರಾದೇಶಿಕ ಉಪ ಔಷಧ ನಿಯಂತ್ರಕ ದೀಪಕ ಗಾಯಕವಾಡ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ