ಕ್ಯಾಂಟೀನ್ ಹೆಸರಿನ ಬಗ್ಗೆ ಸರ್ಕಾರದಿಂದ ಉಚಿತ ಅನ್ನ ಸ್ವೀಕರಿಸಿದ ಜನರೇ ನಿರ್ಧರಿಸಲಿ: ಸುನೀಲ್
Team Udayavani, Aug 13, 2021, 10:43 AM IST
ಬೆಂಗಳೂರು: ಇಂದಿರಾ ಕ್ಯಾಂಟಿನ್ ಹೆಸರು ಬದಲಾಯಿಸಬೇಕೆ ಬೇಡವೇ ಎನ್ನುವುದನ್ನು ಸರ್ಕಾರದಿಂದ ಉಚಿತವಾದ ಅನ್ನ ಸ್ವೀಕರಿಸುವ ಜನರೇ ನಿರ್ಧಾರ ಮಾಡಲಿ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ಹೆಸರಿಡಬೇಕೇ, ಅನ್ನಪೂರ್ಣೇಶ್ವರಿ ಹೆಸರು ಬೇಕಾ ಎನ್ನುವುದನ್ನು ಜನರ ಅಭಿಪ್ರಾಯ ಸಂಗ್ರಹ ಆಗಲಿ. ಯಾವ ಹೆಸರಿಟ್ಟರೆ ಉಚಿತ ಅನ್ನ ಆಹಾರ ಸ್ವೀಕರಿಸಲು ಒಳ್ಳೆಯದು ಎನ್ನುವ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಲಿ ಎಂದು ಹೇಳಿದರು.
ಇದನ್ನೂ ಓದಿ:ನಿಯಮ ವ್ಯಾಪ್ತಿಗೆ ಚೌತಿ, ಮೊಹರಂ: ರಾಜ್ಯ ಸರಕಾರದಿಂದ ಹೊಸ ಮಾರ್ಗ ಸೂಚಿ
ಕಾಂಗ್ರೆಸ್ ಏನೂ ನಮಗೆ ಸಂಸ್ಕೃತಿ ಕಲಿಸಿಕೊಡುವ ಅಗತ್ಯವಿಲ್ಲ. ಕಾಂಗ್ರೆಸ್ ಸಂಸ್ಕೃತಿ ಏನು ಎನ್ನುವುದು ನಮಗೆಲ್ಲ ಗೊತ್ತಿದೆ. ಹಿಂದೆ ವಾಜಪೇಯಿ ಚತುಷ್ಪಥ ರಸ್ತೆ ನಿರ್ಮಾಣ ಆದಾಗ ಇದೇ ಕಾಂಗ್ರೆಸ್ ದೇಶಾದ್ಯಂತ ಹೆಸರು ಬದಲಾಯಿಸಲು ಹೊರಟಿದ್ದರು. ವಾಜಪೇಯಿ ಚತುಷ್ಪಥ ರಸ್ತೆಯ ಬೋರ್ಡ್ ಬದಲಾಯಿಸುವುದಕ್ಕಾಗಿಯೇ ಹೆಚ್ಚಿನ ಹಣ ಬಿಡುಗಡೆ ಮಾಡಿದ್ದರು. ಹೀಗಾಗಿ ಅವರಿಂದ ನಾವೇನು ಕಲಿಬೇಕಾಗಿಲ್ಲ. ಆದರೆ ಕ್ಯಾಂಟಿನ್ ಗೆ ಯಾವ ಹೆಸರಿಡಬೇಕು ಎಂಬ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಲಿ ಎಂದು ಸುನೀಲ್ ಕುಮಾರ್ ಹೇಳಿದರು.