ಬಡವರ ಮಕ್ಕಳು ಮಾತ್ರ ಸೆಕ್ಯುರಿಟಿ ಗಾರ್ಡ್ ಗಳಾಗಬೇಕೆ?: ಡಿಕೆ ಶಿವಕುಮಾರ್
Team Udayavani, Jun 19, 2022, 1:09 PM IST
ಬೆಂಗಳೂರು: ಇಷ್ಟು ವರ್ಷ ದೇಶವನ್ನು ಸೈನಿಕರು ಎಂಥೆಂತಹ ಸಂದರ್ಭಗಳಲ್ಲಿ ರಕ್ಷಣೆ ಮಾಡಿಲ್ವೇ. ಈಗ ಅಗ್ನಿಪಥ್ ಯೋಜನೆ ತಂದಿದ್ದಾರೆ. ಆ ಮಕ್ಕಳು ಡಿಗ್ರಿ ಪಾಸ್ ಮಾಡಬಾರದಾ? ಮಂತ್ರಿಗಳು ಅವರ ಮಕ್ಕಳನ್ನು ಅಗ್ನಿಪಥ್ ಯೋಜನೆಗೆ ಕಳುಹಿಸಲಿ ನೋಡೋಣ. ಮಂತ್ರಿಗಳ ಮಕ್ಕಳು ಇಂಜಿನಿಯರ್, ಡಾಕ್ಟರ್ ಆಗಬೇಕು ಬಡವರ ಮಕ್ಕಳು ಮಾತ್ರ ಸೆಕ್ಯುರಿಟಿ ಗಾರ್ಡ್ಸ್ ಗಳಾಗಬೇಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳು ಸರ್ಕಾರಕ್ಕೆ ಹೆದರಿಕೊಂಡಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಟ್ವೀಟ್ ಮಾತ್ರ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಹೆದರಿಕೊಳ್ಳದೆ ಧ್ವನಿ ಎತ್ತಬೇಕು. ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಶಂಕರಾಚಾರ್ಯ ಎಲ್ಲರ ಬಗ್ಗೆಯೂ ಪಠ್ಯದಲ್ಲಿ ಅವಮಾನವಾಗಿದೆ. ಕೆಲವು ಸ್ವಾಮೀಜಿಗಳು ಟ್ವೀಟ್ ಮಾಡಿ ದೂರು ಕೊಡುವ ಕೆಲಸ ಮಾಡಿದ್ದಾರೆ. ಆದರೆ ಇನ್ನಷ್ಟು ಸ್ವಾಮೀಜಿಗಳು ಧ್ವನಿ ಎತ್ತಬೇಕು. ಸ್ವಾಮೀಜಿಗಳು ರಾಜಕಾರಣಕ್ಕೆ ಬೆಂಬಲ ಕೊಡುವುದು ಬೇಡ. ಸ್ವಾಮೀಜಿಗಳಿರುವುದು ಸಂಸ್ಕೃತಿ, ನ್ಯಾಯ ಉಳಿಸಲು. ಸರ್ಕಾರಕ್ಕೆ ಹೆದರಿಕೊಂಡು ಸುಮ್ಮನಿರಿವುದು ಬೇಡ. ಅವರೇ ಧ್ವನಿ ಎತ್ತದಿದ್ದರೆ ಯಾರು ಎತ್ತಬೇಕು ಎಂದು ಪ್ರಶ್ನಿಸಿದರು.
ಇದು ಒಂದು ಜಾತಿ ಧರ್ಮದ ವಿಚಾರವಲ್ಲ. ಎಲ್ಲರೂ ಕೂಡ ಒಗ್ಗಟ್ಟು ಪ್ರದರ್ಶಿಸಬೇಕು. ಸರ್ಕಾರ ಶಾಂತಿ ಭಂಗ ಮಾಡುವ ಕೆಲಸ ಮಾಡುತ್ತಿದೆ. ಅವಮಾನವಾದಾಗ ಒಕ್ಕಲಿಗರ ಸಂಘ ಯಾಕೆ ಮಾತಾಡುತ್ತಿಲ್ಲ? ಬೇರೆ ಸಂಘಟನೆಗಳು ಯಾಕೆ ಮಾತನಾಡುತ್ತಿಲ್ಲ ಎಂದರು.
ವಿದ್ಯಾರ್ಥಿಗಳು ಟೆರರಿಸ್ಟ್ ಗಳಾ?: ಮೈಸೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಜೆ ಕೊಟ್ಟಿರುವ ವಿಚಾರಕ್ಕೆ ಕಿಡಿಕಾರಿದ ಡಿಕೆಶಿ, ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು? ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ ? ರಸ್ತೆಯಲ್ಲಿ ಏನು ಭದ್ರತೆ ಕೊಡಬೇಕೋ ಕೊಡಲಿ ರೋಡ್ ಶೋ ನಡೆಸಿ ರಾಜಕೀಯ ಮಾಡಿ ಆದರೆ ವಿದ್ಯಾರ್ಥಿಗಳನ್ನು ಯಾಕೆ ಅನುಮಾನದಿಂದ ನೋಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಹಾದು ಹೋಗುವ ಮಾರ್ಗದಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಏನು ಟೆರರಿಸ್ಟ್ ಗಳಾ? ಮೋದಿ ಬಂದು ಹೋಗಲಿ, ಬೇಡ ಎಂದವರ್ಯಾರು. ಅದು ಅವರ ಪಕ್ಷಕ್ಕೆ ಸಂಬಂಧಿಸಿದ್ದು. ಆದರೆ, ಕಾಲೇಜುಗಳಿಗೆ ರಜೆ ಕೊಡುತ್ತಿರುವುದು ಯಾಕೆ ಎಂದು ಟೀಕೆ ಮಾಡಿದರು.
ಇದನ್ನೂ ಓದಿ:ರಬಕವಿ-ಬನಹಟ್ಟಿ: ಜಗದಾಳ ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಮೋದಿ ಬರುತ್ತಿರುವುದು ಜನಕ್ಕೆ ಅನುಕೂಲ ಮಾಡಿಕೊಡಲಲ್ಲ. ಅವರ ಪಕ್ಷದ ನಾಯಕರ ಅನುಕೂಲಕ್ಕೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ 40% ಸರ್ಕಾರ ಎಂದಿದ್ದಕ್ಕೆ ಉತ್ತರ ಕೊಡಲಿ. ನಮ್ಮ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಕೇಳಿದ ಪ್ರಶ್ನೆಗಳಿಗೆ ಮೋದಿ ಉತ್ತರ ಕೊಡಲಿ ಎಂದು ಸವಾಲೆಸೆದರು.
ಡಿಕೆಶಿ ಹಿಂದು ವಿರೋಧಿ ಎಂಬ ಬಿಜೆಪಿ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿದ ಅವರು, ನನ್ನ ಕ್ಷೇತ್ರದಲ್ಲಿ 300-400 ದೇವಸ್ಥಾನಗಳನ್ನ ಜೀರ್ಣೋದ್ಧಾರ ಮಾಡಿಸಿದ್ದೇನೆ. ಇದನ್ನು ಬೇಕಾದರೆ ಬಂದು ನೋಡಲಿ. ನಾನು ಹಿಂದೂ ಧರ್ಮೀಯ. ಎಲ್ಲ ಧರ್ಮಕ್ಕೂ ಗೌರವ ಕೊಡಬೇಕು. ಪಕ್ಷದಲ್ಲಿ ನಾವು ಯಾರಿಗೆ ಬೇಕಾದರೂ ಅಧಿಕಾರ ಕೊಡ್ತೇವೆ. ಇವರಿಗೆ ಏನಾಗಬೇಕು. ಅವರಿಗೆ ನಮ್ಮ ಯುವಕರ ಬಗ್ಗೆ ಭಯವಿದೆ. ಸಂಘಟನೆಗಳ ಬಗ್ಗೆ ಭಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!