ಸಿದ್ಧಗಂಗಾ ಶ್ರೀಗಳು ಡಿಸ್ಚಾರ್ಜ್:ಇದೊಂದು ಪವಾಡ ಎಂದ ಡಾ.ರೇಲಾ !
Team Udayavani, Dec 19, 2018, 11:53 AM IST
ಚೆನ್ನೈ: ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಸಿದ್ದಗಂಗಾ ಮಠದ ಶತಾಯುಷಿ ಶ್ರೀಗಳಾದ ಡಾ.ಶಿವಕುಮಾರ ಸ್ವಾಮಿಜಿ ಅವರು ಮಂಗಳವಾರ ಚೆನ್ನೈನ ರೇಲಾ ಇನ್ಸ್ ಟಿಟ್ಯೂಟ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮಠಕ್ಕೆ ಮರಳುತ್ತಿದ್ದಾರೆ.
ಚೆನ್ನೈನಿಂದ ವಿಶೇಷ ಏರ್ ಅಂಬುಲೆನ್ಸ್ನಲ್ಲಿ ಎಚ್ಎಎಲ್ ವಿಮಾನಕ್ಕೆ ಕರೆತಂದು ಝಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಠಕ್ಕೆ ಕರೆದೊಯ್ಯಲಾಗುತ್ತಿದೆ.
ಇದೊಂದು ಪವಾಡ
ಡಾ.ಮೊಹಮ್ಮದ್ ರೇಲಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ‘ಸಿದ್ದಗಂಗಾ ಶ್ರೀಗಳು ಕ್ಷೇಮವಾಗಿ ಮರಳುತ್ತಿರುವುದು ಪವಾಡ. ಇದು ಯಾವುದೇ ರೆಕಾರ್ಡ್ ಅಲ್ಲ, ಖುಷಿಯ ವಿಚಾರ ಅಷ್ಟೇ’ ಎಂದರು.
ಡಿಸೆಂಬರ್ 7 ರಂದು ಶ್ರೀಗಳನ್ನು ವಿಶೇಷ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ದು ಚಿಕಿತ್ಸೆ ಆರಂಭಿಸಲಾಗಿತ್ತು. ಖ್ಯಾತ ವೈದ್ಯ ಡಾ.ಮೊಹಮ್ಮದ್ ರೇಲಾ ಅವರು ವಿಶೇಷ ಮುತುವರ್ಜಿ ವಹಿಸಿ ಶಸ್ತ್ರ ಚಿಕಿತ್ಸೆ ನಡೆಸಿ ಚಿಕಿತ್ಸೆ ನೀಡಿದ್ದರು.
ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶ್ರೀಗಳಿಗೆ ಇನ್ನೂ 15 ರಿಂದ 20 ದಿನಗಳ ಕಾಲ ಹೆಚ್ಚಿನ ವಿಶ್ರಾಂತಿ ನೀಡಬೇಕಾಗಿದೆ.
ಮಠದಲ್ಲಿ ದರ್ಶನವಿಲ್ಲ
ಮಠಕ್ಕೆ ಭಕ್ತರು ಬಂದರೂ ಶ್ರೀಗಳ ದರ್ಶನಕ್ಕೆ ಅವಕಾಶ ನೀಡಲು ಕಷ್ಟವಾಗುತ್ತದೆ ಎಂದು ಕಿರಿಯ ಶ್ರೀಗಳು ಹೇಳಿದ್ದಾರೆ. 10 ರಿಂದ 20 ದಿನಗಳ ಕಾಲ ಶ್ರೀಗಳಿಗೆ ಸಂಪೂರ್ಣ ವಿಶ್ರಾಂತಿ ಬೇಕಾಗಿರುವ ಕಾರಣ ಅವರ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ