ಗಂಗೆಯಂತೆ ಹರಿದುಬಂದ ಭಕ್ತ ಸಾಗರ


Team Udayavani, Jan 23, 2019, 12:35 AM IST

10000.jpg

ಬೆಂಗಳೂರು: ಮನೆ-ಮನದೊಳಗೆ ಜ್ಞಾನ, ದಾಸೋಹ ಹಾಗೂ ಅರಿವಿನ ದೀಪ ಹಚ್ಚಿರುವ ನಡೆದಾಡುವ ದೇವರ ಅಂತಿಮ ದರ್ಶನಕ್ಕೆ ಸಿದ್ಧಗಂಗಾ ಮಠಕ್ಕೆ ಜನ ಸಾಗರ ಗಂಗೆಯಂತೆ ಹರಿದು ಬಂದಿತ್ತು.

ಶಿಕ್ಷಣ, ವಸತಿ ಹಾಗೂ ದಾಸೋಹದ ಮೂಲಕ ಲಕ್ಷಾಂತರ ಕುಟುಂಬಕ್ಕೆ ಸಾಕ್ಷಾತ್‌ ದೇವರಾಗಿದ್ದ ಡಾ.ಶಿವ ಕುಮಾರ ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಬಂದಿದ್ದ ಪ್ರತಿಯೊಬ್ಬರಲ್ಲೂ ನಮ್ಮೊಂದಿಗೆ ಇದ್ದ ದೇವರನ್ನು ಕಳೆದು ಕೊಂಡಿದ್ದೇವೆಂಬ ಆತಂಕ, ನಿರಾಸೆ ಮನೆ ಮಾಡಿತ್ತು.

ಲಿಂಗೈಕ್ಯರಾದ ದೇವರ ಅಂತಿಮ ದರ್ಶನ ಪಡೆಯಲೇ ಬೇಕು ಎಂಬುದು ಸೇರಿದ್ದ ಎಲ್ಲ ಭಕ್ತರ ಏಕಮೇವ ಗುರಿಯಾಗಿತ್ತು. ಏನೇ ಆಗಲಿ ಶ್ರೀಗಳ ಲಿಂಗಕಾಯ ದರ್ಶನ ಮಾಡಲೇ ಬೇಕೆಂದು ಭಕ್ತರು ಬಿಸಿಲು, ಆಯಾಸ ಲೆಕ್ಕಿಸದೆ ಸರತಿ ಸಾಲಿನಲ್ಲಿ ಮುನ್ನುಗ್ಗುತ್ತಿದ್ದರು. ಗೋಸಾಲ ಸಿದ್ದೇಶ್ವರ ವೇದಿಕೆ ಸಮೀಪಿಸುತ್ತಿದ್ದಂತೆ ಡಾ.ಶಿವಕುಮಾರ ಸ್ವಾಮೀಜಿಗೆ ಜೈ, ಸಿದ್ಧಗಂಗಾ ಮಠಾಧೀಶರಿಗೆ ಜೈ, ತ್ರಿವಿಧ ದಾಸೋಹಿಗೆ ನಮನ ಎನ್ನವ ಘೋಷಣೆ ಮುಗಿಲು ಮುಟ್ಟಿತ್ತು.

12 ಲಕ್ಷ ಭಕ್ತರಿಂದ ದರ್ಶನ: ರಾಜ್ಯದ ವಿವಿಧ ಭಾಗದ ಹನ್ನೆರಡು ಲಕ್ಷಕ್ಕೂ ಅಧಿಕ ಭಕ್ತರು ಸೋಮವಾರ ಮತ್ತು ಮಂಗಳವಾರ ಸಿದ್ಧಗಂಗಾ ಶ್ರೀಗಳ ಲಿಂಗಶರೀರದ ಅಂತಿಮ ದರ್ಶನ ಪಡೆದರು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾದ ಬಸ್‌, ರೈಲು ಹಾಗೂ ಸ್ವಂತ ವಾಹನಗಳಲ್ಲಿ ಭಕ್ತರು ಸಿದ್ಧಗಂಗಾ ಕ್ಷೇತ್ರಕ್ಕೆ ಬಂದಿದ್ದರು. ಸೋಮವಾರ ಮಧ್ಯಾಹ್ನದಿಂದ ಸಿದ್ಧಗಂಗಾ ಮಠಕ್ಕೆ ಆಗಮಿಸುತ್ತಿದ್ದ ಭಕ್ತರ ದಂಡು ಮಂಗಳವಾರ ಸಂಜೆಯ ವರೆಗೂ ನಿರಂತರವಾಗಿ ಸಾಗಿ ಬಂದಿತ್ತು. ದೂರದ ಊರುಗಳಿಂದ ತುಮಕೂರು ನಗರಕ್ಕೆ ಬಂದಿಳಿದ ಭಕ್ತರನ್ನು ಶ್ರೀಮಠಕ್ಕೆ ಕರೆದುಕೊಂಡು ಹೋಗಲು ಶೆಟಲ್‌ ಸರ್ವಿಸ್‌ ವ್ಯವಸೆœಯನ್ನು ಜಿಲ್ಲಾಡಳಿತ ಮಾಡಲಾಗಿತ್ತು. ಲಿಂಗಕಾಯದ ಅಂತಿಮ ದರ್ಶನಕ್ಕೆ ರಾಜ್ಯದ ವಿವಿಧ ಭಾಗದಿಂದ ಬಂದಿರುವ ಭಕ್ತರು ಶ್ರೀಗಳ ನಗು ಮುಖದ ಫೋಟೋಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಕೋರಿ, ಅದನ್ನು ಸರತಿ ಸಾಲಿನಲ್ಲಿ ತಮ್ಮ ತಲೆ ಮೇಲೆ ಇಟ್ಟುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕೆಲವು ಯುವ ಭಕ್ತರು ಶ್ರೀಗಳ ನಗುಮುಖದ ಬೃಹದಾಕಾರದ ಕೇಸರಿ ಧ್ವಜ ಹಿಡಿದುಕೊಂಡು ಬಂದು ಅಂತಿಮ ದರ್ಶನ ಪಡೆದರು.

ಶ್ರೀಗಳ ಹುಟ್ಟೂರಾದ ಮಾಗಡಿ ತಾಲೂಕಿನ ವೀರಾಪುರದಿಂದ ಸಿದ್ಧಗಂಗಾ ತಪ್ಪಲಿನ ಕ್ಯಾತಸಂದ್ರದ ಪ್ರತಿ ಮನೆಯ ಭಕ್ತರು, ಗಡಿನಾಡು ಕೋಲಾರದ ಆದಿಯಾಗಿ ಮಧ್ಯ ಕರ್ನಾಟಕ, ಹೈದರಾಬಾದ್‌ ಕರ್ನಾಟಕ, ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಹೀಗೆ ಇಡೀ ರಾಜ್ಯದ ಭಕ್ತರ ದಂಡೆ ಶ್ರೀಗಳ ಲಿಂಗಕಾಯದ ಅಂತಿಮ ದರ್ಶನಕ್ಕೆ ಸೇರಿದ್ದರು.

ಸೋಮವಾರ ಸಂಜೆ 4 ಗಂಟೆಗೆ ಆರಂಭವಾದ ಲಿಂಗಕಾಯದ ಅಂತಿಮ ದರ್ಶನ ಮಂಗಳವಾರ ಸಂಜೆಯವರೆಗೂ ನಿರಂತರವಾಗಿ ನಡೆಯಿತು. ಕ್ಯಾತಸಂದ್ರ ರೈಲು ನಿಲ್ದಾಣದ ಸಮೀಪದ ಮುಖ್ಯದ್ವಾರ ಹಾಗೂ ರಾಗಿಹೊಲ ಸಮೀಪದಿಂದ ಹಳೇ ಮಠದ ಬೀದಿಯ ಮುಖೇನ ಭಕ್ತರಿಗೆ ಸರತಿ ಸಾಲಿನಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ನಿಯಂತ್ರಣಕ್ಕೆ ಪೊಲೀಸರು ಸಾಕಷ್ಟು ಶ್ರಮ ಪಡಬೇಕಾಯಿತು.

ರುದ್ರಾಕ್ಷಿ ರಥದಲ್ಲಿ ಮೆರವಣಿಗೆ: ಶ್ರೀಗಳ ಲಿಂಗಕಾಯದ ಅಂತಿಮ ಶರೀರದ ನಂತರ ಗೋಸಲಾ ಸಿದ್ದೇಶ್ವರ ವೇದಿಕೆಯಿಂದ ಹಳೇ ಮಠದ ಮುಖ್ಯದ್ವಾರದವರೆಗೂ ಪಲ್ಲಕ್ಕಿಯ ಮೆರವಣಿಗೆಯಲ್ಲಿ ಕರೆತರಲಾಯಿತು. ಹಳೇ ಮಠದ ಪ್ರಸಾದ ಮಂದಿರದ ಎದುರು ಭಾಗದಿಂದ ರುದ್ರಾಕ್ಷಿ ಮಾಲೆಗಳನ್ನು ಸುತ್ತಿರುವ ರಥದಲ್ಲಿ ಉದ್ದಾನ ಶಿವಯೋಗಿ ಮಂದಿರದ ವರೆಗೂ ಭಾವಪೂರ್ಣ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮೆರವಣಿಗೆ ದೃಶ್ಯವನ್ನು ನೋಡಲು ಭಕ್ತ ಸಮೂಹ ಶ್ರೀಮಠದ ಬೀದಿ ಮಾತ್ರವಲ್ಲದೇ ಕಟ್ಟಡದ ಇಕ್ಕೆಲಗಳಲ್ಲೂ ಸೇರಿದ್ದರು.

ಭಾರತರತ್ನಕ್ಕೆ ಭಕ್ತರ ಆಗ್ರಹ

ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಕೇಂದ್ರ ಸರ್ಕಾರ ಭಾರತರತ್ನ ಘೋಷಣೆ ಮಾಡಬೇಕು ಎಂಬ ಕೂಗು ಶ್ರೀಗಳ ಅಂತಿಮ ದರ್ಶನದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತ ಸಾಗರದಿಂದ ಒಕ್ಕೊರಲಿನಿಂದ ಕೇಳಿಸುತ್ತಿತ್ತು. ಭಾರತ ರತ್ನಕ್ಕೆ ಆಗ್ರಹಿಸಿ ಬರೆದಿರುವ ಫ್ಲೆಕ್ಸ್‌ಗಳನ್ನು ಹಿಡಿದೇ ಬಹುತೇಕ ಭಕ್ತರು ಅಂತಿಮ ದರ್ಶನ ಪಡೆದರು.

ಸಮವಸ್ತ್ರ ಬಿಟ್ಟು ಪಂಚೆ,ಶಲ್ಯ ಧರಿಸಿದ ಪೊಲೀಸರು

ಶಿವಕುಮಾರ ಶ್ರೀಗಳ ಕ್ರಿಯಾ ವಿಧಿ ವಿಧಾನ ನಡೆಯಲಿರುವ ಸಮಾಧಿಯ ಬಳಿ ಭದ್ರತೆ ನೀಡುವುದಕ್ಕಾಗಿ ನಿಯೋಜನೆಗೊಂಡಿದ್ದ 8 ಪೊಲೀಸರು ಸಮವಸ್ತ್ರ ತೆಗೆದು, ಪಂಚೆ ಹಾಗೂ ಶಲ್ಯ ಧರಿಸಿದ್ದರು. ಭದ್ರತೆ ಹಾಗೂ ಮಠದ ಶಿಷ್ಟಾಚಾರದಂತೆ ಪೊಲೀಸರು ಶಲ್ಯ ಹಾಗೂ ಪಂಚೆ ಧರಿಸಿ ಗದ್ದುಗೆ ಪ್ರವೇಶಿಸಿದ್ದರು. ಸಮಾಧಿ ಸ್ಥಳಕ್ಕೆ ಮುಖ್ಯಮಂತ್ರಿ ಸೇರಿ ಹಲವು ರಾಜಕಾರಣಿಗಳು, ಗಣ್ಯರು, ಮಠಾಧಿಪತಿಗಳು ಬಂದಿದ್ದರಿಂದ ಅವರಿಗೆ ಭದ್ರತೆ ನೀಡುವ ಉದ್ದೇಶದಿಂದ 8 ಪೊಲೀಸರನ್ನು ನಿಯೋಜಿಸಲಾಗಿತ್ತು.

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.