ಸಿದ್ದು ಬಾದಾಮಿ ಬಿಟ್ಟರೆ ಅವರ ಮನೆ ಮುಂದೆ ವಿಷ ಸೇವಿಸ್ತೇವೆ
Team Udayavani, Nov 11, 2022, 6:45 AM IST
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಬಾದಾಮಿ ಕ್ಷೇತ್ರ ಬಿಟ್ಟು, ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡಬಾರದು. ಒಂದು ವೇಳೆ ನಮ್ಮ ಕ್ಷೇತ್ರ ಬಿಡಲು ಮುಂದಾದರೆ ಅವರ ನಿವಾಸಕ್ಕೆ ತೆರಳಿ ವಿಷ ಕುಡಿಯುತ್ತೇವೆ ಎಂದು ಬಾದಾಮಿ ಮತ್ತು ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಆಗ್ರಹಿಸಿದ್ದಾರೆ.
ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಬಾದಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತಗೌಡ ಯಕ್ಕಪ್ಪನವರ, ಗುಳೇದಗುಡ್ಡ ಬ್ಲಾಕ್ ಅಧ್ಯಕ್ಷ ಸಂಜೀವ ಬರಗುಂಡಿ, ಪ್ರಮುಖರಾದ ಹೊಳಬಸು ಶೆಟ್ಟರ, ಎಂ.ಬಿ. ಹಂಗರಗಿ ಮುಂತಾದವರು ಮಾತನಾಡಿ, ಬಾದಾಮಿ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ನಾಲ್ಕೂವರೆ ವರ್ಷದಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ಕೋಟಿ ಅನುದಾನ ತಂದಿದ್ದಾರೆ. ಬಾದಾಮಿ ಮತ್ತು ಇತರೆ 18 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗೆ 230 ಕೋಟಿ, ಕೆರೂರ ಏತ ನೀರಾವರಿ ಯೋಜನೆಗೆ 550 ಕೋಟಿ, ರಸ್ತೆ, ಚರಂಡಿ, ಕೆರೆಗೆ ನೀರು ತುಂಬುವ ಯೋಜನೆ ಸೇರಿ ಹಲವಾರು ಯೋಜನೆ ಕೈಗೊಂಡಿದ್ದಾರೆ. ಇನ್ನೂ ಸುಮಾರು 2 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಕ್ಷೇತ್ರಕ್ಕೆ ತರಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ 30 ವರ್ಷಗಳ ಮುಂದೆ ಬಂದಿದ್ದೇವೆ. ಅವರೇ ನಮ್ಮ ಕ್ಷೇತ್ರದಿಂದ ಪುನಃ ಸ್ಪರ್ಧಿಸಬೇಕು. ಯಾವುದೇ ಕಾರಣಕ್ಕೂ ಕ್ಷೇತ್ರ ಬಿಡಬಾರದು. ಬಿಟ್ಟರೆ ನಾವು ಬೆಂಗಳೂರಿನ ಅವರ ನಿವಾಸದ ಎದುರು ಧರಣಿ ಕೂಡುತ್ತೇವೆ. ಸಂದರ್ಭ ಬಂದರೆ ವಿಷ ಕುಡಿಯಲೂ ಹಿಂಜರಿಯುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್