ಕೃಷಿಯ ಕೊಲೆ ಬಿಜೆಪಿಯ ಸಾಧನೆ: ಸಿದ್ದರಾಮಯ್ಯ ಆರೋಪ


Team Udayavani, Jun 4, 2022, 9:15 PM IST

ಕೃಷಿಯ ಕೊಲೆ ಬಿಜೆಪಿಯ ಸಾಧನೆ: ಸಿದ್ದರಾಮಯ್ಯ ಆರೋಪ

ಬೆಂಗಳೂರು:ಕೃಷಿ ಕ್ಷೇತ್ರವನ್ನು ಸಂಪೂರ್ಣ ಹಾಳು ಮಾಡಿ ಕಾರ್ಪೊರೇಟ್‌ ಬಂಡವಾಳಿಗರ ಕಾಲ ಕೆಳಕ್ಕೆ ಅ ತಳ್ಳಿರುವುದೇ ಪ್ರಧಾನಿ ನರೇಂದ್ರ ಮೋದಿಯವರ ಎಂಟು ವರ್ಷಗಳ ಸಾಧನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಎಂಟು ವರ್ಷಗಳಲ್ಲಿ ಮೋದಿಯವರು ಹೇಳಿದ ಸುಳ್ಳುಗಳಿಗೆ ಲೆಕ್ಕವೇ ಇಲ್ಲ. ಅವುಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದೂ ಸೇರಿದೆ ಎಂದು ದೂರಿದರು.

ನ್ಯಾಷನಲ್‌ ಸ್ಯಾಂಪಲ್‌ ಸರ್ವೆಯವರ ಪ್ರಕಾರ 2015-16 ರಲ್ಲಿ ಪ್ರತಿ ರೈತ ಕುಟುಂಬದ ವಾರ್ಷಿಕ ಆದಾಯ 96,703 ರೂ.ಎಂದು ಅಂದಾಜಿಸಲಾಗಿತ್ತು.

2022 ರಲ್ಲಿ ಇದು ದ್ವಿಗುಣಗೊಳ್ಳಬೇಕಾದರೆ 2015-16 ರ ಬೆಲೆಗಳಲ್ಲಿ ಲೆಕ್ಕ ಹಾಕಿದರೆ ಸರಾಸರಿ ಪ್ರತಿ ರೈತ ಕುಟುಂಬದ ವಾರ್ಷಿಕ ಆದಾಯ 1,72,694 ರೂ. ಆಗಬೇಕಿತ್ತು. ಇಂದಿನ ಬೆಲೆಗಳಲ್ಲಿ ಹಣದುಬ್ಬರವನ್ನು ಸೇರಿಸಿ ಲೆಕ್ಕ ಹಾಕಿದರೆ 2.50 ರಿಂದ 2.80 ಲಕ್ಷ ರೂ. ಆಗಬೇಕಿತ್ತು. 2019-20 ರಲ್ಲಿ ಎನ್‌ಎಸ್‌ಎಸ್‌ಒ ಹಲವು ಆಯಾಮಗಳಲ್ಲಿ ಸಮೀಕ್ಷೆ ಮಾಡಿದ್ದು ಮನಮೋಹನಸಿಂಗ್‌ ಅವರ ಯುಪಿಎ ಅವಧಿಯಲ್ಲಿ ಕೃಷಿಯ ಜಿವಿಎ ಬೆಳವಣಿಗೆ ದರ ಸರಾಸರಿ ಶೇ. 4.6 ಕ್ಕಿಂತ ಹೆಚ್ಚಿಗೆ ಇತ್ತು. ಮೋದಿಯವರ ಕಾಲದಲ್ಲಿ ಕೇವಲ ಶೇ. 3.3 ರಷ್ಟಿದೆ ಎಂದು ಟೀಕಿಸಿದ್ದಾರೆ.

ಇಷ್ಟೆಲ್ಲ ಆದರೂ ಮೋದಿಯವರ ಸರ್ಕಾರ ಜಾಹಿರಾತು ಕೊಟ್ಟು ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ರೈತರು ತಮ್ಮ ಮನೆಗಳಲ್ಲಿನ ಚಿನ್ನವನ್ನು ಅಡ ಇಟ್ಟು ಸಾಲ ತರುತ್ತಿದ್ದಾರೆ. ಬೆಳೆ ಬಂದಾಗ ಬೆಲೆ ಸಿಗುತ್ತಿಲ್ಲ. ಸರ್ಕಾರದ ಭ್ರಷ್ಟಾಚಾರದಿಂದಾಗಿ ಕಳಪೆ ಔಷಧ, ಬೀಜ, ಗೊಬ್ಬರ ಮಾರುಕಟ್ಟೆಯಲ್ಲಿ ತುಂಬಿದೆ. ಇದನ್ನು ನಿಯಂತ್ರಣ ಮಾಡುವ ಶಕ್ತಿಯಾಗಲಿ, ಉದ್ದೇಶವಾಗಲಿ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಇಲ್ಲ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Norway Chess tournamen: ನಂ. ವನ್‌ ಕಾರ್ಲ್ಸನ್‌ ಕೆಡಹಿದ ಪ್ರಜ್ಞಾನಂದ

Norway Chess tournamen: ನಂ. ವನ್‌ ಕಾರ್ಲ್ಸನ್‌ ಕೆಡಹಿದ ಪ್ರಜ್ಞಾನಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.