ಗುರು-ಶಿಷ್ಯರ ಭೇಟಿ: ಬಹಳ ದಿನಗಳ ನಂತರ ವಿಧಾನಸೌಧದಲ್ಲಿ ಸಿದ್ದರಾಮಯ್ಯ- ಮುನಿರತ್ನ ಪಟ್ಟಾಂಗ!
Team Udayavani, Dec 7, 2020, 1:58 PM IST
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದೆ. ಬೆಳಿಗ್ಗೆ ಆರಂಭವಾದ ಕಲಾಪ ಮಧ್ಯಾಹ್ನ 2.30 ಕ್ಕೆ ಮುಂದೂಡುತ್ತಲೇ ವಿಧಾನಸೌಧದಲ್ಲಿ ಸ್ವಾರಸ್ಯಕರ ಸನ್ನಿವೇಶವೊಂದು ನಡೆದಿದೆ. ಅದುವೆ ಗುರು- ಶಿಷ್ಯರ ಭೇಟಿ, ಅಂದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ನೂತನ ಶಾಸಕ ಮುನಿರತ್ನ ಭೇಟಿ.
ಸಿದ್ದರಾಮಯ್ಯ ಶಿಷ್ಯನಾಗಿದ್ದ ಮುನಿರತ್ನ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿ, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಈಗ ಇತಿಹಾಸ. ಬಿಎಸ್ ವೈ ಸರ್ಕಾರದಲ್ಲಿ ಮೊದಲ ಬಾರಿಗೆ ಇಂದು ಕಲಾಪಕ್ಕೆ ಕಾಲಿಟ್ಟ ಮುನಿರತ್ನ, ತಮ್ಮ ಹಳೆ ಗುರುವಿನ ಬಳಿ ಗಹನ ಚರ್ಚೆ ನಡೆಸಿದರು.
ಇದನ್ನೂ ಓದಿ:ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಅಗತ್ಯವಿಲ್ಲ: ಡಿ ಕೆ ಶಿವಕುಮಾರ್
ಮುನಿರತ್ನ ಬಿಜೆಪಿಗೆ ಸೇರ್ಪಡೆಯಾದ ಬಳಿಕ ಸಿದ್ದರಾಮಯ್ಯ ಟೀಕಿಸಿದ್ದರು. ಉಪಚುನಾವಣೆ ಸಂದರ್ಭದಲ್ಲಿ ಶಿಷ್ಯನ ವಿರುದ್ದ ಭಾರಿ ವಾಗ್ದಾಳಿಯನ್ನೇ ನಡೆಸಿದ್ದರು ಸಿದ್ದರಾಮಯ್ಯ. ಮುನಿರತ್ನ ತಾಯಿಗೆ ದ್ರೋಹ ಬಗೆದು ಹೋಗಿದ್ದಾರೆ ಎಂಬಿತ್ಯಾದಿಯಾಗಿ ಸಿದ್ದರಾಮಯ್ಯ ಟೀಕೆ ಮಾಡಿದ್ದರು.
ಆದರೆ ಕಲಾಪದಲ್ಲಿ ಗುರು-ಶಿಷ್ಯರ ಮುಖಾಮುಖಿಯಾಗಿದ್ದು, ಬಿಜೆಪಿ ಬೆಳವಣಿಗೆಗಳು, ಉಪಚುನಾವಣೆ ಗೆಲುವು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತಾನಾಡುತ್ತಾ ಕುಳಿತರು. ಬಿಜೆಪಿಗೆ ಹೋದ ಬಳಿಕದ ಅನುಭವಗಳನ್ನು ಮುನಿರತ್ನ ಗುರು ಸಿದ್ದರಾಮಯ್ಯ ಬಳಿ ಹಂಚಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ