ಸಿದ್ದರಾಮಯ್ಯ ರಾವಣಾಸುರನಿದ್ದಂತೆ: ಶ್ರೀರಾಮುಲು
Team Udayavani, Jan 30, 2019, 12:30 AM IST
ಚಿತ್ರದುರ್ಗ: “ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣಾಸುರನಿದ್ದಂತೆ. ಏಕೆಂದರೆ ರಾವಣಾಸುರನಿಗೆ ಇರುವ ಎಲ್ಲಾ ಗುಣಗಳೂ ಅವರಲ್ಲಿವೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಬಿ. ಶ್ರೀರಾಮುಲು ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಸಂಸ್ಕಾರ ಇಲ್ಲದ ವ್ಯಕ್ತಿ. ಪ್ರಾಮಾಣಿಕತೆ, ಮಹಿಳೆಯರು, ಹೆಣ್ಣುಮಕ್ಕಳ ಬಗ್ಗೆ ಗೌರವವಿದೆ ಎಂದೆಲ್ಲ ಮಾತನಾಡುತ್ತಾರಷ್ಟೇ. ಆದರೆ ಆತ
ದೊಡ್ಡ ಮನುಷ್ಯ ಅಲ್ಲ. ಮುಂಚಿನಿಂದ ಆ ಮನುಷ್ಯನನ್ನು ಹತ್ತಿರದಿಂದ ನೋಡಿದವರಿಗೆ ಅವರ ಎಲ್ಲಾ ಗುಣಗಳೂ ಗೊತ್ತಿವೆ. ಇಂತಹ ವರ್ತನೆ ತೋರಿದ್ದರಿಂದಲೇ ಸಿದ್ದರಾಮಯ್ಯ ಅವರನ್ನು ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನ ಸೋಲಿಸಿದರು’ ಎಂದು ಕುಟುಕಿದರು.
“ಸಂಸ್ಕಾರ ಕಲಿಯುತ್ತೇನೆ’
ಬೆಂಗಳೂರು: ತಮಗೆ ಸಂಸ್ಕೃತಿ ಇಲ್ಲ ಎಂದು ಟೀಕಿಸಿದ್ದ ಬಿ. ಶ್ರೀರಾಮುಲು ಅವರಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಶ್ರೀರಾಮುಲು ಅವರು ಸುಸಂಸ್ಕೃತ ರಾಗಿದ್ದು ಅವರಿಂದ ಸಂಸ್ಕಾರ ಕಲಿಯುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತೆಯ ಜೊತೆಗೆ ನಡೆದ ಘಟನೆ ದೊಡ್ಡ ವಿಷಯವೇ ಅಲ್ಲ. ಆದರೆ, ಬಿಜೆಪಿಯವರು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಶ್ರೀರಾಮುಲು ಹಾಗೂ ಬಿಜೆಪಿಯವರು ಸಂಸ್ಕೃತಿಯ ಪಾಠ ಹೇಳಿದರೆ, ಅವರ ಬಳಿ ಪಾಠ ಹೇಳಿಸಿಕೊಳ್ಳುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ