ಯಡಿಯೂರಪ್ಪನವರೇ ಉತ್ತರ ಕೊಡಿ: ಸಿಎಂ ಬಿಎಸ್ ವೈ ಗೆ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆ


Team Udayavani, Nov 2, 2020, 2:37 PM IST

ಯಡಿಯೂರಪ್ಪನವರೇ ಉತ್ತರ ಕೊಡಿ: ಸಿಎಂ ಬಿಎಸ್ ವೈ ಗೆ ಸಿದ್ದರಾಮಯ್ಯ ಸಾಲು ಸಾಲು ಪ್ರಶ್ನೆ

ಬೆಂಗಳೂರು: ಪ್ರವಾಹ ಪರಿಹಾರ ಧನ ವಿತರಣೆ ಕುರಿತಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮುಂದೆ ಸಾಲು ಸಾಲು ಪ್ರಶ್ನಿಗಳನ್ನಿಟ್ಟಿದ್ದಾರೆ.

‘ಬಿಎಸ್ ವೈ ಉತ್ತರಕೊಡಿ’ ಎಂಬ ಹ್ಯಾಶ್ ಟ್ಯಾಗ್ ನಡಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ದುಡ್ಡಿಲ್ಲ. ಕೋವಿಡ್-19 ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000, ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಪರಿಹಾರ ಈ ಸರ್ಕಾರ ನೀಡುವುದು ಹೇಗೆ ಸಾಧ್ಯ? ಎಂದು ಕೇಳಿದ್ದಾರೆ.

ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು ಸಿಎಂ ಬಿಎಸ್ ವೈ ಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಪ್ರವಾಹ ಹಾನಿ ಪರಿಹಾರಕ್ಕೆ ಆಗ್ರಹ: ಜಿಲ್ಲಾಧಿಕಾರಿ ಕಚೇರಿಗೆ ರೈತರಿಂದ ಮುತ್ತಿಗೆ

ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಕೇಳಿದ್ದು ರೂ.35,000 ಕೋಟಿ ಪರಿಹಾರ ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಪರಿಹಾರ ಕೇಳಲೂ ಭಯನಾ ಎಂದಿದ್ದಾರೆ.

ಆಗಸ್ಟ್ ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.