ಅತ್ಯಾಚಾರ ಪ್ರಕರಣ: ಸಿಎಂ – ಸಿದ್ದರಾಮಯ್ಯ ವಾಕ್ಸಮರ
Team Udayavani, Sep 23, 2021, 6:14 AM IST
ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಚರ್ಚೆಯು ಕಾಂಗ್ರೆಸ್ ಹಾಗೂ ಬಿಜೆಪಿ ಸರಕಾರಗಳ ಸಂದರ್ಭದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳತ್ತ ತಿರುಗಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಕೆಲಕಾಲ ವಾಕ್ಸಮರಕ್ಕೆ ಕಾರಣವಾಯಿತು.
ಮೈಸೂರು ಪ್ರಕರಣದಲ್ಲಿ ಎಫ್ಐಆರ್ ತಡವಾಗಿ ದಾಖಲಿಸಲಾಗಿದೆ. ಪೊಲೀಸರಿಂದ ನಿರ್ಲಕ್ಷ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಯಾವುದೇ ರೀತಿಯ ನಿರ್ಲಕ್ಷ್ಯ ವಿಳಂಬ ಆಗಿಲ್ಲ. ನಿಮ್ಮ ಕಾಲದಲ್ಲಿ ಇದ್ದ ಪೊಲೀಸರೇ ನಮ್ಮ ಕಾಲದಲ್ಲೂ ಇದ್ದಾರೆ. ಆಗಲೂ, ಈಗಲೂ ಅವರೇ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಅವಧಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಅಂಕಿ ಅಂಶಗಳ ಮಾಹಿತಿ ನೀಡಲು ಮುಂದಾದರು. ಇದರಿಂದ ಸಿಟ್ಟಾದ ಸಿದ್ದರಾಮಯ್ಯ, “ಆಗ ನೀವು ಏನು ಮಾಡುತ್ತಿದ್ದೀರಿ, ಕಡ್ಲೆಪುರಿ ತಿಂತಿದ್ರಾ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಅಸಮಾಧಾನಗೊಂಡ ಮುಖ್ಯಮಂತ್ರಿ, ನಿಮಗೆ ನಮ್ಮ ಮಾತು ಕೇಳುವಷ್ಟು ಸಮಾಧಾನ ಇಲ್ಲ. ಮಣಿಪಾಲದಲ್ಲಿ ನಡೆದ ಪ್ರಕರಣದಲ್ಲಿ ಎಷ್ಟು ದಿನಗಳ ಬಳಿಕ ಎಫ್ಐಆರ್ ಹಾಕಿದಿರಿ? ಏನಾಯ್ತು ಎಂದು ಪ್ರಶ್ನಿಸಿದರು.
ಇದಕ್ಕೆ ಮಾಜಿ ಸಚಿವ ಕೆ.ಜೆ.ಜಾರ್ಜ್, ಆ ಪ್ರಕರಣದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಿದೆ. ಸದನವನ್ನು ತಪ್ಪು ದಾರಿಗೆ ಎಳೆಯುವುದು ಬೇಡ ಎಂದರು.
ಟೀಕೆ ಎದುರಿಸಿ ನನಗೆ ಗೊತ್ತಿಲ್ಲ: ಆರಗ:
“ನನ್ನದು ಕಟುಕ ಹೃದಯವಲ್ಲ…ಟೀಕೆಗಳನ್ನು ಎದುರಿಸಿ ನನಗೆ ಗೊತ್ತಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾವುಕರಾಗಿ ನುಡಿದರು. ಅತ್ಯಾಚಾರ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ, ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದೆ. ಎಲ್ಲೂ ನಿರ್ಲಕ್ಷ್ಯ ವಹಿಸಿಲ್ಲ, ಲೋಪವಾಗಿಲ್ಲ ಎಂದರು.
ಸಂತ್ರಸ್ತೆ ಹೇಳಿಕೆ ದಾಖಲು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇತ್ತೀಚೆಗೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯು 28 ದಿನಗಳ ಬಳಿಕ ಬುಧವಾರ ಮೈಸೂರಿನ 3ನೇ ಜೆಎಂಎಫ್ಸಿ ಕೋರ್ಟ್ನಲ್ಲಿ ನ್ಯಾಯಾಧೀಶರು, ತನಿಖಾಧಿಕಾರಿ, ಟೈಪಿಸ್ಟ್ ಸಮುಖದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ