ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಕಾರಣವಾದ ಭೂ ಹಗರಣ: ತನಿಖೆಗೆ ಸಿದ್ದರಾಮಯ್ಯ ಆಗ್ರಹ


Team Udayavani, Jun 8, 2021, 5:05 PM IST

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಕಾರಣವಾದ ಭೂ ಹಗರಣ: ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕಾರಣ ಎನ್ನಲಾಗುತ್ತಿದೆ. ಆ ಹಗರಣದ ಬಗ್ಗೆ ಸರ್ಕಾರ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ತಮ್ಮ ನಿವಾಸದಲ್ಲಿಂದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ನಡುವಣ ಜಗಳಕ್ಕೆ ಅದಕ್ಕೆ ಬಿಜೆಪಿಯ ಸಂಸದ, ಶಾಸಕರು ಹಾಗೂ ಜೆಡಿಎಸ್‍ನ ಮಾಜಿ ಸಚಿವ ಸಾ.ರಾ. ಮಹೇಶ್ ಕಾರಣ ಎಂದರು.

ಮೊದಲಿಗೆ ಒಬ್ಬ ಐಎಎಸ್ ಅಧಿಕಾರಿಯನ್ನು ಬಿಜೆಪಿಯವರು ಬೆಂಬಲಿಸಿದರು. ಅದಲರಲೂ ಸಂಸದ ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿ ಅವರ ಪರ ಇದ್ದರು. ಬಳಿಕ ವಿರೋಧ ವ್ಯಕ್ತ ಮಾಡಿದರು. ಇಬ್ಬರು ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದವರೇ ಬಿಜೆಪಿ ಶಾಸಕರು. ಇಂಥ ಸಂದರ್ಭದಲ್ಲಿ ಜಿಲ್ಲಾ ಮಂತ್ರಿ ಏನು ಮಾಡುತ್ತಿದ್ದರು. ಇದು ಅವರ ವೈಫಲ್ಯ ಅಲ್ಲವೇ? ಪತ್ರಿಕಾಗೋಷ್ಠಿ ಕರೆದು ಮಾತನಾಡಲು ಅಧಿಕಾರಿಗಳಿಗೆ ಅನುಮತಿ ನೀಡಿದವರು ಯಾರು ? ಅನುಮತಿ ಇಲ್ಲದೆ ಪತ್ರಿಕಾಗೋಷ್ಠಿ ಕರೆಯಲು ಅವಕಾಶ ಇಲ್ಲ. ವರ್ಗಾವಣೆ ಶಿಕ್ಷೆ ಅಲ್ಲ. ಸರ್ಕಾರ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಶಕ್ತಿ ಕಳೆದುಕೊಂಡಿದೆ. ಆಡಳಿತವೇ ಇಲ್ಲದಂತೆ ಆಗಿರುವುದರಿಂದ ಅಧಿಕಾರಿಗಳು ಬೀದಿಗೆ ಬರಲು ಕಾರಣವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ

ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಆ ಹಗರಣದ ಯಾವುದು ಎಂಬ ಬಗ್ಗೆ ತನಿಖೆ ಆಗಬೇಕು. ಯಾವ ಯಾವ ರಾಜಕಾರಣಿಗಳ ಭೂಮಿ ಹಗರಣಗಳಿವೆ. ಈ ವಿಷಯದಲ್ಲಿ ಯಾರ್ಯಾರು ಅಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಿದರು ಎಂಬುದು ತನಿಖೆಯಿಂದ ಹೊರಬರಬೇಕು ಎಂದರು.

ಬಿಜೆಪಿಯ ಸಂಸದ, ಶಾಸಕರು ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾ ನಾಗ್ ಅವರನ್ನು ಕೂರಿಸುವ ಪ್ರಯತ್ನ ಮಾಡುತ್ತಿದ್ದರು. ಅದು ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದರು. ಬಿಗಿಯಾದ ಸರ್ಕಾರದ ಇಲ್ಲದೇ ಇದ್ದರೆ ಈ ರೀತಿಯ ಅನಾಹುತಗಳಿಗೆ ದಾರಿ ಆಗುತ್ತದೆ. ಹುಚ್ಚು ಮುಂಡೆ ಮದುವೆಯಲ್ಲಿ ಉಂಡವನೇ ಜಾಣ ಎಂಬಂತೆ ಆಗಿದೆ ರಾಜ್ಯ ಸರ್ಕಾರದ ಪರಿಸ್ಥಿತಿ. ರಾಜಕಾರಣಿಗಳು ಅಧಿಕಾರಿಗಳನ್ನು ಬೆಂಬಲಿಸುವ ಅಥವಾ ವಿರೋಧಿಸುವ ಕೆಲಸ ಮಾಡಬಾರದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.