ಜಾತಿ ಸಮಾವೇಶ ಮಾಡುವ ಸಿದ್ಧರಾಮಯ್ಯ ಡೋಂಗಿ ಜ್ಯಾತ್ಯತೀತ ನಾಯಕ: ಎಚ್.ಡಿ.ಕುಮಾರಸ್ವಾಮಿ


Team Udayavani, May 24, 2022, 4:09 PM IST

ಜಾತಿ ಸಮಾವೇಶ ಮಾಡುವ ಸಿದ್ಧರಾಮಯ್ಯ ಡೋಂಗಿ ಜ್ಯಾತ್ಯತೀತ ನಾಯಕ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಮ್ಮ ಪಕ್ಷದ ಬಗ್ಗೆ ಆರೇಳು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಡೋಂಗಿ ಜ್ಯಾತ್ಯತೀತ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದು ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್‍ ಅಭ್ಯರ್ಥಿ ಟಿ.ಎ.ಶರವಣ ನಾಮಪತ್ರ ಸಲ್ಲಿಸಿದ ನಂತರ ವಿಧಾನಸೌಧದಲ್ಲಿರುವ ಜೆಡಿಎಸ್‍ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಅವರು ಮಾಧ್ಯಮಗಳ ಜತೆ  ಮಾತನಾಡಿದರು.

ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಎಂದು ಬಿಂಬಿಸಲು ಪ್ರಯತ್ನ ಮಾಡಿದ್ದಾರೆ, ಅದನ್ನು ಇನ್ನೂ ಮುಂದುವರಿಸುತ್ತಿದ್ದಾರೆ ಎಂದರು.

ಈಚೆಗೆ ತುಮಕೂರಿನಲ್ಲೂ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅವರೇ ಜಾತಿವಾರು ಸಮಾವೇಶ ಮಾಡಿಕೊಂಡು ನಾವು ಜಾತ್ಯತೀತರು ಎಂದು ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಬಿಜೆಪಿ ಜತೆ ಸರಕಾರ ಮಾಡಿದಾಗಲೂ ಸಹ ಕೋಮು ಸಂಘರ್ಷಕ್ಕೆ ಅವಕಾಶ ಕೊಡಲಿಲ್ಲ. ಇಂದು ಸಣ್ಣ ಕೋಮು ಸಂಘರ್ಷ ಘಟನೆ ನಡೆಯಲಿಲ್ಲ. ಆದರೆ ಈಗ ಏನಾಗಿದೆ? ಅನೇಕ ತಿಂಗಳಿನಿಂದ ಸಮಾಜವನ್ನು ಒಡೆಯುವ ಘಟನೆಗಳು ನಡೆಯುತ್ತಿವೆ. ಇದಕ್ಕೆ ಕಾರಣ ಯಾರು? ಇಂಥ ಸರಕಾರ ಬರಲು ಕಾರಣ ಯಾರು? ಎನ್ನುವುದು ಜನತೆಗೆ ಗೊತ್ತಿದೆ ಎಂದು ಅವರು ಕಾಂಗ್ರೆಸ್ ನಾಯಕರ ಮೇಲೆ ಟೀಕಾ ಪ್ರಹಾರ ನಡೆಸಿದರು.

ಪಕ್ಷ ಉಳಿಸುವುದಕ್ಕೆ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದೆ. ಅದೇ ರೀತಿ ಕಾಂಗ್ರೆಸ್ ಜತೆಯಲ್ಲೂ ಸೇರಿ ಸರಕಾರ ಮಾಡಿದೆ. ಆದರೆ ಇವತ್ತಿಗೂ ಕಾಂಗ್ರೆಸ್ ನವರು ಇವತ್ತಿಗೂ ನಮ್ಮ ಪಕ್ಷವನ್ನು ಬಿಜೆಪಿ ಬಿ ಟೀಂ ಅಂತಾರೆ. ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಸರಕಾರದಲ್ಲಿ ಮಂತ್ರಿ ಆಗಿದ್ದರು. ಈಗ ಕಾಂಗ್ರೆಸ್ ಪಕ್ಷವೇ ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆ ಸರಕಾರ ಮಾಡಿದೆ. ಇದಕ್ಕೆ ಏನೆಂದು ಹೇಳಬೇಕು ಎಂದು ಕುಮಾರಸ್ವಾಮಿ ಅವರು ಕುಟುಕಿದರು.

ಮಾತಿಗೆ ಮುಂಚೆ ನಾವು ಜಾತ್ಯತೀತರು ಎಂದು ಹೇಳಿಕೊಳ್ಳುವ ನೀವು, ರಾಜಕಾರಣ ಮಾಡುತ್ತಿರುವುದು ಯಾರ ಹೆಸರಲ್ಲಿ? ಮಡಿವಾಳ, ಅಲ್ಪಸಂಖ್ಯಾತ ಸಮಾವೇಶ ಮಾಡ್ತೀರಾ? ಹಾಗಾದರೆ ಅದು ಏನು? ಐದು ವರ್ಷ ಸರ್ಕಾರ ನಡೆಸಿದಾಗ ಈ ಸಮುದಾಯದವರಿಗೆ ಏನು ಮಾಡಿದಿರಿ? ಕಾಂಗ್ರೆಸ್ ನವರು ಜ್ಯಾತ್ಯಾತೀತತೆ ಬಗ್ಗೆ ಚರ್ಚೆ ಮಾಡಲು ನೈತಿಕತೆ ಉಳಿಸಿಕೊಂಡಿಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ನಾನು ಯಾವ ಪಕ್ಷದ ಬಿ ಟೀಂ ಅಲ್ಲ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ವಹಿಸುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದನ್ನೂ ಓದಿ:ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ

ಬಿಜೆಪಿ ಸಾಮರಸ್ಯ ಹಾಳು ಮಾಡಲು ಸಂಘಟನೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಆ ಸಂಘಟನೆಗಳನ್ನು ಎದುರು ಹಾಕಿಕೊಂಡು ಹೋರಾಟ ನಡೆಸುತ್ತಿರುವವರು ನಾವು. ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಬಂದಾಗ ಕಾಂಗ್ರೆಸ್ ನವರು ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡರು. ಆದರೂ ಪದೆಪದೇ ನಮ್ಮ ಪಕ್ಷದ ಬಗ್ಗೆ ಇವರು ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿ.ಎಂ.ಇಬ್ರಾಹಿಂ ಪಕ್ಷ ಬಿಟ್ಟ ಮೇಲೆ ನಮ್ಮ ಪಕ್ಷವನ್ನೇ ಮುಗಿಸಲು ಹೊರಟಿರಿ. ಆದರೂ ನಾವು ಸಾಯಲು ಬಿಡಲಿಲ್ಲ. ಮತ್ತೆ ಇಬ್ರಾಹಿಂ ವಾಪಸ್ ಬಂದ ಮೇಲೆ ಅಲ್ಲಿ ಡೌನ್ ಫಾಲ್ ಆಗ್ತಿದೆ. ಇಬ್ರಾಹಿಂ ಅವರ ಕಾಲ್ಗುಣವೇ ಅಂತಹದ್ದು ಎಂದರು.

ನಾಲ್ಕನೇ ಅಭ್ಯರ್ಥಿಗೆ ಕಾಂಗ್ರೆಸ್, ಬಿಜೆಪಿಗೆ ಸಂಖ್ಯೆ ಇಲ್ಲ: ನಾಲ್ಕನೇ ಅಭ್ಯರ್ಥಿಗೆ ಮೂರು ಪಕ್ಷಗಳಿಗೂ ನಂಬರ್ ಇಲ್ಲ. ಮೂರು ಪಕ್ಷಕ್ಕೆ ಹೋಲಿಕೆ ಮಾಡಿದರೆ ನಮ್ಮ ಮತಗಳು ಹೆಚ್ಚಿವೆ. ನಾವು ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ. ಆ ಪಕ್ಷಗಳು ಕೂಡ ಒಂದಿಷ್ಟು ಲೆಕ್ಕಾಚಾರ ಮಾಡುತ್ತಿದ್ದು, ನಾವು ಇಲ್ಲಿಯವರೆಗೆ ಯಾವುದೇ ಚರ್ಚೆಯನ್ನು ಯಾರ ಜೊತೆಯೂ ಮಾಡಿಲ್ಲ. ನಾಲ್ಕನೇ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ಅವರಿಗೂ ಇಲ್ಲ ಎಂದು ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ, ಪಕ್ಷದ ಅಭ್ಯರ್ಥಿ ಟಿ. ಎ.ಶರವಣ, ಮಾಜಿ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.