ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಸಮರ್ಥ
Team Udayavani, Aug 4, 2019, 3:03 AM IST
ಕೋಲಾರ: “ವಿಧಾನಸಭೆಯಲ್ಲಿ ಜನರ ಪರ ಧ್ವನಿಯೆತ್ತಲು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನನಗಿಂತಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚು ಸಮರ್ಥರು’ ಎಂದು ಮಾಜಿ ಸ್ವೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ. ತಾಲೂಕಿನ ಸುಗಟೂರು ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿ, “ಪ್ರತಿಪಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ಬಗ್ಗೆ ಯಾವ ಚರ್ಚೆಯೂ ನಡೆದಿಲ್ಲ. ಎಲ್ಲವೂ ಊಹಾಪೋಹ ಅಷ್ಟೇ. ಮೇಲ್ಮಟ್ಟದಲ್ಲಿ ಪಕ್ಷದ ನಾಯಕರು ಕುಳಿತುಕೊಂಡು ತೀರ್ಮಾನ ಮಾಡುತ್ತಾರೆ’ ಎಂದರು.
ಸಂವಿಧಾನಬದ್ಧವಾಗಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಅವರ ಅ ಧಿಕಾರವನ್ನು ಪ್ರಶ್ನಿಸಬಾರದು. ಅವರಿಗೆ ಏನು ಒಳ್ಳೆಯದು ಅನಿಸುತ್ತದೆಯೋ ಅದನ್ನು ಮಾಡಲಿ. ಮುಖ್ಯಮಂತ್ರಿ ಆಗಿರುವುದರಿಂದ ವರ್ಗಾವಣೆ ಮಾಡುವ ಅ ಧಿಕಾರ ಅವರಿಗಿದೆ. ಸರಿನೋ, ತಪ್ಪೋ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ. ನಾವ್ಯಾಕೆ ಆತುರ ಬಿದ್ದು ಮಾತನಾಡಬೇಕು ಎಂದು ಪ್ರಶ್ನಿಸಿದರು
ಸಂಪುಟ ವಿಸ್ತರಣೆಗೆ ಯಡಿಯೂರಪ್ಪ ಅವರಿಗೆ ಏನು ಕಷ್ಟ ಇದೆಯೋ ನಮಗೇನು ಗೊತ್ತು. ಬಹುಶ: ನಾನೊಬ್ಬನೇ ರಾಜ್ಯವನ್ನು ನಿಭಾಯಿಸಬಲ್ಲೆ ಎಂಬ ನಂಬಿಕೆ ಇರಬಹುದು. ಮಂತ್ರಿಮಂಡಲ ರಚನೆಯೂ ಆಗದಿರಬಹುದು. ಇದೂ ಒಂದು ಹೊಸ ಪ್ರಯೋಗ ಆಗುತ್ತದೆ, ನೋಡೋಣ.
-ರಮೇಶ್ ಕುಮಾರ್, ಮಾಜಿ ಸ್ವೀಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ