ಲೆಕ್ಕ ಕೊಡಿ ಅಂದರೆ ಬಾಯಿ ಮಾತಲ್ಲಿ ಹೇಳುತ್ತಾರೆ! ರಾಮುಲು ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
Team Udayavani, Jul 20, 2020, 5:15 PM IST
ಬೆಂಗಳೂರು: ಕೋವಿಡ್ ಚಿಕಿತ್ಸೆ ಸಂಬಂಧಿ ವೈದ್ಯಕೀಯ ಉಪಕರಣಗಳ ಖರೀದಿಯ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ. ಬಾಯಿ ಮಾತಿನಲ್ಲಿ ಹೇಳಿದರೆ ಆಗುವುದಿಲ್ಲ. ದಾಖಲೆ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಸಂಬಂಧಿ ವೈದ್ಯಕೀಯ ಉಪಕರಣಗಳ ಖರೀದಿಯ ಖರ್ಚು ವೆಚ್ಚದ ಲೆಕ್ಕ ಕೊಡಿ ಎಂದರೆ ಹೀಗೆ ಇವರು ಬಾಯಿ ಮಾತಿನಲ್ಲಿ ಕೊಟ್ಟರೆ ಆಗುತ್ತಾ? ಏನೇನು ಖರೀದಿ ಮಾಡಲಾಗಿದೆ, ಎಷ್ಟೆಷ್ಟು ಖರ್ಚು ಮಾಡಲಾಗಿದೆ ಎಂಬ ಲೆಕ್ಕ ಬೇಡವೇ ಎಂದು ಪ್ರಶ್ನಿಸಿದರು. ಇವರು ಬಾಯಿ ಮಾತಲ್ಲಿ ಹೇಳಿದರೆ ಹೇಗೆ? ದಾಖಲೆಗಳನ್ನು ತೋರಿಸಿಸಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಸವಾಲೆಸೆದರು.
ಅವ್ಯವಹಾರ ಆರೋಪ ಸಾಬೀತುಪಡಿಸಿದರೆ ರಾಜೀನಾಮೆ ನೀಡುತ್ತೇನೆಂಬ ಶ್ರೀರಾಮುಲು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಾಜೀನಾಮೆ ಕೊಡಬೇಕಿದ್ದಿದ್ರೆ ಇವರು ಯಾಕೆ ಇಲ್ಲಿ ಇರಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ