ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವುದು ಬೇಡ: ಸಿದ್ದರಾಮಯ್ಯ ಆಕ್ರೋಶ
Team Udayavani, Nov 26, 2020, 3:14 PM IST
ಬೆಂಗಳೂರು: ಬಿಜೆಪಿಯಲ್ಲಿ ಎಲ್ಲರೂ ಒಂದಾಗಿದ್ದಾರೆಯೇ ? ಹಾಗಿದ್ದಲ್ಲಿ ಎರಡೆರೆಡು ಕಡೆ ಸಭೆ ನಡೆಸುವ ಅನಿವಾರ್ಯತೆ ಏನಿತ್ತು ? ಇದನ್ನು ಬಹಳ ಗಟ್ಟಿಯಾದ ಮಡಿಕೆ ಅನ್ನಬೇಕಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಒಡೆದ ಮನೆ ಎಂದು ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಒಂದು ಕಡೆ ಜಾರಕಿಹೊಳಿ ಮೀಟಿಂಗ್ ನಡೆಸಿದರೇ, ಮತ್ತೊಂದೆಡೆ ರೇಣುಕಾಚಾರ್ಯ ಸಭೆ ಸೇರಿದ್ದಾರೆ. ಇದು ಯಾರ ಮನೆ ಒಡೆದಿದೆ ಎಂಬುದನ್ನು ಸೂಚಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಮಾಹಿತಿ ಮೇಲೆ ಸಿಎಂ ಬದಲಾಗುತ್ತಾರೆ ಎಂದಿದ್ದೆ. ಆದರೀಗ ಅವರೇ ಉಳಿದುಕೊಳ್ಳುತ್ತಾರೆ ಎನ್ನುತ್ತಿದ್ದಾರೆ. ಆದರೇ ಯಾವುದೇ ಕೆಲಸ ಕೂಡ ಮಾಡುತ್ತಿಲ್ಲ. ಕೆಲಸ ಮಾಡುವವರು ಸಿಎಂ ಆಗಲಿ ಎಂದರು.
ಇದನ್ನೂ ಓದಿ: ಚಿಕ್ಕಮಗಳೂರು : ಬಾಬಬುಡನ್ ಗಿರಿಯಲ್ಲಿ ದತ್ತಪಾದುಕೆ ದರ್ಶನ ಪಡೆದ ಮಾಲಾಧಾರಿಗಳು
ಜಾತಿ ಗಣತಿ ತಾರ್ಕಿಕ ಅಂತ್ಯ ವಿಚಾರವಾಗಿ ಮಾತನಾಡಿ, ಜಯಪ್ರಕಾಶ್ ಕೇವಲ ರಿಪೋರ್ಟ್ ಕೊಡುತ್ತಾರೆ. ಆದರೆ ಸರ್ಕಾರ ಅದನ್ನ ಸ್ವೀಕರಿಸುವ ಕೆಲಸ ಮಾಡುತ್ತಿಲ್ಲ. ವರದಿ ಏನಿದೆ ಎಂಬುದು ನನಗೂ ತಿಳಿದಿಲ್ಲ.
ಸ್ವಾತಂತ್ರ್ಯ ಬಂದು 74 ವರ್ಷ ಆಯಿತು. ಯಾರ್ಯಾರು ಎಷ್ಟಿದ್ದಾರೆ ಎಂಬುದು ನೋಡಬೇಕಲ್ಲವೇ ? ಅದಕ್ಕಾಗಿ 160 ಕೋಟಿ ಖರ್ಚು ಮಾಡಿದ್ದೇವೆ. ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವುದು ಬೇಡ. ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು ಎನ್ನುವುದು ಬಿಜೆಪಿ ನೀತಿ. ಜಾತಿ ಗಣತಿ ಸರ್ಕಾರ ಒಮ್ಮೆ ಪರಿಶಿಲನೆ ಮಾಡಲಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಉಪಚುನಾವಣೆಗೆ ಸ್ಪರ್ಧಿಸಲು ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ : ಸತೀಶ್ ಜಾರಕಿಹೊಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು