ವಿಮ್ಸ್ ಪ್ರಕರಣಕ್ಕೆ ಸರ್ಕಾರವೇ ಹೊಣೆ: ಸಿದ್ದರಾಮಯ್ಯ
Team Udayavani, Sep 15, 2022, 9:16 PM IST
ವಿಧಾನಸಭೆ: ಬಳ್ಳಾರಿಯ ವಿಮ್ಸ್ನಲ್ಲಿ ಮೂವರು ಮೃತಪಟ್ಟ ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಬಳ್ಳಾರಿಯ ವಿಮ್ಸ್ನಲ್ಲಿ ವಿದ್ಯುತ್ ಕೊರತೆಯಿಂದ ವೆಂಟಿಲೇಟರ್ ಕೆಲಸ ಮಾಡದೆ ಮೂವರು ಅಮಾಯಕರು ಪ್ರಾಣ ತೆತ್ತಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ಕೊಡಬೇಕು. ಘಟನೆಗೆ ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಹೊಣೆ ಹೊರಬೇಕೆಂದು ಆಗ್ರಹಿಸಿದರು.
ಸಿದ್ದರಾಮಯ್ಯ ನೀಡಿದ್ದ ನೋಟಿಸ್ನಲ್ಲಿ ಇದು ಸರ್ಕಾರಿ ಪ್ರಾಯೋಜಿತ ಕೊಲೆ ಎಂಬ ಪದ ಬಳಕೆಗೆ ಕಾನೂನು ಸಚಿವ ಮಾಧುಸ್ವಾಮಿ, ಉಸ್ತುವಾರಿ ಸಚಿವ ಶ್ರೀರಾಮುಲು ಆಕ್ಷೇಪ ವ್ಯಕ್ತಪಡಿಸಿದರು. ಇದು ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಚಕಮಕಿಗೂ ಕಾರಣವಾಯಿತು.
ವಿದ್ಯುತ್ ಕೊರತೆ ಇಲ್ಲ, ಜನರೇಟರ್ ಕೆಲಸ ಮಾಡುತ್ತಿತ್ತು ಎಂದು ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಆದರೂ ಪ್ರಕರಣದ ತನಿಖೆ ಮಾಡಿಸಲಾಗುವುದು, ಸರ್ಕಾರದ ವೈಫಲ್ಯ ಇದ್ದರೆ ಪರಿಹಾರದ ಬಗ್ಗೆ ಪರಿಶೀಲಿಸುವುದಾಗಿ ಮಾಧುಸ್ವಾಮಿ ಭರವಸೆ ನೀಡಿದರು.
ಸರ್ಕಾರದ ಪರ ಉತ್ತರ ನೀಡಿದ ಶ್ರೀರಾಮುಲು, ಪ್ರಕರಣಕ್ಕೆ ವಿದ್ಯುತ್ ಪೂರೈಕೆ ಸಮಸ್ಯೆ ಕಾರಣವಲ್ಲ ಎಂದರು, ಇದಕ್ಕೆ ಸಿಟ್ಟಾದ ಸಿದ್ದರಾಮಯ್ಯ, ಸಾವಿನಲ್ಲಿ ಚೆಲ್ಲಾಟ ಆಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ವೈಫಲ್ಯ ಇದ್ದರೆ ತನಿಖೆ ನಡೆಸೋಣ. ಆದರೆ, ಸರ್ಕಾರಿ ಪ್ರಾಯೋಜಿತ ಕೊಲೆ ಎಂದರೆ ಹೇಗೆ ಎಂದು ಶ್ರೀರಾಮುಲು ಪ್ರಶ್ನಿಸಿದರು.
ಅದಕ್ಕೆ ಸಿದ್ದರಾಮಯ್ಯ, ಹೌದು, ಅವರ ಸಾವಿಗೆ ಸರ್ಕಾರವೇ ಕಾರಣ ಎಂದು ವಾದಿಸಿದರು. ಸ್ಪೀಕರ್ ಮಧ್ಯಪ್ರವೇಶಿಸಿ ತನಿಖೆ ನಡೆಸುವುದಾಗಿ ಸರ್ಕಾರ ಹೇಳಿದೆ. ವರದಿ ಬರಲಿ ಎಂದು ವಿಷಯಕ್ಕೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್