ಮತ್ತೆ ಬಾದಾಮಿಯಿಂದಲೇ ಸಿದ್ದರಾಮಯ್ಯ ಸ್ಪರ್ಧೆ?: ಪಾದಯಾತ್ರೆಯಿಂದ ಶುರುವಾಗುತ್ತಾ ತಯಾರಿ?
Team Udayavani, Jul 23, 2022, 4:00 PM IST
ಬಾಗಲಕೋಟೆ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬರುವ ಆಗಸ್ಟ್ 9, 10, 11 ರಂದು ಮೂರು ದಿನಗಳ ಕಾಲ ಬಾದಾಮಿಯಿಂದ ಬಾಗಲಕೋಟೆ ವರೆಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ಶಾಸಕ ಸಿದ್ಧರಾಮಯ್ಯ ಅವರು ಪಾದಯಾತ್ರೆ ಮಾಡಲಿದ್ದಾರೆ.
ಕಳೆದ 4 ವರ್ಷಗಳ ಕಾಲ ತಮ್ಮ ಅವಧಿಯಲ್ಲಿ ಬಾದಾಮಿ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ತಂದಿದ್ದು, ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಬಹುತೇಕ ಗ್ರಾಮೀಣ ಭಾಗದವರಿಗೆ ಮತ್ತು ಮತಕ್ಷೇತ್ರದ ಜನರ ಬಳಿಗೆ ಹೋಗಿ ಭೇಟಿಯಾಗಲಿದ್ದಾರೆ. ಮೂರು ದಿನಗಳ ಕಾಲ ರೂಟ್ ಮ್ಯಾಪ್ ತಯಾರಿಸಲು ಸೂಚಿಸಿದ್ದಾರೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ, ನನ್ನದು ಸಲಹೆ ಮಾತ್ರ: ಯಡಿಯೂರಪ್ಪ
ಬರುವ 2023 ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದಿಲ್ಲ ಎಂಬ ಚರ್ಚೆ ನಡೆದಿರುವ ಬೆನ್ನಲ್ಲೆ ಸಿದ್ದರಾಮೋತ್ಸವ ಮತ್ತು ಪಾದಯಾತ್ರೆ ಮಾಡುವ ಮೂಲಕ ಪುನಃ ಬಾದಾಮಿಯಿಂದಲೇ ಸ್ಪರ್ಧಿಸಲು ವೇದಿಕೆ ಸಿದ್ದಪಡಿಸುತ್ತಿದ್ದಾರೆ. ಇನ್ನೊಂದು ಬಾರಿ ಬಾದಾಮಿಯಿಂದ ಸ್ಪರ್ಧಿಸಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂಬುದೇ ಬಾದಾಮಿ ಮತಕ್ಷೇತ್ರದ ಜನರ ಆಶಯವಾಗಿದೆ.
-ವರದಿ: ಮಹಾಂತಯ್ಯ ಹಿರೇಮಠ ಕುಳಗೇರಿ ಕ್ರಾಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ