ಚಾಮರಾಜನಗರದಲ್ಲಿ 3 ಜನ ಸತ್ತಿಲ್ಲ, 28 ಮಂದಿ ಸಾವನ್ನಪ್ಪಿದ್ದಾರೆ : ಸಿದ್ದರಾಮಯ್ಯ
Team Udayavani, May 5, 2021, 1:39 PM IST
ಬೆಂಗಳೂರು : ಚಾಮರಾಜನಗರದಲ್ಲಿ 28 ಜನ ಸತ್ತಿದ್ದಾರೆ. ಆದ್ರೆ 3 ಜನ ಸತ್ತಿದ್ದಾರೆ ಎಂದು ಸುಧಾಕರ್ ಹೇಳುತ್ತಿರುವುದು ಶುದ್ದ ಸುಳ್ಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ನಿನ್ನೆ ನಾನು ಚಾಮರಾಜನಗರಕ್ಕೆ ಭೇಟಿ ನೀಡಿದಾಗ ಆಸ್ಪತ್ರೆ ಡೀನ್ ಮತ್ತು ಜಿಲ್ಲಾಧಿಕಾರಿ ಆಕ್ಸಿಜನ್ ಕೊರತೆ ಬಗ್ಗೆ ಒಪ್ಪಿಕೊಂಡಿದ್ದಾರೆ. ಹೀಗಾಗಿ 3 ಮಂದಿಯಲ್ಲ 28 ಮಂದಿ ಮೃತರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜನಗರ ಆಸ್ಪತ್ರೆಯಲ್ಲಿ 350 ಆಕ್ಸಿಜನ್ ಬೇಕಿತ್ತು. ಆದರೆ ಕೇವಲ 150 ಸಿಲೆಂಡರ್ ಸಪ್ಲೈ ಆಗಿತ್ತು. ಭಾನುವಾರ ಮಧ್ಯಾಹ್ನ ಕೊರತೆಯಾಗಿ ದುರ್ಘಟನೆ ನಡೆದಿದೆ ಎಂದರು.
ಇನ್ನು ಕೂಡಲೇ ಚಾಮರಾಜನಗರ ಜಿಲ್ಲೆಗೆ ಅಗತ್ಯ ಇರುವ ಆಕ್ಸಿಜನ್ ಒದಗಿಸಲು ಸೂಚಿಸಿದ್ದೇನೆ. ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಅಂತಾ ಹೇಳಿದ್ದೇನೆ. ಚಾಮರಾಜ ನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಮಾಡಲು ನಾನು ಒತ್ತಾಯಿಸಿದ್ದೇನೆ. ನ್ಯಾಯಾಂಗ ತನಿಖೆಗೆ ಸರ್ಕಾರ ಒಪ್ಪಿದೆ. ತನಿಖೆಯಿಂದ ಸತ್ಯ ಹೊರಬರುತ್ತೆ ಅಂತಾ ಆಶಾಭಾವನೆ ಇದೆ. ಸತ್ಯ ಹೊರ ಬಂದ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದರು.
ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್. ಒಳ್ಳೆಯದನ್ನೇ ಮಾಡಿದ್ದಾರೆ. ಆದರೆ ರಾಷ್ಟ್ರೀಯ ಯುವ ಮೋರ್ಚ ಅಧ್ಯಕ್ಷರಾಗಿ ಅಷ್ಟಕ್ಕೆ ಸೀಮಿತವಾಗಬಾರದು. ಸೂರ್ಯ ಮುಂದಾಳತ್ವ ವಹಿಸಿ ರಾಜ್ಯದ ಸಂಸದ ನಿಯೋಗ ಪ್ರಧಾನಿ ಬಳಿ ಕೊಂಡೋಯ್ದು, ಆಕ್ಸಿಜನ್ ಬೇಡಿಕೆ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ