ಸಿದ್ದರಾಮಯ್ಯ ಸಿಎಂ ಆಗಬೇಕು: ಬಿ.ಸಿ.ಪಾಟೀಲ್
Team Udayavani, May 26, 2019, 3:05 AM IST
ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬುದು ರಾಜ್ಯದ ಜನತೆಯ ಆಶಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರಾಮಾಣಿಕ ಹಾಗೂ ದಕ್ಷ ರಾಜಕಾರಣಿ.
ಅವರು ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಉಳಿಯುತ್ತದೆ ಎಂದರು. “ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಆದರೆ, ಸಿಗಲಿಲ್ಲ. ಮೂರು ಬಾರಿ ಶಾಸಕನಾಗಿ ಹಿರಿಯನಿದ್ದೇನೆ. ನಾನು, ರಾಜಕೀಯವಾಗಿ ಸನ್ಯಾಸಿ ಅಲ್ಲ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಲಿಂಗಾಯಿತರನ್ನು ಕಡೆಗಣಿಸಲಾಗಿದೆ. ಜೆ.ಎಚ್.ಪಟೇಲ್, ಎಸ್.ಆರ್.ಬೊಮ್ಮಾಯಿ, ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಅವರಿಗೆ ಅಧಿಕಾರ ತಪ್ಪಿಸಲಾಯಿತು.
ಅದರಿಂದ ಆ ಸಂದರ್ಭದಲ್ಲಿ ಆಯಾ ಪಕ್ಷಗಳ ಕಥೆ ಏನಾಯಿತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ. ಅಲ್ಲಿಯವರನ್ನು ಕಡೆಗಣಿಸಿದ್ದೇ ಇದಕ್ಕೆ ಕಾರಣ ಎಂದು ಹೇಳಿದರು.
ಬಿಜೆಪಿಯವರು ನಿಮ್ಮನ್ನು ಸಂಪರ್ಕಿಸಿದ್ದಾರಾ ಎಂಬ ಪ್ರಶ್ನೆಗೆ, “ನನ್ನನ್ನು ಯಾವ ನಾಯಕರೂ ಸಂಪರ್ಕ ಮಾಡಿಲ್ಲ. ಮುಂದೆ ನೋಡೋಣ ಏನಾಗುತ್ತದೆ’ ಅಂತ ತಿಳಿಸಿದರು.
ಇದೇ ವೇಳೆ, ರಮೇಶ್ ಜಾರಕಿಹೊಳಿ ಅವರನ್ನು ರಹಸ್ಯ ಸ್ಥಳದಲ್ಲಿ ಭೇಟಿ ಮಾಡಿರುವ ವಿಚಾರವನ್ನು ಅವರು ಅಲ್ಲಗಳೆದರು. “ನಾನು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯೇ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು