ಕಿಂಗ್ಪಿನ್ ಬಂಧನದವರೆಗೂ ಹೋರಾಟ: ಸಿದ್ದು
Team Udayavani, Jul 8, 2022, 6:58 AM IST
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದ ಕಿಂಗ್ಪಿನ್ಗಳನ್ನು ಬಂಧಿಸಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸು ವವರೆಗೆ ನಮ್ಮ ಹೋರಾಟ ಮುಂದುವರಿ ಯಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆಸಿದ ಬಳಿಕ ಮಾತನಾಡಿದ ಅವರು, ಹಗರಣ ದಲ್ಲಿ ಅಧಿಕಾರಿಗಳು, ಸಚಿವರು ಭಾಗಿಯಾಗಿದ್ದಾರೆ ಎಂದು ಸದನದಲ್ಲೇ ಹೇಳಿದ್ದೆವು. 300ಕ್ಕೂ ಹೆಚ್ಚಿನ ಜನರ ಬಳಿ ಹಣ ಪಡೆದು, ಒಎಂಆರ್ ಶೀಟ್ ತಿದ್ದಲಾಗಿದೆ. ನೇಮಕಾತಿ ಮುಖ್ಯಸ್ಥ ಅಮೃತ್ ಪೌಲ್ ಕಚೇರಿಯಲ್ಲಿಯೇ ಈ ಕೆಲಸ ಆಗಿದ್ದು, ಮಂತ್ರಿಗಳು ಹಾಗೂ ಸರಕಾರದ ಕುಮ್ಮಕ್ಕು ಇಲ್ಲದೆ ತಿದ್ದಲು ಸಾಧ್ಯವಿಲ್ಲ ಎಂದರು.
ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿರುವುದರಿಂದ ಅಮೃತ್ ಪೌಲ್ ಬಂಧನವಾಗಿದೆ. ದೊಡ್ಡ ಜಾಲ ಇದರಲ್ಲಿದ್ದು ಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು ಎಲ್ಲರಿಗೂ ಪಾಲು ಹೋಗಿದೆ. ಪ್ರಕರಣದ ಕಿಂಗ್ಪಿನ್ಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಸಚಿವ ಅಶ್ವತ್ಥ ನಾರಾಯಣ ಅವರು ಹೊರಟಿದ್ದಾರೆ. ಹೀಗಾಗಿ ನ್ಯಾಯಾಂಗ ತನಿಖೆ ನಡೆಸಲೇಬೇಕು ಎಂದು ಆಗ್ರಹಿಸಿದರು.
ಡಿ.ಕೆ.ಶಿವಕುಮಾರ್ ಮಾತನಾಡಿ, ಹಗರಣದಲ್ಲಿ ಸಿಎಂ ಕಚೇರಿಯಿಂದ ಹಿಡಿದು ಗೃಹ ಸಚಿವಾಲಯ, ಪೊಲೀಸ್ ಅಧಿಕಾರಿಗಳ ಕಚೇರಿಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ಸರಕಾರ ಎಲ್ಲವನ್ನೂ ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಹೀಗಾಗಿ ಪ್ರಕರಣದ ಎಲ್ಲ ಬಂಧಿತರಿಂದ ಸೆಕ್ಷನ್ 164 ಪ್ರಕಾರ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್