ಸುಧಾಕರ್ ನನಗೆ ಪಾಠ ಹೇಳಿಕೊಟ್ಟರೆ ಹೇಗೆ? ಸ್ವಲ್ಪವಾದರೂ ಉಪಕಾರ ಸ್ಮರಣೆ ಇರಬೇಕು: ಸಿದ್ದರಾಮಯ್ಯ
Team Udayavani, Jul 24, 2020, 2:37 PM IST
ಬೆಂಗಳೂರು: ಕೆ. ಸುಧಾಕರ್ ಅವರು ಮಂತ್ರಿಯಾಗಿ ಎಷ್ಟು ವರ್ಷ ಆಯಿತು. ನಾನು ಮೊದಲ ಬಾರಿಗೆ ಮಂತ್ರಿಯಾಗಿದ್ದು ಯಾವಾಗ. ಅವರಿಗೆ ಸ್ವಲ್ಪ ಉಪಕಾರ ಸ್ಮರಣೆ ಇರಬೇಕು. ನಾನು ರಾಜ್ಯ ಮಂತ್ರಿ, ಸಂಪುಟ ದರ್ಜೆ ಮಂತ್ರಿ, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದೇನೆ. 13 ಬಾರಿ ಬಜೆಟ್ ಮಂಡಿಸಿದ್ದೇನೆ. ಹೀಗಿರುವಾಗ ಸುಧಾಕರ್ ನನಗೇ ಪಾಠ ಹೇಳಿಕೊಟ್ಟರೆ ಹೇಗೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ತಮ್ಮ ನಿವಾಸದಲ್ಲಿಂದು ಭೇಟಿಯಾಗಿದ್ದ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿದ್ದರಾಮಯ್ಯ ಮಾತನಾಡಿದರು.
ಅಧಿಕಾರದ ಅಹಂನಿಂದ ಅವರು ಈ ರೀತಿ ಮಾತನಾಡುತ್ತಾರೆ. ಉಪಕಾರ ಸ್ಮರಣೆ ಮರೆತು ಬಾಯಿಗೆ ಬಂದಂತೆ ಮಾತನಾಡಬಾರದು. ಅಧಿಕಾರ ಬಂದ ಬಳಿಕ ಎಲ್ಲವನ್ನೂ ಮರೆಯಬಾರದು ಎಂದು ಸಚಿವ ಸುಧಾಕರ್ ಅವರನ್ನು ಟೀಕಿಸಿದರು.
ನಿನ್ನೆ ದಾಖಲೆಗಳ ಮೂಲಕ ನಾನು ಮಾತನಾಡಿದ್ದೇನೆ. ಅವರು ಏನಾದರೂ ದಾಖಲೆಗಳನ್ನು ಕೊಟ್ಟಿದ್ದಾರೆಯೇ? ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಮಾತನಾಡಿದ್ದಾರೆ. ನಾನು ಆಗ ಅಧಿಕಾರದಲ್ಲಿ ಇರಲಿಲ್ಲ. ಮುಖ್ಯಮಂತ್ರಿಯೂ ಆಗಿರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ? ಆ ಬಗ್ಗೆಯೂ ತನಿಖೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿ. ಯಾರು ತಪ್ಪು ಮಾಡಿದರೂ, ಯಾವಾಗ ತಪ್ಪು ಮಾಡಿದರೂ ತಪ್ಪೇ. ಎಂದರು.
ಸಚಿವರು ಪಾಂಡವರು, ಕೌರವರ ಬಗ್ಗೆ ಮಾತನಾಡಿದ್ದಾರೆ. ಅವರು ಕೌರವರು ಆಗಲಿಕ್ಕೂ ಲಾಯಕ್ಕಿಲ್ಲ. ಮಹಾಭಾರತದ ಪಾಂಡವರು, ಕೌರವರ ವಿಚಾರ ಈಗ ಏಕೆ. ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಈ ವಿಚಾರದಲ್ಲಿ ಎಳೆದು ತರುವುದೇಕೆ ಎಂದರು.
ಸಿದ್ದರಾಮಯ್ಯ ಈಸ್ ಸಿದ್ದರಾಮಯ್ಯ. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಆರ್.ಪಾಟೀಲ್ ಗೆ ಟಿಕೆಟ್ ವಿಚಾರವಾಗಿ ನನ್ನ ಬಳಿ ಚರ್ಚೆ ಮಾಡಿಲ್ಲ: ಎಂ.ಬಿ.ಪಾಟೀಲ್
ಸಿದ್ದರಾಮಯ್ಯ ಬೇಕಾದರೆ ಗೋ ಮಾಂಸ ತಿನ್ನಲಿ, ಆದರೆ ವಕೀಲಿಕೆ ಮಾಡಬೇಡಿ: ಛಲವಾದಿ ನಾರಾಯಣಸ್ವಾಮಿ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು