ಬಜೆಟ್ ಗೂ ಮೊದಲೇ ಸದನದಲ್ಲಿ ಫೈಟ್: ಸಿದ್ದರಾಮಯ್ಯ ಕಿವಿಗೆ ‘ಹೂ’ ಇಟ್ಟಿದ್ದೆ ಸಮಸ್ಯೆ
Team Udayavani, Feb 17, 2023, 10:31 AM IST
ಬೆಂಗಳೂರು: ಈ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಆರಂಭಕ್ಕೂ ಮೊದಲೇ ಸದನದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟ ಪ್ರಸಂಗ ನಡೆಯಿತು.
ತನ್ನ ಎರಡನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಓದಲು ಆರಂಭಿಸುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿವಿಗೆ ಇರಿಸಿದ ಹೂವಿನ ಪ್ರಸ್ತಾಪವಾಯಿತು.
ಸಿದ್ದರಾಮಯ್ಯ ಅವರು ಕೇಸರಿ ಬಣ್ಣದ ಹೂವನ್ನು ಕಿವಿಮೇಲೆ ಇರಿಸಿಕೊಂಡಿದ್ದು ಸದನದ ಗಮನ ಸೆಳೆಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, “ಇಷ್ಟು ದಿನ ಜನರ ಕಿವಿಗೆ ಇವರು ಹೂ ಇಟ್ಟಿದ್ದರು, ಈಗ ಜನರೇ ಅವರ ಕಿವಿಗೆ ಹೂ ಇಟ್ಟಿದ್ದಾರೆ, ಮುಂದೆಯೂ ಹಾಗೆ ಮಾಡುತ್ತಾರೆ’ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಧರ್ಮಸ್ಥಳ ಪಾದಯಾತ್ರಿಗಳಿಗೆ ಶೌರ್ಯ ವಿಪತ್ತು ತಂಡದಿಂದ ಸ್ವಚ್ಛತಾ ಪಾಠ
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಈ ಸರ್ಕಾರ ಕರ್ನಾಟಕದ ಏಳು ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದೆ ಎಂದರು.
ಈ ವೇಳೆ ಸದಸ್ಯರ ನಡುವೆ ಗದ್ದಲ ಆರಂಭವಾಗಿದ್ದು, ಬಜೆಟ್ ನಡುವೆ ಹೀಗೆಲ್ಲಾ ಹೇಳಬಹದೆ ಎಂದು ವಿಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
‘ಅವರು ಹೂ ಇಟ್ಟರೆ ನಮಗೆ ಸಮಸ್ಯೆಯಿಲ್ಲ’ ಎಂದು ಸಿಎಂ ಹೇಳಿದರೆ, ‘ಅವರು ಕೇಸರಿ ಹೂ ಇಟ್ಟಿದ್ದಕ್ಕೆ ನೀವು ಸಂತೋಷ ಪಡಬೇಕು’ ಎಂದು ಸ್ಪೀಕರ್ ಹೇಳಿದರು. ನಂತರ ಬಜೆಟ್ ಮಂಡನೆ ಆರಂಭವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ