ಶುಲ್ಕ ವಿಚಾರದ ಸಂಘರ್ಷವನ್ನು ತಕ್ಷಣ ನಿವಾರಿಸಿ: ಸಿಎಂ ಗೆ ಸಿದ್ದರಾಮಯ್ಯ ಪತ್ರ


Team Udayavani, Jun 15, 2021, 12:11 PM IST

ಶುಲ್ಕ ವಿಚಾರದ ಸಂಘರ್ಷವನ್ನು ತಕ್ಷಣ ನಿವಾರಿಸಿ: ಸಿಎಂ ಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ವಿದ್ಯಾರ್ಥಿಗಳ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೋವಿಡ್ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಕೋವಿಡ್ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30ರಷ್ಟು ವಿನಾಯತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ ಎಂದಿದ್ದಾರೆ.

ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮರ್ಥ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಜು. 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಜೂ.15 ರಿಂದಲೇ  ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.