ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿ ಆಚರಣೆಗೆ ತೀರ್ಮಾನ
Team Udayavani, Jul 13, 2022, 11:44 PM IST
ಬೆಂಗಳೂರು: ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ದಾವಣಗೆರೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಮುಂದೆ ವಿಧಾನಸಭೆ ಚುನಾವಣೆ ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೂ ಶಕ್ತಿ ತರಲಿದೆ ಎಂದು ಸಭೆಯಲ್ಲಿ ಮಾತನಾಡಿದ ನಾಯಕರು ಪ್ರತಿಪಾದಿಸಿದರು.
ಬಿಜೆಪಿಯವರು ಬೇಕಂತಲೇ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಹಾಗೂ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅದಕ್ಕೆ ತಲೆಕೆಡಿಸಿಕೊಳ್ಳದೆ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಒಗ್ಗೂಡಿ ಶ್ರಮ ವಹಿಸುವ ತೀರ್ಮಾನಕ್ಕೆ ಬರಲಾಯಿತು.
ಸಿದ್ದರಾಮಯ್ಯ ಅವರ ಹುಟ್ಟುಹಬ್ಬವು ಕಾಂಗ್ರೆಸ್ ಕಾರ್ಯಕ್ರಮವೇ. ಹೀಗಾಗಿ ಯಾರಿಗೂ ಯಾವುದೇ ಗೊಂದಲ ಬೇಡ ಎಂದು ಹೇಳಿದ ಸಂಸದ ಡಿ.ಕೆ.ಸುರೇಶ್, ಕಾರ್ಯಕ್ರಮ ವ್ಯಕ್ತಿ ಪೂಜೆಯಂತಾಗಬಾರದು.
ಸಿದ್ದರಾಮಯ್ಯನವರ ಸಾಧನೆ ಬಗ್ಗೆ ಎಲ್ಲರೂ ಮಾತನಾಡೋಣ. 40 ವರ್ಷ ಸಾರ್ಥಕ ರಾಜಕಾರಣ ಮಾಡಿ ಮುಖ್ಯಮಂತ್ರಿಗಳಾಗಿದ್ದಾಗ ಬಡವರ ಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇವೆಲ್ಲವನ್ನೂ ಕಾರ್ಯಕ್ರಮದ ಮೂಲಕ ತಿಳಿಸುವ ಕೆಲಸ ಆಗಬೇಕು ಎಂದರು.