ಸಿಎಂ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ; ಪೈಲಟ್ ಸಮಯಪ್ರಜ್ಞೆ, ಬಚಾವ್
Team Udayavani, Apr 24, 2017, 11:15 AM IST
ಬೆಂಗಳೂರು:ಎಚ್ ಎಎಲ್ ನಿಂದ ಶ್ರವಣಬೆಳಗೊಳಕ್ಕೆ ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರೀ ಅನಾಹುತದಿಂದ ಪಾರಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಎಚ್ ಎಎಲ್ ಏರ್ ಪೋರ್ಟ್ ನಿಂದ ಹೆಲಿಕಾಪ್ಟರ್ ಟೇಕಾಫ್ ಆಗುತ್ತಿದ್ದಂತೆಯೇ ದಿಢೀರ್ ಬಂದ ಹದ್ದು ಡಿಕ್ಕಿ ಹೊಡೆದಿತ್ತು. ಹೆಲಿಕಾಪ್ಟರ್ ನಲ್ಲಿ ಗೃಹ ಸಚಿವ ಪರಮೇಶ್ವರ್ ಕೂಡಾ ಪ್ರಯಾಣಿಸುತ್ತಿದ್ದರು.