ಬಿಜೆಪಿಗೆ ಧಮ್ ಇಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ಸಿದ್ದರಾಮಯ್ಯ
Team Udayavani, Dec 14, 2021, 2:37 PM IST
ಸುವರ್ಣಸೌಧ (ಬೆಂಗಳೂರು): ವಿಧಾನ ಪರಿಷತ್ ಚುನಾವಣೆಯಲ್ಲಿ 12 ಗೆಲ್ಲಬಹುದು ಎಂದು ನಮ್ಮ ನಿರೀಕ್ಷೆಯಿತ್ತು. 11 ಸ್ಥಾನಗಳನ್ನು ಗೆದ್ದಿದ್ದೇವೆ. ಚಿಕ್ಕಮಗಳೂರಲ್ಲಿ ಗಾಯತ್ರಿ ನಾಲ್ಕು ಮತಗಳ ಅಂತರದಿಂದ ಸೋಲಾಗಿದೆ. ಅದೊಂದು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಭಾವಿಸಿದ್ದೇವೆ. ಆ ಒಂದು ಕ್ಷೇತ್ರದಲ್ಲಿ ಮಾತ್ರ ನಿರೀಕ್ಷೆ ಹುಸಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಪರಿಷತ್ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಗಾಯತ್ರಿ ಅವರಿಗೆ ಕರೆ ಮಾತನಾಡಿದ್ದೇನೆ. ವಕೀಲರನ್ನು ಸಂಪರ್ಕ ಮಾಡಿ ಎಂದು ಹೇಳಿದ್ದೇವೆ. ನಾಮ ನಿರ್ದೇಶನ ಅಭ್ಯರ್ಥಿಗಳ ಮತದಾನ ಮಾಡುವ ವಿಚಾರಕ್ಕಾಗಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.
ಇದನ್ನೂ ಓದಿ:ಬೆಳಗಾವಿ: ಪಕ್ಷೇತರ ಲಖನ್ ಜಾರಕಿಹೊಳಿಗೆ ಭರ್ಜರಿ ಜಯ: ಬಿಜೆಪಿಗೆ ಭಾರೀ ಮುಖಭಂಗ
ಇದು ಜನರ ತೀರ್ಪಲ್ಲ. ಸ್ಥಳೀಯ ನಾಯಕರ ಅಭಿಪ್ರಾಯ. ಆದರೂ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂದರು.
ಬೆಳಗಾವಿಯಲ್ಲಿ ಬಿಜೆಪಿ ಸೋಲು ಕಂಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಗೆ ಧಮ್ ಇಲ್ಲ. ಪಕ್ಷೇತರರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಅವಕಾಶ ಮಾಡಿಕೊಟ್ಟಿದ್ದರು. ನಮ್ಮ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದಲ್ಲಿ ಜಯಗಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?