ಕಾಂಗ್ರೆಸ್ ಮೇಲೆ ಬಿಜೆಪಿ ಸರಕಾರ ಗದಾ ಪ್ರಹಾರ ಮಾಡಲು ಹೊರಟಿದೆ: ಸಿದ್ದರಾಮಯ್ಯ
Team Udayavani, Jun 10, 2020, 1:55 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿರುವ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದು, ಕಾಂಗ್ರೆಸ್ ಮೇಲೆ ಬಿಜೆಪಿ ಸರಕಾರ ಗದಾ ಪ್ರಹಾರ ಮಾಡಲು ಹೊರಟಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 14 ರ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಕೊಡದೇ ಇರುವುದು ಸರ್ಕಾರದ ದಮನಕಾರಿ ನೀತಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ 150 ಅಲ್ಲ, 60 ಜನರೂ ಸೇರುತ್ತಿರಲಿಲ್ಲ. ಕಾನೂನು ಪ್ರಕಾರ ನಾವು ಏನು ಕಾರ್ಯಕ್ರಮ ಮಾಡಬೇಕೋ ಅದನ್ನು ಮಾಡುತ್ತೀವಿ ಎಂದರು.
ಹಾಗಾದರೆ ಬಿಹಾರದಲ್ಲಿ, ಉತ್ತರ ಪ್ರದೇಶದಲ್ಲಿ ಅನುಮತಿ ಕೊಟ್ಟಿದ್ಯಾಕೆ? ಅಮಿತ್ ಶಾ ವರ್ಚುವಲ್ ರ್ಯಾಲಿಗೆ ಯಾಕೆ ಅನುಮತಿ ಕೊಟ್ರಿ? ಅವರಿಗೊಂದು ನೀತಿ, ನಮಗೊಂದು ನೀತಿಯಾ ಎಂದು ಪ್ರಶ್ನಿಸಿದ ಅವರು ಇವೆಲ್ಲ ಬಿಜೆಪಿ ಮಾಡುತ್ತಿರುವ ಷಡ್ಯಂತ್ರ ಎಂದು ಆರೋಪಿಸಿದರು.