ಅಂದು ನಾನು ಜೆಡಿಎಸ್ ವಿಚಾರದಲ್ಲಿ ಹೇಳಿದ್ದು ಈಗ ಸಾಬೀತಾಗಿದೆ: ಸಿದ್ದರಾಮಯ್ಯ
Team Udayavani, Dec 21, 2020, 1:02 PM IST
ಬೆಂಗಳೂರು: ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಂ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆಗ ನನ್ನ ಮೇಲೆ ಮುಗಿಬಿದ್ದರು. ಆದರೆ ಈಗ ಅದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ. ಅವರು ರೈತ ವಿರೋಧಿ ಕಾನೂನುಗಳಿಗೆ ಬೆಂಬಲ ಕೊಟ್ಟರು, ಸಭಾಪತಿ ತೆಗೆಯಲು ಬೆಂಬಲ ನೀಡುತ್ತಿದ್ದಾರೆ.ಈಗ ಬಿಜೆಪಿಯ ಬಿ ಟೀಂ ಎಂದು ಸಾಬೀತಾಯ್ತು ಎಂದರು.
ಹೊಸ ಪಕ್ಷ ಕಟ್ಟಿ ಎಂಬ ಕುಮಾರಸ್ವಾಮಿ ಸವಾಲಿಗೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್ ಲ್ಲಿ ಕಂಫರ್ಟಬಲ್ ಆಗಿದ್ದೀನಿ. ಪಕ್ಷದ ಹಿರಿಯ ನಾಯಕರಲ್ಲಿ ನಾನು ಒಬ್ಬ. ನಾನು ಕಾಂಗ್ರೆಸಿಗ, ಹೀಗಾಗಿ ನಾನೇಕೆ ಹೊಸ ಪಕ್ಷ ಕಟ್ಟಲಿ. ಕುಮಾರಸ್ವಾಮಿ ಹೇಳಿದ್ದನ್ನು ನಾನು ಮಾಡಬೇಕಾ? ನಾನು ಕೇಳಿದಕ್ಕೆ ಉತ್ತರ ಕೊಡಲ್ಲ, ಏನೇನೋ ಹೇಳುತ್ತಾನೆ, ಅದನ್ನು ನಾನು ಸ್ವೀಕರಿಸುವುದಿಲ್ಲ ಎಂದರು.
ಇದನ್ನೂ ಓದಿ:ಸಿಡಿದ ‘ವಿಲೀನ ಬಾಂಬ್’: ಲಿಂಬಾವಳಿ ಹೇಳಿಕೆ; ತಳ್ಳಿ ಹಾಕಿದ ಬಿಎಸ್ವೈ, ಎಚ್ಡಿಕೆ
ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ ಅವರು, ಒಳ್ಳೆಯ ಅಭ್ಯಾಸ ಈ ಸರ್ಕಾರಕ್ಕೆ ಇಲ್ಲ. ಕೆಟ್ಟ ಅಭ್ಯಾಸಗಳು ಮಾತ್ರ ಈ ಸರ್ಕಾರಕ್ಕೆ ಇದೆ. ಸರ್ಕಾರಕ್ಕೆ ನಾನು ಹಲವು ಪತ್ರ ಬರೆದಿದ್ದೇನೆ. ಒಂದಕ್ಕೂ ಉತ್ತರ ಬರಲಿಲ್ಲ. ವಿಸ್ಟ್ರನ್ ಕಂಪನಿ ಕಾರ್ಮಿಕರಿಗೆ ಕಿರುಕುಳ ಕೊಡುತ್ತಿದೆ. ಸಮಸ್ಯೆ ಬಗೆಹರಿಸಿ ಎಂದು ಪತ್ರ ಬರೆದಿದ್ದೆ. ಆದರೆ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿಲ್ಲ.ಜವಾಬ್ದಾರಿ ಇಲ್ಲದ ಸರ್ಕಾರ. ಸತ್ತ ಸರ್ಕಾರ ಇದು ಎಂದರು.
ಖಾಸಗಿ ಶಾಲೆಗಳು ಮತ್ತು ಪೋಷಕರ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಒಂದು ವರ್ಷ ಪರೀಕ್ಷೆ ಇಲ್ಲದೆ ಮಕ್ಕಳನ್ನು ಮುಂದಿನ ತರಗತಿಗೆ ಕಳುಹಿಸಿ ಕೊಡಿ ಅಂತ ಒತ್ತಾಯ ಮಾಡಿದೆ. ರವಿವಾರ ಪೋಷಕರು ಖಾಸಗಿ ಶಾಲೆಗಳ ಕಿರುಕುಳದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಖಾಸಗಿ ಶಾಲೆಗಳ ಜತೆ ಸರ್ಕಾರ ಶಾಮೀಲಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ