ಗಾಂಧಿ ಮಗ ಕುಡುಕನಾದ.. SR ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲಾಗದು : ಸಿದ್ದರಾಮಯ್ಯ
Team Udayavani, Jul 28, 2021, 5:25 PM IST
ಮೈಸೂರು: ಬಸವರಾಜ್ ಬೊಮ್ಮಾಯಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾ? ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಬಸವರಾಜ್ ಬೊಮ್ಮಾಯಿ ಹೆಸರು ಸೂಚಿಸಿರುವುದು ಯಡಿಯೂರಪ್ಪ. ಈ ಕಾರಣದಿಂದ ಸರ್ಕಾರದ ಮೇಲೆ ಬಿಎಸ್ ವೈ ಸಹಜವಾಹಿ ಹಿಡಿತಹೊಂದಿರುತ್ತಾರೆ. ಈಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯನಾ?. ಆದ್ರೆ ಈ ಕ್ಷಣದಲ್ಲೆ ನಾನು ಬೊಮ್ಮಯಿ ಬಗ್ಗೆ ಏನು ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಮುಖ್ಯ ಮಂತ್ರಿ ಬದಲಾದ್ರೆ ಎಲ್ಲವೂ ಬದಲಾಗುತ್ತಾ..? ಯಡಿಯೂರಪ್ಪ ಇಳಿದ್ದಿದ್ದಾರೆ. ಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ.? ಕೋಮುವಾದ ಹೊರಟುಹೋಗುತ್ತ.? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ.? ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಆದರಿಂದ ಬಿಜೆಪಿ ಸರ್ಕಾರದಿಂದ ಯಾವುದೇ ನೀರೀಕ್ಷೆ ಮಾಡೋದಿಲ್ಲ ಎಂದರು.
ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನ ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ. ಎಸ್.ಆರ್.ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮಾ ಗಾಂಧಿಯಾಗಲಿಲ್ಲ. ಅದೇ ರೀತಿ ಬೊಮ್ಮಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು