ಸಮಯಕ್ಕೆ ಎಫ್ ಐಆರ್ ಮಾಡದ ಕಾರಣ ಡಿಜೆ ಹಳ್ಳಿ ಗಲಭೆ ನಡೆದಿದೆ: ಸಿದ್ದರಾಮಯ್ಯ
Team Udayavani, Sep 2, 2020, 3:39 PM IST
ಬೆಂಗಳೂರು: ಆಗಸ್ಟ್ 11ರಂದು ಸಂಜೆ 7.45ಕ್ಕೆ ಪೊಲೀಸ್ ಠಾಣೆಗೆ ದೂರು ಕೊಡಲು ಬಂದಿದ್ದರು. ಆಗಲೇ ಎಫ್ ಐಆರ್ ಮಾಡಿಕೊಳ್ಳಬೇಕಿತ್ತು. ಆದರೆ ಎಫ್ ಐಆರ್ ಮಾಡಿಕೊಂಡಿಲ್ಲ. ಅದು ಇಷ್ಟು ದೊಡ್ಡ ಗಲಭೆಗೆ ಕಾರಣವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಗಲಭೆ ನಡೆದ ಡಿಜೆ ಹಳ್ಳಿಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಆಗಸ್ಟ್ 11 ರಂದು ಡಿಜೆಹಳ್ಳಿ ಗಲಭೆ ನಡೆದಿದೆ. ಆಗ ನಾನು ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿದ್ದೆ. ಏನಾಗಿದೆ ಎನ್ನುವುದು ಸರಿಯಾಗಿ ಗೊತ್ತಿರಲಿಲ್ಲ ಎಂದು ತಮ್ಮ ಭೇಟಿಯ ಉದ್ದೇಶದ ಬಗ್ಗೆ ಹೇಳಿದರು.
ಘಟನೆಯ ಬಗ್ಗೆಈಗ ಮ್ಯಾಜಿಸ್ಟ್ರೇಟ್ ತನಿಖೆ ಮಾಡ್ತಿದ್ದಾರೆ. ಆದರೆ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲೇ ತನಿಖೆಯಾಗಬೇಕು. ಇದೇ ನಮ್ಮಒತ್ತಾಯ, ಇದರಿಂದ ಹಿಂದೆ ಸರಿಯಲ್ಲ. ಸದನದಲ್ಲಿ ಇದರ ಬಗ್ಗೆ ಜೋರು ಮಾಡಿಯೇ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ತಡೆಗಟ್ಟಲು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ: ಪ್ರವೀಣ್ ಸೂದ್
ಯಾರೇ ತಪ್ಪಿದ್ದರೆ ಶಿಕ್ಷೆಯಾಗಲಿ. ಪೊಲೀಸರು 324 ಜನರನ್ನು ಬಂಧಿಸಿದ್ದಾರೆ. ಅದರಲ್ಲಿ ಕೆಲವರು ಅಮಾಯಕರು ಎಂದು ರಿಜ್ವಾನ್ ಹೇಳ್ತಿದ್ದಾರೆ. ಅಂತವರಿದ್ದರೆ ಅವರನ್ನು ಬಿಡಬೇಕು. ತಪ್ಪು ಮಾಡಿದವರು ಯಾರೇ ಇರಲಿ ಅವರಿಗೆ ಶಿಕ್ಷೆಯಾಗಲಿ ಎಂದರು.
ಘಟನೆಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಕೈವಾಡವೆಂಬ ವಿಚಾರಕ್ಕೆ ಮಾತನಾಡಿದ ಅವರು ಕಾಂಗ್ರೆಸ್ ಕಾರ್ಪೋರೇಟರ್ ಇದ್ದಾರೆ ಎಂದು ಏನಾದರೂ ತನಿಖೆಯಲ್ಲಿ ಗೊತ್ತಾಗಿದೆಯೇ? ಹಾಗೇನಾದರೂ ಇದ್ದರೆ ಶಿಕ್ಷೆ ಕೊಡಲಿ. ಅದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಆದರೆ ತನಿಖೆಗೂ ಮುನ್ನವೇ ಹೇಳುವುದಕ್ಕೆ ನಾನು ಬಿಜೆಪಿಯವರಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ